5:42 PM Sunday17 - May 2026
ಬ್ರೇಕಿಂಗ್ ನ್ಯೂಸ್
ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ…

ಇತ್ತೀಚಿನ ಸುದ್ದಿ

ದೇಗುಲ ಧ್ವಂಸ; ಮೈಸೂರು ಉಸ್ತುವಾರಿ ಸಚಿವರು ರಾಜೀನಾಮೆ ನೀಡಲಿ: ಮಾಜಿ ಸಚಿವ ಯು.ಟಿ.ಖಾದರ್ ಆಗ್ರಹ

15/09/2021, 21:27

ಮಂಗಳೂರು(reporterkarnataka.com):ರಾಜ್ಯದಲ್ಲಿ ದೇಗುಲಗಳನ್ನು ಕೆಡಹುವ ವಿಷಯ ವಿವಾದಕ್ಕೆ ಗುರಿಯಾಗುತ್ತಿದ್ದಂತೆ ಮಾಜಿ ಸಚಿವ ಯು.ಟಿ.ಖಾದರ್ ಎಂಟ್ರಿ ಕೊಟ್ಟಿದ್ದಾರೆ. ಜನರ ಭಾವನೆಗಳನ್ನು ಕೆಡವಿದವರು ಈಗ ದೇವಸ್ಥಾನ ಕೆಡವಿದ್ದಾರೆ ಎಂದು ಖಾದರ್ ಟೀಕಿಸಿದ್ದಾರೆ.

ಮಾಧ್ಯಮ ಜತೆ ಈ ಕುರಿತು ಮಾತನಾಡಿದ ಅವರು, ಬಿಜೆಪಿ ಸರಕಾರ ಸಂಸ್ಕೃತಿ ಕೆಡವುತ್ತೆ ಎನ್ನುವುದು ಮತ್ತೆ ಸಾಬೀತಾಗಿದೆ. ದೇವಸ್ಥಾನ ಕೆಡವಿದ ಬಗ್ಗೆ ಸರ್ಕಾರ ಯಾರನ್ನು ಜವಾಬ್ದಾರಿ ಮಾಡುತ್ತೆ. ದೇವಸ್ಥಾನದ ಇತಿಹಾಸ, ಅಲ್ಲಿನ ಶಿಲ್ಪಕಲೆ ಎಲ್ಲವೂ ಇವರಿಗೆ ಅರ್ಥವಾಗಿಲ್ವಾ..? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೈಸೂರು ಅಷ್ಟೇ ಅಲ್ಲ, ಇದು ಇಡೀ ದೇಶಕ್ಕೆ ದೊಡ್ಡ ಕಪ್ಪುಚುಕ್ಕೆ. ಇದರ ನೈತಿಕ ಹೊಣೆ ಹೊತ್ತು ಮೈಸೂರು ಉಸ್ತುವಾರಿ ಸಚಿವರು ರಾಜೀನಾಮೆ ನೀಡಲಿ. ಸರ್ಕಾರ ಆದೇಶ ಕೊಡುವಾಗ ಏಕೆ ಯೋಚನೆ ಮಾಡಿಲ್ಲ..? ಇದನ್ನು ಕೂತು ಚರ್ಚಿಸಿದ್ರೆ ಈ ಸಮಸ್ಯೆಗೆ ಪರಿಹಾರ ಸಿಗ್ತಾ ಇರ್ಲಿಲ್ವಾ..? ದೊಡ್ಡ ದೊಡ್ಡವರಿಗೆ ಬಿಜೆಪಿ ಸರ್ಕಾರ ಅಕ್ರಮ ಜಾಗ ಸಕ್ರಮ ಮಾಡಿ ಕೊಟ್ಟಿಲ್ವಾ..? ಹೀಗಿರುವಾಗ ದೇವಸ್ಥಾನದ ಜಾಗ ಸಕ್ರಮ ಮಾಡಲು ಸರ್ಕಾರಕ್ಕೆ ಏನು ತೊಂದರೆ…? ಇದು ಬಿಜೆಪಿ ಸರ್ಕಾರದ ಆಡಳಿತ ವೈಫಲ್ಯವನ್ನು ತೋರಿಸುತ್ತೆ ಎಂದು ಆರೋಪಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು