8:42 PM Friday1 - May 2026
ಬ್ರೇಕಿಂಗ್ ನ್ಯೂಸ್
ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ…

ಇತ್ತೀಚಿನ ಸುದ್ದಿ

ದೇಶದಲ್ಲೇ ಮೊದಲ ಬಾರಿಗೆ ಮಂಗಳೂರಿನಲ್ಲಿ ಧಾರ್ಮಿಕ ತ್ಯಾಜ್ಯ ವಿಲೇವಾರಿ ಅಭಿಯಾನ: 10 ದಿನಗಳಲ್ಲಿ 12 ಟನ್ ಸಂಗ್ರಹ!

01/05/2026, 20:39

ಮಂಗಳೂರು(reporterkarnataka.com): ಕಡಲನಗರಿ ಮಂಗಳೂರಿನಲ್ಲಿ ದೇಶದಲ್ಲೇ ಮೊದಲ ಬಾರಿಗೆ ಧಾರ್ಮಿಕ ತ್ಯಾಜ್ಯ ವಿಲೇವಾರಿಯ ವಿಶಿಷ್ಟ ಅಭಿಯಾನವೊಂದು ಯಶಸ್ವಿಯಾಗಿ ನಡೆದಿದೆ. ಕೇವಲ ಹತ್ತು ದಿನಗಳ ಅವಧಿಯಲ್ಲಿ ನಗರದಲ್ಲಿ ಸುಮಾರು ಹನ್ನೆರಡೂವರೆ ಟನ್ ಧಾರ್ಮಿಕ ತ್ಯಾಜ್ಯಗಳನ್ನು ಸಂಗ್ರಹಿಸಲಾಗಿದೆ.
ಈ ಅಭಿಯಾನದಡಿ ಕೇವಲ ತ್ಯಾಜ್ಯವನ್ನು ಸಂಗ್ರಹ ಮಾಡಿರುವುದು ಮಾತ್ರವಲ್ಲ ಅಲ್ಲದೆ, ದೇವರ ಫೋಟೋಗಳು, ವಿಗ್ರಹಗಳು, ಗಂಟೆಗಳು ಹಾಗೂ ದೀಪಗಳಂತಹ ಧಾರ್ಮಿಕ ವಸ್ತುಗಳಿಗೆ ಸಂಸ್ಕಾರಪೂರ್ವಕ ವಿದಾಯವನ್ನು ಸಹ ನೀಡಲಾಗಿದೆ.
ಮಂಗಳೂರಿನ ರಾಮಕೃಷ್ಣ ಮಠ, ರಾಮಕೃಷ್ಣ ಮಿಷನ್ ಮತ್ತು ಸ್ವಚ್ಛ ಮಂಗಳೂರು ಪ್ರತಿಷ್ಠಾನದ ಸಹಯೋಗದಲ್ಲಿ ಈ ಅಭಿಯಾನ ಮಾಡಲಾಗಿದೆ. ನಿರುಪಯುಕ್ತ ದೇವರ ಫೋಟೋಗಳು, ಗಂಟೆಗಳು ಹಾಗೂ ಮೂರ್ತಿಗಳನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವ ಉದ್ದೇಶದಿಂದ ಸಾರ್ವಜನಿಕರಿಗೆ ಕರೆ ನೀಡಲಾಗಿತ್ತು. ನಗರದ ಐದು ಪ್ರಮುಖ ಸ್ಥಳಗಳಲ್ಲಿ ಸಂಗ್ರಹಣಾ ಕೇಂದ್ರಗಳನ್ನು ಸ್ಥಾಪಿಸಲಾಗಿತ್ತು. ಸಾರ್ವಜನಿಕರು ಸ್ವಯಂಪ್ರೇರಿತರಾಗಿ ಪಾಲ್ಗೊಂಡಿದ್ದರಿಂದ ನಿರೀಕ್ಷೆಗೂ ಮೀರಿ ಹನ್ನೆರಡೂವರೆ ಟನ್ ಧಾರ್ಮಿಕ ತ್ಯಾಜ್ಯ ಸಂಗ್ರಹವಾಗಿದೆ.

