5:30 PM Wednesday25 - March 2026
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ

ಇತ್ತೀಚಿನ ಸುದ್ದಿ

ದೇಗುಲ ಧ್ವಂಸ; ಮೈಸೂರು ಉಸ್ತುವಾರಿ ಸಚಿವರು ರಾಜೀನಾಮೆ ನೀಡಲಿ: ಮಾಜಿ ಸಚಿವ ಯು.ಟಿ.ಖಾದರ್ ಆಗ್ರಹ

15/09/2021, 21:27

ಮಂಗಳೂರು(reporterkarnataka.com):ರಾಜ್ಯದಲ್ಲಿ ದೇಗುಲಗಳನ್ನು ಕೆಡಹುವ ವಿಷಯ ವಿವಾದಕ್ಕೆ ಗುರಿಯಾಗುತ್ತಿದ್ದಂತೆ ಮಾಜಿ ಸಚಿವ ಯು.ಟಿ.ಖಾದರ್ ಎಂಟ್ರಿ ಕೊಟ್ಟಿದ್ದಾರೆ. ಜನರ ಭಾವನೆಗಳನ್ನು ಕೆಡವಿದವರು ಈಗ ದೇವಸ್ಥಾನ ಕೆಡವಿದ್ದಾರೆ ಎಂದು ಖಾದರ್ ಟೀಕಿಸಿದ್ದಾರೆ.

ಮಾಧ್ಯಮ ಜತೆ ಈ ಕುರಿತು ಮಾತನಾಡಿದ ಅವರು, ಬಿಜೆಪಿ ಸರಕಾರ ಸಂಸ್ಕೃತಿ ಕೆಡವುತ್ತೆ ಎನ್ನುವುದು ಮತ್ತೆ ಸಾಬೀತಾಗಿದೆ. ದೇವಸ್ಥಾನ ಕೆಡವಿದ ಬಗ್ಗೆ ಸರ್ಕಾರ ಯಾರನ್ನು ಜವಾಬ್ದಾರಿ ಮಾಡುತ್ತೆ. ದೇವಸ್ಥಾನದ ಇತಿಹಾಸ, ಅಲ್ಲಿನ ಶಿಲ್ಪಕಲೆ ಎಲ್ಲವೂ ಇವರಿಗೆ ಅರ್ಥವಾಗಿಲ್ವಾ..? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೈಸೂರು ಅಷ್ಟೇ ಅಲ್ಲ, ಇದು ಇಡೀ ದೇಶಕ್ಕೆ ದೊಡ್ಡ ಕಪ್ಪುಚುಕ್ಕೆ. ಇದರ ನೈತಿಕ ಹೊಣೆ ಹೊತ್ತು ಮೈಸೂರು ಉಸ್ತುವಾರಿ ಸಚಿವರು ರಾಜೀನಾಮೆ ನೀಡಲಿ. ಸರ್ಕಾರ ಆದೇಶ ಕೊಡುವಾಗ ಏಕೆ ಯೋಚನೆ ಮಾಡಿಲ್ಲ..? ಇದನ್ನು ಕೂತು ಚರ್ಚಿಸಿದ್ರೆ ಈ ಸಮಸ್ಯೆಗೆ ಪರಿಹಾರ ಸಿಗ್ತಾ ಇರ್ಲಿಲ್ವಾ..? ದೊಡ್ಡ ದೊಡ್ಡವರಿಗೆ ಬಿಜೆಪಿ ಸರ್ಕಾರ ಅಕ್ರಮ ಜಾಗ ಸಕ್ರಮ ಮಾಡಿ ಕೊಟ್ಟಿಲ್ವಾ..? ಹೀಗಿರುವಾಗ ದೇವಸ್ಥಾನದ ಜಾಗ ಸಕ್ರಮ ಮಾಡಲು ಸರ್ಕಾರಕ್ಕೆ ಏನು ತೊಂದರೆ…? ಇದು ಬಿಜೆಪಿ ಸರ್ಕಾರದ ಆಡಳಿತ ವೈಫಲ್ಯವನ್ನು ತೋರಿಸುತ್ತೆ ಎಂದು ಆರೋಪಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು