2:31 PM Tuesday25 - August 2026
ಬ್ರೇಕಿಂಗ್ ನ್ಯೂಸ್
ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

ಇತ್ತೀಚಿನ ಸುದ್ದಿ

ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7 ಮಂದಿಗೆ ಗಾಯ

02/05/2026, 20:09

ಕೊಪ್ಪಳ(reporterkarnataka.com): ಧಾರವಾಡದಿಂದ ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಪ್ರಯಾಣಿಕರ ವಾಹನದ ಟೈರ್ ಬ್ಲಾಸ್ಟ್ ಆಗಿ ನಡುರಸ್ತೆಯಲ್ಲೇ ಪಲ್ಟಿಯಾಗಿದೆ. ಈ ದುರಂತದಲ್ಲಿ ಓರ್ವ ಸ್ಥಳದಲ್ಲೇ ಮೃತಪಟ್ಟರೆ ಏಳು ಜನ ಗಾಯಗೊಂಡಿದ್ದಾರೆ.
ಧಾರವಾಡದ 10 ಮಂದಿ ಭಕ್ತರ ಮನಸ್ಸಿನಲ್ಲಿ ಅಂಜನಾದ್ರಿಯ ಹನುಮನ ದರ್ಶನ ಪಡೆಯಬೇಕೆಂಬ ಅತೀವ ಹಂಬಲವಿತ್ತು. ಕ್ರೂಷರ್ ವಾಹನದಲ್ಲಿ ಹರಟೆ ಹೊಡೆಯುತ್ತಾ, ಸಂಭ್ರಮದಿಂದಲೇ ಅವರು ಅಂಜನಾದ್ರಿಯತ್ತ ಸಾಗುತ್ತಿದ್ದರು. ಆದರೆ, ವಿಧಿಯ ಆಟವೇ ಬೇರೆಯಾಗಿತ್ತು.
ಕೊಪ್ಪಳ ತಾಲೂಕಿನ ಬಹದ್ದೂರ್ ಬಂಡಿ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕ್ರೂಷರ್ ವಾಹನ ಚಲಿಸುತ್ತಿತ್ತು. ಇನ್ನೇನು ಅಂಜನಾದ್ರಿ ತಲುಪಲು ಕೆಲವೇ ಮೈಲುಗಳ ದೂರ ಬಾಕಿ ಇತ್ತು. ಅಷ್ಟರಲ್ಲಿ ಇಡೀ ಹೆದ್ದಾರಿಯೇ ನಡುಗುವಂತಹ ಭೀಕರ ಶಬ್ದವೊಂದು ಕೇಳಿಬಂತು!
ಬೆಂಕಿಯಂತಹ ಬಿಸಿಲಿನಲ್ಲಿ ಚಲಿಸುತ್ತಿದ್ದ ಕ್ರೂಷರ್ ವಾಹನದ ಟೈರ್ ಏಕಾಏಕಿ ಸ್ಫೋಟಗೊಂಡಿತ್ತು. ಕ್ಷಣಾರ್ಧದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ವಾಹನ ರಸ್ತೆಯಲ್ಲೇ ಪಲ್ಟಿಯಾಗಿ ಬಿದ್ದಿದೆ. ಹತ್ತೂ ಮಂದಿಯ ಕಿರುಚಾಟ, ಆಕ್ರಂದನ ನಡುವೆ ಏನಾಯ್ತು ಎಂದು ಯೋಚಿಸುವಷ್ಟರಲ್ಲಿ ದಿಕ್ಕಪಾಲಾಗಿ ಬಿದ್ದಿದ್ದ ಪ್ರಯಾಣಿಕರು.
ಈ ಭೀಕರ ಅಪಘಾತದಲ್ಲಿ ಓರ್ವ ದುರ್ದೈವಿ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ವಾಹನದಲ್ಲಿದ್ದ ಇಬ್ಬರು ಪ್ರಯಾಣಿಕರ ಸ್ಥಿತಿ ಅತ್ಯಂತ ಗಂಭೀರವಾಗಿದ್ದು, ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ.


ಅದೃಷ್ಟವಶಾತ್ ಕ್ರೂಷರ್‌ನಲ್ಲಿದ್ದ ಉಳಿದ ಏಳು ಮಂದಿ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಕೊಪ್ಪಳ ಗ್ರಾಮೀಣ ಪೊಲೀಸರು ಗಾಯಾಳುಗಳನ್ನು ತಕ್ಷಣವೇ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿದ್ದಾರೆ.
ಹನುಮನ ದರ್ಶನ ಪಡೆಯಬೇಕೆಂಬ ಭಕ್ತರ ಆಸೆ ಅರ್ಧ ದಾರಿಯಲ್ಲೇ ಕಮರಿ ಹೋಗಿದ್ದು, ಘಟನೆಯ ಮಾಹಿತಿ ತಿಳಿದು ಮೃತರ ಕುಟುಂಬದವರ ಗೋಳು ಮುಗಿಲು ಮುಟ್ಟಿದೆ.

ಇತ್ತೀಚಿನ ಸುದ್ದಿ

ಜಾಹೀರಾತು