4:40 PM Saturday7 - February 2026
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,…

ಇತ್ತೀಚಿನ ಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಯ ಒಟ್ಟು 1.50 ಲಕ್ಷ ಮಂದಿಗೆ ಲಸಿಕೆ ನೀಡುವ ಗುರಿ: 18 ವರ್ಷ ತುಂಬಿದವರಿಗೆ ಕಡ್ಡಾಯ

16/09/2021, 08:47

ಮಂಗಳೂರು(reporterkarnataka.com) ಸೆಪ್ಟೆಂಬರ್ 17ರಂದು ಜಿಲ್ಲೆಯಾದ್ಯಂತ ನಡೆಯುವ ಬೃಹತ್ ಲಸಿಕಾ ಮೇಳ ಯಶಸ್ವಿಯಾಗುವಂತೆ ಕಾರ್ಯ ಕೈಗೊಳ್ಳಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎಲ್ಲ ಜಿಲ್ಲೆಯ ಜಿಲ್ಲಾಧಿಕಾರಿಗಳು, ಜಿಲ್ಲಾ ಮುಖ್ಯ ಕಾರ್ಯನಿರ್ವಾಹಕಾಧಿಕಾರಿಗಳು ಹಾಗೂ ಆರೋಗ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.
ಅವರು  ವಿಧಾನಸೌಧದ ಸಮಿತಿ ಕಚೇರಿಯಲ್ಲಿ ನಡೆದ ಸೆಪ್ಟೆಂಬರ್ 17ರಂದು ನಡೆಯುವ ಬೃಹತ್ ಲಸಿಕಾ ಮೇಳದ ಕುರಿತು ಪ್ರತಿ ಜಿಲ್ಲೆಯ ಜಿಲ್ಲಾಧಿಕಾರಿಗಳು, ಜಿಲ್ಲಾ ಮುಖ್ಯ ಕಾರ್ಯನಿರ್ವಾಹಕಾಧಿಕಾರಿಗಳು ಹಾಗೂ ಆರೋಗ್ಯಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಮಾತನಾಡಿದರು.

ದಕ್ಷಿಣ ಕನ್ನಡ ಜಿಲ್ಲೆಗೆ ಒಟ್ಟು 1,50,000 ಲಸಿಕಾಕರಣ ಗುರಿಯನ್ನು ನೀಡಲಾಗಿದ್ದು, ಜಿಲ್ಲೆಯ 18 ವರ್ಷ ತುಂಬಿದ ಪ್ರತಿಯೊಬ್ಬರಿಗೂ ಕಡ್ಡಾಯವಾಗಿ ಲಸಿಕೆಯನ್ನು ನೀಡುವ ಕೆಲಸವಾಗಬೇಕು ಹಾಗೂ ಈ ಮೇಳವನ್ನು ಯಶಸ್ವಿಯಾಗಿಸಬೇಕು ಎಂದು ಸೂಚಿಸಿದರು.
ಸೆಪ್ಟೆಂಬರ್ 17ರಂದು ಸರಿಯಾದ ವಾಹನದ ವ್ಯವಸ್ಥೆ, ಲಸಿಕಾ ಕೇಂದ್ರಗಳ ವ್ಯವಸ್ಥೆ, ವೈದ್ಯಕೀಯ ಸಿಬ್ಬಂದಿಗಳ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಸಂಬಂಧಪಟ್ಟ ಅಧಿಕಾರಿಗಳು ಮುಂಚಿತವಾಗಿ ಪೂರ್ವ ಸಿದ್ಧತಾ ತಯಾರಿ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ಖಾಸಗಿ ಆಸ್ಪತ್ರೆಗಳು, ವೈದ್ಯಕೀಯ ಕಾಲೇಜು ಹಾಗೂ ನರ್ಸಿಂಗ್
ಕಾಲೇಜುಗಳ ವೈದ್ಯಕೀಯ ಸಿಬ್ಬಂದಿಗಳ ಸಹಯೋಗ ಪಡೆದುಕೊಂಡು
ಜಿಲ್ಲಗೆ ನೀಡಿದ ಗುರಿಯನ್ನು ಸಾಧಿಸಿ ಎಂದು ಕರೆ ನೀಡಿದರು.
ಸಂಬಂಧಪಟ್ಟ ಅಧಿಕಾರಿಗಳು ಗಡಿಭಾಗದ ಗ್ರಾಮಗಳು ಹಾಗೂ ನಗರ ಪ್ರದೇಶದಲ್ಲಿ ಕೊಳಗೇರಿಗಳಲ್ಲಿ ವಾಸಿಸುವ ಮನೆಗಳಿಗೆ ಭೇಟಿ ನೀಡಿ ಹಾಗೂ ಹೆಚ್ಚು ಹೆಚ್ಚು ಲಸಿಕಾ ಕೇಂದ್ರಗಳನ್ನು ತೆರೆಯಲು ತಿಳಿಸಿದರು.
ಜಿಲ್ಲಾಧಿಕಾರಿ ಡಾ.ರಾಜೇಂದ್ರ.ಕೆ.ವಿ ಮಾತನಾಡಿ, ಸೆಪ್ಟೆಂಬರ್ 17ರ ಒಳಗಾಗಿ ಸಂಬಂಧಪಟ್ಟ ಅಧಿಕಾರಿಗಳು ಪ್ರತಿ ಮನೆಮನೆಗೆ ತೆರಳಿ ಲಸಿಕೆ ಪಡೆಯದೇ ಇರುವವರ ಮಾಹಿತಿ ಪಟ್ಟಿಯನ್ನು ಪಡೆದುಕೊಂಡು ಲಸಿಕೆ ಹಾಕಿಕೊಳ್ಳಲು ಬರುವಂತೆ ತಿಳಿ ಹೇಳಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಆಯಾ ಗ್ರಾಮ ಸಹಾಯಕರು, ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರು ಹಾಗೂ ಪ್ರತಿ ಪಂಚಾಯಿತಿಗಳಲ್ಲಿ ಸಭೆ ನಡೆಸಿ ಬೃಹತ್ ಲಸಿಕೆ ಮೇಳದ ಕುರಿತು ಜನರಿಗೆ ಅರಿವು ಮೂಡಿಸಬೇಕು ಎಂದರು.

ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ಕಿಶೋರ್, ಡಿಯುಡಿಸಿ ಗಾಯತ್ರಿ ನಾಯಕ್ ಹಾಗೂ ಮತ್ತಿತರ ವೈದ್ಯಾಧಿಕಾರಿಗಳು ವಿಡಿಯೋ ಸಂವಾದದಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು