2:15 PM Friday26 - June 2026
ಬ್ರೇಕಿಂಗ್ ನ್ಯೂಸ್
ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ…

ಇತ್ತೀಚಿನ ಸುದ್ದಿ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ 4ನೇ ರಾಜ್ಯ ಸಮ್ಮೇಳನಕ್ಕೆ ಕೆಆರ್ ಎಸ್ ಪಾರ್ಟಿಯ ರವಿಕೃಷ್ಣ ರೆಡ್ಡಿಗೆ ಆಹ್ವಾನ

11/05/2026, 21:44

ಬೆಂಗಳೂರು(reporterkarnataka.com):ನೆಲಮಂಗಲದಲ್ಲಿ ನಡೆಯಲಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ 4ನೇ ರಾಜ್ಯ ಸಮ್ಮೇಳನಕ್ಕೆ ಕರ್ನಾಟಕ ರಾಷ್ಟ್ರ ಸಮಿತಿ (KRS Party) ಪಕ್ಷದ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ರವಿ ಕೃಷ್ಣರೆಡ್ಡಿ ಅವರನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ ಆಹ್ವಾನಿಸಿದರು.
ಆಗಸ್ಟ್ 8ರಂದು ನೆಲಮಂಗಲದ ಪುಷ್ಪ ಬೈರೇಗೌಡ ಕನ್ವೆಷನ್ ಹಾಲ್ ನಲ್ಲಿ ಪತ್ರಕರ್ತರ ಧ್ವನಿ ಸಂಘಟನೆ ವತಿಯಿಂದ ಪತ್ರಕರ್ತರ 4ನೇ ರಾಜ್ಯ ಸಮ್ಮೇಳನ ಹಾಗೂ ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮಕ್ಕೆ ದಿಟ್ಟೆದೆಯ ಹೋರಾಟಗಾರ, ಪ್ರಾಮಾಣಿಕ ಜನಪರ ಚಿಂತಕರಾದ ರವಿಕೃಷ್ಣ ರೆಡ್ಡಿ ಅವರನ್ನು ರಾಜಾಜಿನಗರದಲ್ಲಿರುವ ಅವರ ಕೇಂದ್ರ ಕಾರ್ಯಾಲಯದಲ್ಲಿ ಬಂಗ್ಲೆ ಅವರು ಭೇಟಿಯಾಗಿ ಎರಡು ಗಂಟೆಗಳ ಕಾಲ ಅವರೊಂದಿಗೆ ಅನೇಕ ವಿಚಾರಗಳನ್ನು ಚರ್ಚಿಸಿ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದರು.
ಪತ್ರಕರ್ತರ ರಾಜ್ಯ ಸಮ್ಮೇಳನದ ಉದ್ಘಾಟನಾ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಲು ರವಿಕೃಷ್ಣ ರೆಡ್ಡಿ ಅವರಿಗೆ ಆಹ್ವಾನ ನೀಡಲಾಗಿದ್ದು, ರೆಡ್ಡಿ ಅವರು ಸ್ವೀಕಾರ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಬಂಗ್ಲೆ ಅವರ ಜತೆಗೆ ಬೆಂಗಳೂರು ನಗರ ಜಿಲ್ಲಾ ಉಪಾಧ್ಯಕ್ಷರಾದ ರಮೇಶ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು