ಇತ್ತೀಚಿನ ಸುದ್ದಿ
ಕಾವೇರಿ ಅಚ್ಚುಕಟ್ಟು ಪ್ರದೇಶದಲ್ಲಿ ನೀರು ಕ್ಷೀಣ: ಹಾರಂಗಿ ಅಣೆಕಟ್ಟೆಯ ಮುಂಭಾಗದ ನದಿಯಲ್ಲಿ ಮೊಸಳೆ ಪ್ರತ್ಯಕ್ಷ
01/05/2026, 16:53
ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka@gmail.com
ಹಾರಂಗಿ ಅಣೆಕಟ್ಟೆಯಿಂದ 1 ಕಿಲೋಮೀಟರ್ ದೂರದಲ್ಲಿ ನದಿಗೆ ಅಡ್ಡಲಾಗಿ ಕಟ್ಟೆ ಒಂದು ಇದ್ದು ಇಲ್ಲಿಗೆ ಹಲವಾರು ಪ್ರವಾಸಿಗರು ಮತ್ತು ಕಾಲೇಜ್ ವಿದ್ಯಾರ್ಥಿಗಳು ಈಜಾಡುವುದರೊಂದಿಗೆ ಕುಡಿದು ಮೋಜು-ಮಸ್ತಿ ಮಾಡಿ ತೆರಳುತ್ತಿದ್ದರು. ಇದೀಗ ಅಲ್ಲಿ ದೊಡ್ಡ ಗಾತ್ರದ ಮೊಸಳೆಯೊಂದು ಕಾಣಿಸಿಕೊಂಡು ಭಯದ ವಾತಾವರಣ ಸೃಷ್ಟಿಸಿದೆ. ಮೊಸಳೆಯನ್ನು ಕಂಡು ಓಡಿ ಹೋಗಿ ಕೆಳಗೆ ಬಿದ್ದು ಕೆಲವು ವ್ಯಕ್ತಿಗಳು ಗಾಯಗೊಂಡಿರುವುದಾಗಿ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಹಾಗಾಗಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಈ ಕುರಿತು ಗಮನ ಹರಿಸಬೇಕು ಮತ್ತು
ಪ್ರವಾಸಿಗರು ಹಾಗೂ ಕಾಲೇಜು ವಿದ್ಯಾರ್ಥಿಗಳು ಮೋಜು ಮಸ್ತಿ ಮಾಡಲು ಬಂದು ಮೊಸಳೆ ಬಾಯಿಗೆ ಬಲಿಯಾಗದಂತೆ ಎಚ್ಚರಿಕೆ ವಹಿಸಬೇಕೆಂದು ತಿಳಿಸಿದ್ದಾರೆ.