*ತ್ಯಾಜ್ಯ ವಿಲೇವಾರಿಯಲ್ಲಿ ಸಿಕ್ಕಿದ್ದೇನು?:*
ಈ ಅಭಿಯಾನಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಸಂಗ್ರಹವಾದ ತ್ಯಾಜ್ಯದಲ್ಲಿ 15,000 ದೇವರ ಫೋಟೋ ಫ್ರೇಮ್‌ಗಳು, 2,500 ಕೆ.ಜಿ ಮೂರ್ತಿ ಮತ್ತು ಸ್ಮರಣಿಕೆಗಳು, 1,500 ಕೆ.ಜಿ ಕಾಗದ-ಪುಸ್ತಕಗಳು, 1,200 ಕೆ.ಜಿ ಮರುಬಳಕೆ ಅಸಾಧ್ಯವಾದ ವಸ್ತುಗಳು, 800 ಕೆ.ಜಿ ಕುಂಕುಮ-ಪ್ರಸಾದ, 700 ಕೆ.ಜಿ ಪ್ಲಾಸ್ಟಿಕ್, 500 ಕೆ.ಜಿ ಲೋಹದ ವಸ್ತುಗಳು ಹಾಗೂ 500 ಕೆ.ಜಿ ಮರದ ವಸ್ತುಗಳು ಸೇರಿವೆ.
ಹತ್ತು ಸಂಘಟನೆಗಳ 150ಕ್ಕೂ ಹೆಚ್ಚು ಸ್ವಚ್ಛತಾ ಕಾರ್ಯಕರ್ತರು ಈ ವಸ್ತುಗಳನ್ನು ವೈಜ್ಞಾನಿಕವಾಗಿ ವಿಂಗಡಿಸಿದರು. ವಿಂಗಡಣೆಯ ನಂತರ ಕಬ್ಬಿಣ, ಮರ, ಪ್ಲಾಸ್ಟಿಕ್, ಕಾರ್ಡ್‌ಬೋರ್ಡ್ ಮತ್ತು ಕಾಗದಗಳನ್ನು ಮರುಬಳಕೆಗೆ ಕಳುಹಿಸಿಕೊಡಲಾಯಿತು.
ಸಂಗ್ರಹವಾದ ಸಾಮಗ್ರಿಗಳಲ್ಲಿ ಬೆಳ್ಳಿ, ತಾಮ್ರ ಮತ್ತು ಹಿತ್ತಾಳೆಯಂತಹ ಬೆಲೆಬಾಳುವ ಲೋಹಗಳು ಪತ್ತೆಯಾಗಿದ್ದವು. ಪರಿಣಿತರ ನೆರವಿನಿಂದ ಈ ಲೋಹಗಳನ್ನು ಬೇರ್ಪಡಿಸಿ ಕರಗಿಸಿದಾಗ, ಸುಮಾರು ಒಂದು ಲಕ್ಷ ರೂಪಾಯಿ ಮೌಲ್ಯದ ಲೋಹಗಳು ಲಭಿಸಿದೆ. ಈ ಮೊತ್ತವನ್ನು, ಅಭಿಯಾನದ ಸಂದರ್ಭದಲ್ಲಿ ಸ್ವಯಂಸೇವಕರಿಗೆ ಊಟ ಮತ್ತಿತರ ಮೂಲಭೂತ ವ್ಯವಸ್ಥೆಗಳನ್ನು ಮಾಡಿಕೊಟ್ಟಿದ್ದ ಕದ್ರಿ ಮಂಜುನಾಥ ಸ್ವಾಮಿ ದೇವಸ್ಥಾನಕ್ಕೆ ಹಸ್ತಾಂತರಿಸಲಾಯಿತು.
ಪ್ರಾಯೋಗಿಕವಾಗಿ ಹಮ್ಮಿಕೊಂಡಿದ್ದ ಈ ಧಾರ್ಮಿಕ ತ್ಯಾಜ್ಯ ಸಂಗ್ರಹ ಅಭಿಯಾನವು ಸಂಪೂರ್ಣ ಯಶಸ್ವಿಯಾಗಿದೆ. ನಗರದ ಅಶ್ವಥ ಕಟ್ಟೆಗಳ ಬುಡದಲ್ಲಿ ಅಥವಾ ಮನೆಯ ಮೂಲೆಗಳಲ್ಲಿ ಅನಾಥವಾಗಿ ಬಿಸಾಡಲಾಗಿದ್ದ ಧಾರ್ಮಿಕ ವಸ್ತುಗಳಿಗೆ ಗೌರವಯುತ ವಿದಾಯ ಸಿಕ್ಕಿರುವುದು ಶ್ಲಾಘನೀಯ. ಮುಂದಿನ ದಿನಗಳಲ್ಲಿ ಈ ಅಭಿಯಾನವನ್ನು ಇನ್ನಷ್ಟು ವಿಸ್ತಾರವಾಗಿ ಮುಂದುವರಿಸಲು ಆಯೋಜಕರು ಯೋಜನೆ ಹಾಕಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು