ಇತ್ತೀಚಿನ ಸುದ್ದಿ
ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ ಬಸ್: ಪ್ರಯಾಣಿಕರು ಪಾರು, ಚಾಲಕ ಸಾವು
08/05/2026, 20:34
ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka@gmail.com
ಪ್ರತಿದಿನ ಬೆಂಗಳೂರಿನಿಂದ ಮಡಿಕೇರಿಗೆ ಆಗಮಿಸುವ ಪೂರ್ಣಿಮಾ ಖಾಸಗಿ ಬಸ್ ಚಾಲಕನಿಗೆ ಎದೆ ನೋವು ಕಾಣಿಸಿಕೊಂಡು ನಿಯಂತ್ರಣ ಕಳೆದುಕೊಂಡ ಬಸ್ ರಸ್ತೆ ಬದಿಗೆ ಮಗುಚಿದ ಘಟನೆ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ನಡೆದಿದೆ.

ತಕ್ಷಣ ಎಚ್ಚೆತ್ತುಕೊಂಡ ಪ್ರಯಾಣಿಕರು ಪೊಲೀಸ್ ಸಹಾಯವಾಣಿಗೆ ಕರೆ ಮಾಡಿದು, ಗಂಭೀರ ಸ್ಥಿತಿಯಲ್ಲಿದ್ದ ಚಾಲಕನನ್ನು ಮಡಿಕೇರಿ ಆಸ್ಪತ್ರೆಗೆ ಸಾಗಿಸುವ ಮೊದಲೇ ಸಾವನಪ್ಪಿರುವುದು ದೃಢಪಟ್ಟಿದೆ.












