10:19 PM Tuesday16 - September 2025
ಬ್ರೇಕಿಂಗ್ ನ್ಯೂಸ್
ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ

ಇತ್ತೀಚಿನ ಸುದ್ದಿ

ದೇಗುಲ ಧ್ವಂಸ; ಮೈಸೂರು ಉಸ್ತುವಾರಿ ಸಚಿವರು ರಾಜೀನಾಮೆ ನೀಡಲಿ: ಮಾಜಿ ಸಚಿವ ಯು.ಟಿ.ಖಾದರ್ ಆಗ್ರಹ

15/09/2021, 21:27

ಮಂಗಳೂರು(reporterkarnataka.com):ರಾಜ್ಯದಲ್ಲಿ ದೇಗುಲಗಳನ್ನು ಕೆಡಹುವ ವಿಷಯ ವಿವಾದಕ್ಕೆ ಗುರಿಯಾಗುತ್ತಿದ್ದಂತೆ ಮಾಜಿ ಸಚಿವ ಯು.ಟಿ.ಖಾದರ್ ಎಂಟ್ರಿ ಕೊಟ್ಟಿದ್ದಾರೆ. ಜನರ ಭಾವನೆಗಳನ್ನು ಕೆಡವಿದವರು ಈಗ ದೇವಸ್ಥಾನ ಕೆಡವಿದ್ದಾರೆ ಎಂದು ಖಾದರ್ ಟೀಕಿಸಿದ್ದಾರೆ.

ಮಾಧ್ಯಮ ಜತೆ ಈ ಕುರಿತು ಮಾತನಾಡಿದ ಅವರು, ಬಿಜೆಪಿ ಸರಕಾರ ಸಂಸ್ಕೃತಿ ಕೆಡವುತ್ತೆ ಎನ್ನುವುದು ಮತ್ತೆ ಸಾಬೀತಾಗಿದೆ. ದೇವಸ್ಥಾನ ಕೆಡವಿದ ಬಗ್ಗೆ ಸರ್ಕಾರ ಯಾರನ್ನು ಜವಾಬ್ದಾರಿ ಮಾಡುತ್ತೆ. ದೇವಸ್ಥಾನದ ಇತಿಹಾಸ, ಅಲ್ಲಿನ ಶಿಲ್ಪಕಲೆ ಎಲ್ಲವೂ ಇವರಿಗೆ ಅರ್ಥವಾಗಿಲ್ವಾ..? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೈಸೂರು ಅಷ್ಟೇ ಅಲ್ಲ, ಇದು ಇಡೀ ದೇಶಕ್ಕೆ ದೊಡ್ಡ ಕಪ್ಪುಚುಕ್ಕೆ. ಇದರ ನೈತಿಕ ಹೊಣೆ ಹೊತ್ತು ಮೈಸೂರು ಉಸ್ತುವಾರಿ ಸಚಿವರು ರಾಜೀನಾಮೆ ನೀಡಲಿ. ಸರ್ಕಾರ ಆದೇಶ ಕೊಡುವಾಗ ಏಕೆ ಯೋಚನೆ ಮಾಡಿಲ್ಲ..? ಇದನ್ನು ಕೂತು ಚರ್ಚಿಸಿದ್ರೆ ಈ ಸಮಸ್ಯೆಗೆ ಪರಿಹಾರ ಸಿಗ್ತಾ ಇರ್ಲಿಲ್ವಾ..? ದೊಡ್ಡ ದೊಡ್ಡವರಿಗೆ ಬಿಜೆಪಿ ಸರ್ಕಾರ ಅಕ್ರಮ ಜಾಗ ಸಕ್ರಮ ಮಾಡಿ ಕೊಟ್ಟಿಲ್ವಾ..? ಹೀಗಿರುವಾಗ ದೇವಸ್ಥಾನದ ಜಾಗ ಸಕ್ರಮ ಮಾಡಲು ಸರ್ಕಾರಕ್ಕೆ ಏನು ತೊಂದರೆ…? ಇದು ಬಿಜೆಪಿ ಸರ್ಕಾರದ ಆಡಳಿತ ವೈಫಲ್ಯವನ್ನು ತೋರಿಸುತ್ತೆ ಎಂದು ಆರೋಪಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು