3:32 PM Wednesday5 - November 2025
ಬ್ರೇಕಿಂಗ್ ನ್ಯೂಸ್
ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:…

ಇತ್ತೀಚಿನ ಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಯ ಒಟ್ಟು 1.50 ಲಕ್ಷ ಮಂದಿಗೆ ಲಸಿಕೆ ನೀಡುವ ಗುರಿ: 18 ವರ್ಷ ತುಂಬಿದವರಿಗೆ ಕಡ್ಡಾಯ

16/09/2021, 08:47

ಮಂಗಳೂರು(reporterkarnataka.com) ಸೆಪ್ಟೆಂಬರ್ 17ರಂದು ಜಿಲ್ಲೆಯಾದ್ಯಂತ ನಡೆಯುವ ಬೃಹತ್ ಲಸಿಕಾ ಮೇಳ ಯಶಸ್ವಿಯಾಗುವಂತೆ ಕಾರ್ಯ ಕೈಗೊಳ್ಳಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎಲ್ಲ ಜಿಲ್ಲೆಯ ಜಿಲ್ಲಾಧಿಕಾರಿಗಳು, ಜಿಲ್ಲಾ ಮುಖ್ಯ ಕಾರ್ಯನಿರ್ವಾಹಕಾಧಿಕಾರಿಗಳು ಹಾಗೂ ಆರೋಗ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.
ಅವರು  ವಿಧಾನಸೌಧದ ಸಮಿತಿ ಕಚೇರಿಯಲ್ಲಿ ನಡೆದ ಸೆಪ್ಟೆಂಬರ್ 17ರಂದು ನಡೆಯುವ ಬೃಹತ್ ಲಸಿಕಾ ಮೇಳದ ಕುರಿತು ಪ್ರತಿ ಜಿಲ್ಲೆಯ ಜಿಲ್ಲಾಧಿಕಾರಿಗಳು, ಜಿಲ್ಲಾ ಮುಖ್ಯ ಕಾರ್ಯನಿರ್ವಾಹಕಾಧಿಕಾರಿಗಳು ಹಾಗೂ ಆರೋಗ್ಯಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಮಾತನಾಡಿದರು.

ದಕ್ಷಿಣ ಕನ್ನಡ ಜಿಲ್ಲೆಗೆ ಒಟ್ಟು 1,50,000 ಲಸಿಕಾಕರಣ ಗುರಿಯನ್ನು ನೀಡಲಾಗಿದ್ದು, ಜಿಲ್ಲೆಯ 18 ವರ್ಷ ತುಂಬಿದ ಪ್ರತಿಯೊಬ್ಬರಿಗೂ ಕಡ್ಡಾಯವಾಗಿ ಲಸಿಕೆಯನ್ನು ನೀಡುವ ಕೆಲಸವಾಗಬೇಕು ಹಾಗೂ ಈ ಮೇಳವನ್ನು ಯಶಸ್ವಿಯಾಗಿಸಬೇಕು ಎಂದು ಸೂಚಿಸಿದರು.
ಸೆಪ್ಟೆಂಬರ್ 17ರಂದು ಸರಿಯಾದ ವಾಹನದ ವ್ಯವಸ್ಥೆ, ಲಸಿಕಾ ಕೇಂದ್ರಗಳ ವ್ಯವಸ್ಥೆ, ವೈದ್ಯಕೀಯ ಸಿಬ್ಬಂದಿಗಳ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಸಂಬಂಧಪಟ್ಟ ಅಧಿಕಾರಿಗಳು ಮುಂಚಿತವಾಗಿ ಪೂರ್ವ ಸಿದ್ಧತಾ ತಯಾರಿ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ಖಾಸಗಿ ಆಸ್ಪತ್ರೆಗಳು, ವೈದ್ಯಕೀಯ ಕಾಲೇಜು ಹಾಗೂ ನರ್ಸಿಂಗ್
ಕಾಲೇಜುಗಳ ವೈದ್ಯಕೀಯ ಸಿಬ್ಬಂದಿಗಳ ಸಹಯೋಗ ಪಡೆದುಕೊಂಡು
ಜಿಲ್ಲಗೆ ನೀಡಿದ ಗುರಿಯನ್ನು ಸಾಧಿಸಿ ಎಂದು ಕರೆ ನೀಡಿದರು.
ಸಂಬಂಧಪಟ್ಟ ಅಧಿಕಾರಿಗಳು ಗಡಿಭಾಗದ ಗ್ರಾಮಗಳು ಹಾಗೂ ನಗರ ಪ್ರದೇಶದಲ್ಲಿ ಕೊಳಗೇರಿಗಳಲ್ಲಿ ವಾಸಿಸುವ ಮನೆಗಳಿಗೆ ಭೇಟಿ ನೀಡಿ ಹಾಗೂ ಹೆಚ್ಚು ಹೆಚ್ಚು ಲಸಿಕಾ ಕೇಂದ್ರಗಳನ್ನು ತೆರೆಯಲು ತಿಳಿಸಿದರು.
ಜಿಲ್ಲಾಧಿಕಾರಿ ಡಾ.ರಾಜೇಂದ್ರ.ಕೆ.ವಿ ಮಾತನಾಡಿ, ಸೆಪ್ಟೆಂಬರ್ 17ರ ಒಳಗಾಗಿ ಸಂಬಂಧಪಟ್ಟ ಅಧಿಕಾರಿಗಳು ಪ್ರತಿ ಮನೆಮನೆಗೆ ತೆರಳಿ ಲಸಿಕೆ ಪಡೆಯದೇ ಇರುವವರ ಮಾಹಿತಿ ಪಟ್ಟಿಯನ್ನು ಪಡೆದುಕೊಂಡು ಲಸಿಕೆ ಹಾಕಿಕೊಳ್ಳಲು ಬರುವಂತೆ ತಿಳಿ ಹೇಳಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಆಯಾ ಗ್ರಾಮ ಸಹಾಯಕರು, ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರು ಹಾಗೂ ಪ್ರತಿ ಪಂಚಾಯಿತಿಗಳಲ್ಲಿ ಸಭೆ ನಡೆಸಿ ಬೃಹತ್ ಲಸಿಕೆ ಮೇಳದ ಕುರಿತು ಜನರಿಗೆ ಅರಿವು ಮೂಡಿಸಬೇಕು ಎಂದರು.

ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ಕಿಶೋರ್, ಡಿಯುಡಿಸಿ ಗಾಯತ್ರಿ ನಾಯಕ್ ಹಾಗೂ ಮತ್ತಿತರ ವೈದ್ಯಾಧಿಕಾರಿಗಳು ವಿಡಿಯೋ ಸಂವಾದದಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು