6:56 PM Saturday9 - May 2026
ಬ್ರೇಕಿಂಗ್ ನ್ಯೂಸ್
ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ

ಇತ್ತೀಚಿನ ಸುದ್ದಿ

ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ

09/05/2026, 18:39

ಮೋಹನ್ ನಂಜನಗೂಡು

info.reporterkarnataka@gmail.com

ವೀರ ಮದಕರಿ ನಾಯಕರ ಜಯಂತೋತ್ಸವದ ಅಂಗವಾಗಿ ನಡೆದ ನಂಜನಗೂಡು ತಾಲೂಕು ಮಟ್ಟದ ಶ್ರೀ ಮಹರ್ಷಿ ವಾಲ್ಮೀಕಿ ಕಪ್ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯನ್ನು ನಂಜನಗೂಡಿನ ತಗಡೂರು ಗ್ರಾಮದಲ್ಲಿ ಆಯೋಜಿಸಲಾಗಿತ್ತು. ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿಗೆ ವಿವಿಧೆಡೆಯಿಂದ ಸುಮಾರು 25 ತಂಡಗಳು ಭಾಗವಹಿಸಿದ್ದವು. ಪಂದ್ಯಾವಳಿಗೆ ತಾಲೂಕು ನಾಯಕರ ಸಂಘದ ಗೌರವಾಧ್ಯಕ್ಷರು ಹಾಗೂ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರು ಆದ ಹರತಲೆ ಚಿಕ್ಕರಂಗನಾಯಕ ಅವರು ಬ್ಯಾಟಿಂಗ್ ಮಾಡುವ ಮೂಲಕ ಚಾಲನೆ ನೀಡಿದರು.
ಇದಕ್ಕೂ ಮುನ್ನ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದ ಎಲ್ಲಾ ಕ್ರಿಕೆಟ್ ಪಟುಗಳನ್ನು ಪರಸ್ಪರ ಪರಿಚಯ ಮಾಡಿಕೊಂಡರು.
ನಂತರ ನಡೆದ ಪಂದ್ಯಾವಳಿಯಲ್ಲಿ ಭಾಗವಹಿಸಿದ ಎಲ್ಲಾ ತಂಡಗಳು ತಮ್ಮ ತಮ್ಮ ಗೆಲುವಿಗಾಗಿ ರೋಚಕ ಪ್ರದರ್ಶನ ನೀಡಿದರು. ಅದರಲ್ಲಿ ತಾಲೂಕಿನ ಕವಲಂದೆ ತಂಡವು ಪ್ರಥಮ ಸ್ಥಾನ ಗಳಿಸಿ ರೂ.30,000 ನಗದು ಹಾಗೂ ಟ್ರೋಫಿಯನ್ನು ಪಡೆದರೆ ಎರಡನೇ ಸ್ಥಾನವನ್ನು ತಗಡೂರು ತಂಡವು ಪಡೆದು 15 ಸಾವಿರ ರೂಪಾಯಿ ಬಹುಮಾನ ಹಾಗೂ ಟ್ರೋಫಿಯನ್ನು ತನ್ನದಾಗಿಸಿಕೊಂಡಿತು.
ನಂತರ ಚಿಕ್ಕರಂಗನಾಯಕ ಮಾತನಾಡಿ ಕ್ರೀಡಾಪಟುಗಳು ಯಾವುದೇ ಆವೇಶಕ್ಕೆ ಒಳಗಾಗದೆ ಸೋಲು ಗೆಲುವನ್ನು ಸಮಾನಾಂತರವಾಗಿ ಸ್ವೀಕರಿಸಬೇಕು ಎಂದು ಕಾರ್ಯಕ್ರಮದ ಬಗ್ಗೆ ವಿವರಿಸಿದರು.
ಇದೇ ಸಂದರ್ಭ ಅವರನ್ನು ಜಯಂತ್ಯೋತ್ಸವ ಸಮಿತಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು
ಕಾರ್ಯಕ್ರಮದಲ್ಲಿ ಆಯೋಜಕರಾದ ಸಂಪತ್ ಕುಮಾರ್, ಮನು, ರಾಹುಲ್, ಸಿದ್ದನಾಯಕ, ಸೀನಾ ಸೇರಿದಂತೆ ತಗಡೂರು ಮದಕರಿ ವಾರಿಯರ್ಸ್ ತಂಡದ ಎಲ್ಲಾ ಆಟಗಾರರು ಹಾಗೂ ಮುಖಂಡರುಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು