ಇತ್ತೀಚಿನ ಸುದ್ದಿ
ಗ್ಯಾಸ್ ಪೈಪ್ಲೈನ್ ಲೀಕ್ ಆಗಿ ಬೆಂಕಿ: ತಪ್ಪಿದ ಭಾರೀ ದುರಂತ; ಎಫ್ಐಆರ್ ದಾಖಲಿಸಲು ಒತ್ತಾಯ
05/05/2026, 15:27
ಬೀದರ್(reporterkarnaraka.com): ಬೀದರ್ ನಗರದ ಜೈಲ್ ಕಾಲನಿಯಲ್ಲಿ ಗ್ಯಾಸ್ ಪೈಪ್ ಲೀಕ್ ಆಗಿ ಆಳೆತ್ತರಕ್ಕೆ ಬೆಂಕಿ ಹೊತ್ತಿ ಉರಿದ ಘಟನೆ ನಡೆದಿದೆ. ಬೆಳ್ಳಂಬೆಳಗ್ಗೆ ಭಾರೀ ಅನಾಹುತ ತಪ್ಪಿದ್ದು, ಘಟನೆ ಸಾರ್ವಜನಿಕರಲ್ಲಿ ಆತಂಕಕ್ಕೆ ಕಾರಣವಾಯಿತು.
ಜೈಲ್ ಕಾಲನಿ ನಿವಾಸಿಗಳು ಆಕ್ರೋಶ ಹೊರ ಹಾಕಿದ್ದು, ಹೆಲ್ಪ್ ಲೈನ್ ಕೆಲಸ ಮಾಡುತ್ತಿಲ್ಲ ಎಂದು ಸಿಬಂದಿಗಳನ್ನು ತರಾಟೆಗೆ ತೆಗದುಕೊಂಡರು. ಅಗ್ನಿ ಶಾಮಕ ಸಿಬಂದಿಗಳು ಸಕಾಲಕ್ಕೆ ಆಗಮಿಸಿ ಬೆಂಕಿ ನಂದಿಸದೇ ಹೋಗಿದ್ದರೆ ಭಾರೀ ಅನಾಹುತ ಸಂಭವಿಸುತ್ತಿತ್ತು. ನಿರ್ಲಕ್ಷ್ಯದಿಂದಲೇ ಈ ಅವಘಡ ಸಂಭವಿಸಿದೆ ಎಂದು ಆರೋಪಿಸಿ ಗ್ಯಾಸ್ ಕಂಪನಿ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಒತ್ತಾಯ ಮಾಡಿದ್ದಾರೆ.

ಅಗ್ನಿ ಶಾಮಕ ಸಿಬಂದಿಗಳು ಬೆಂಕಿ ನಂದಿಸಿದರೂ ಗ್ಯಾಸ್ ಲೀಕ್ ತಡೆಗಟ್ಟಲು ಹರಸಾಹಸ ಪಡಬೇಕಾಯಿತು ಎಂದು ತಿಳಿದು ಬಂದಿದೆ.












