4:53 PM Friday6 - February 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್…

ಇತ್ತೀಚಿನ ಸುದ್ದಿ

ದೇಗುಲ ಧ್ವಂಸ; ಮೈಸೂರು ಉಸ್ತುವಾರಿ ಸಚಿವರು ರಾಜೀನಾಮೆ ನೀಡಲಿ: ಮಾಜಿ ಸಚಿವ ಯು.ಟಿ.ಖಾದರ್ ಆಗ್ರಹ

15/09/2021, 21:27

ಮಂಗಳೂರು(reporterkarnataka.com):ರಾಜ್ಯದಲ್ಲಿ ದೇಗುಲಗಳನ್ನು ಕೆಡಹುವ ವಿಷಯ ವಿವಾದಕ್ಕೆ ಗುರಿಯಾಗುತ್ತಿದ್ದಂತೆ ಮಾಜಿ ಸಚಿವ ಯು.ಟಿ.ಖಾದರ್ ಎಂಟ್ರಿ ಕೊಟ್ಟಿದ್ದಾರೆ. ಜನರ ಭಾವನೆಗಳನ್ನು ಕೆಡವಿದವರು ಈಗ ದೇವಸ್ಥಾನ ಕೆಡವಿದ್ದಾರೆ ಎಂದು ಖಾದರ್ ಟೀಕಿಸಿದ್ದಾರೆ.

ಮಾಧ್ಯಮ ಜತೆ ಈ ಕುರಿತು ಮಾತನಾಡಿದ ಅವರು, ಬಿಜೆಪಿ ಸರಕಾರ ಸಂಸ್ಕೃತಿ ಕೆಡವುತ್ತೆ ಎನ್ನುವುದು ಮತ್ತೆ ಸಾಬೀತಾಗಿದೆ. ದೇವಸ್ಥಾನ ಕೆಡವಿದ ಬಗ್ಗೆ ಸರ್ಕಾರ ಯಾರನ್ನು ಜವಾಬ್ದಾರಿ ಮಾಡುತ್ತೆ. ದೇವಸ್ಥಾನದ ಇತಿಹಾಸ, ಅಲ್ಲಿನ ಶಿಲ್ಪಕಲೆ ಎಲ್ಲವೂ ಇವರಿಗೆ ಅರ್ಥವಾಗಿಲ್ವಾ..? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೈಸೂರು ಅಷ್ಟೇ ಅಲ್ಲ, ಇದು ಇಡೀ ದೇಶಕ್ಕೆ ದೊಡ್ಡ ಕಪ್ಪುಚುಕ್ಕೆ. ಇದರ ನೈತಿಕ ಹೊಣೆ ಹೊತ್ತು ಮೈಸೂರು ಉಸ್ತುವಾರಿ ಸಚಿವರು ರಾಜೀನಾಮೆ ನೀಡಲಿ. ಸರ್ಕಾರ ಆದೇಶ ಕೊಡುವಾಗ ಏಕೆ ಯೋಚನೆ ಮಾಡಿಲ್ಲ..? ಇದನ್ನು ಕೂತು ಚರ್ಚಿಸಿದ್ರೆ ಈ ಸಮಸ್ಯೆಗೆ ಪರಿಹಾರ ಸಿಗ್ತಾ ಇರ್ಲಿಲ್ವಾ..? ದೊಡ್ಡ ದೊಡ್ಡವರಿಗೆ ಬಿಜೆಪಿ ಸರ್ಕಾರ ಅಕ್ರಮ ಜಾಗ ಸಕ್ರಮ ಮಾಡಿ ಕೊಟ್ಟಿಲ್ವಾ..? ಹೀಗಿರುವಾಗ ದೇವಸ್ಥಾನದ ಜಾಗ ಸಕ್ರಮ ಮಾಡಲು ಸರ್ಕಾರಕ್ಕೆ ಏನು ತೊಂದರೆ…? ಇದು ಬಿಜೆಪಿ ಸರ್ಕಾರದ ಆಡಳಿತ ವೈಫಲ್ಯವನ್ನು ತೋರಿಸುತ್ತೆ ಎಂದು ಆರೋಪಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು