8:04 PM Thursday23 - July 2026
ಬ್ರೇಕಿಂಗ್ ನ್ಯೂಸ್
ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:…

ಇತ್ತೀಚಿನ ಸುದ್ದಿ

ದೇವಾಲಯಗಳ ನೆಲಸಮ: ಬಿಜೆಪಿ ಸರಕಾರದ ಬಗ್ಗೆ ಕೆಪಿಸಿಸಿ ಪ್ಯಾನಲಿಸ್ಟ್  ವೆರೋನಿಕಾ ಕರ್ನೆಲಿಯೊ ಹೇಳಿದ್ದೇನು? 

16/09/2021, 16:53

ಉಡುಪಿ(reporterkarnataka.com): ಮೈಸೂರಿನಲ್ಲಿ ನಡೆದಿರುವ ದೇವಾಲಯಗಳ ಕೆಡಹುವಿಕೆ ಪ್ರಕ್ರಿಯೆ ನಿಜಕ್ಕೂ ಬೇಸರ ಹಾಗೂ ಭಕ್ತರ ಭಾವನೆಗಳಿಗೆ ನೋವು ತರುವ ಸಂಗತಿಯಾಗಿದ್ದು, ಇದನ್ನು ತಾನು ತೀವ್ರವಾಗಿ ಖಂಡಿಸುವುದಾಗಿ ಕೆಪಿಸಿಸಿ ಪ್ಯಾನಲಿಸ್ಟ್‌ ವೆರೋನಿಕಾ ಕರ್ನೆಲಿಯೋ ಹೇಳಿದ್ದಾರೆ.

ಒಂದು ದೇವಸ್ಥಾನ ಧಾರ್ಮಿಕ ಕೇಂದ್ರವಾಗಿದ್ದು ಅದರ ಮೇಲೆ ಭಕ್ತರಿಗೆ ತನ್ನದೆ ಆದ ಭರವಸೆ ನಂಬಿಕೆ ಇಟ್ಟುಕೊಂಡು ಅಲ್ಲಿ ಶಾಂತಿ ಸಮಾಧಾನವನ್ನು ಬಯಸಿಕೊಂಡು ಹೋಗುತ್ತಾರೆ. ಅಂತಹ ಒಂದು ಭಾವನಾತ್ಮಕ ಸಂಬಂಧವನ್ನು ಹೊಂದಿರುವ ದೇವಸ್ಥಾನವನ್ನು ಏಕಾಏಕಿ ಕೆಡಹುವುದು ಭಕ್ತರ ಭಾವನೆ ಮತ್ತು ಭಕ್ತಿಗೆ ಧಕ್ಕೆ ತರುವಂತಹ ವಿಚಾರವಾಗಿದೆ. ಒಂದು ವೇಳೆ ಅಂತಹ ದೇವಸ್ಥಾನ ಅನಧಿಕೃತ ಎಂದಾದಲ್ಲಿ ಅದನ್ನು ಕಟ್ಟುವಾಗಲೇ ಅದರ ಕುರಿತು ಕ್ರಮ ಜರುಗಿಸಬೇಕಾಗಿತ್ತು ಅದನ್ನು ಬಿಟ್ಟು ಇಷ್ಟು ವರ್ಷ ಆರಾಧಿಸಿಕೊಂಡು ಬಂದಿರುವಂತಹ ದೇವಸ್ಥಾನವನ್ನು ಕೆಡವಿದ್ದು ಸರಿಯಲ್ಲ. ಕೇಂದ್ರ, ರಾಜ್ಯ ಹಾಗೂ ಸ್ಥಳೀಯ ಹಂತಗಳಲ್ಲಿ ಬಿಜೆಪಿ ಸರಕಾರವೇ ಇದ್ದರೂ ಕೂಡ ಅದರ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಏಕೆ ಸಾಧ್ಯವಾಗಿಲ್ಲ. ಈ ಹಿಂದೆ ಕೂಡ ನ್ಯಾಯಾಲಯಗಳು ಇಂತಹ ಆದೇಶ ನೀಡಿದಾಗ ನ್ಯಾಯಾಲಯಕ್ಕೆ ಸರಕಾರದಿಂದ ಮನವರಿಕೆ ಮಾಡಿದಂಥಹ ಹಲವಾರು ಘಟನೆಗಳು ನಡೆದಿವೆ. ಹಾಗಿದ್ದರೂ ಕೂಡ ಬಿಜೆಪಿ ನಾಯಕರು ಈ ವಿಚಾರದಲ್ಲಿ ಮೌನವಾಗಿರುವುದು ಏಕೆ? ಬಿಜೆಪಿಗರು ಈ ವಿಚಾರದಲ್ಲಿ ಮೌನವಾಗಿದ್ದಾಗ ಕೂಡ ಸಂಘಟನೆಗಳು ಯಾಕೆ ಮಾತನಾಡುತ್ತಿಲ್ಲ ಬಿಜೆಪಿ ಸರಕಾರ ಇದ್ದಾಗ ದೇವರ ರಕ್ಷಣೆ ಮಾಡುವುದು ಸಾಧ್ಯವಿಲ್ಲವೇ? ಈ ವಿಚಾರದಲ್ಲಿ ಪ್ರತಿಯೊಬ್ಬ ಧರ್ಮದವರು ಕೂಡ ಪ್ರತಿಭಟಿಸಬೇಕಾದ ಪ್ರಮೇಯ ಒದಗಿ ಬಂದಿದೆ ಪ್ರತಿಯೊಬ್ಬರು ಅವರವರ ಧರ್ಮದ ರಕ್ಷಣೆ ಮಾಡುವ ಜವಾಬ್ದಾರಿ ಇದೆ.

ಇಷ್ಟೋಂದು ಪುರಾತನ ದೇವಾಲಯವನ್ನು ಜೆಸಿಬಿ ಮೂಲಕ ನೆಲಸಮ ಮಾಡಿದ್ದಲ್ಲದೆ ಅಲ್ಲಿದ್ದ ದೇವರ ಮೂರ್ತಿಗಳನ್ನು ಕಸದ ತೊಟ್ಟಿಗೆ ಎಸೆದಿರುವುದುನ್ನು ನೋಡಿದರೆ ಪ್ರತಿಯೊಬ್ಬರ ಮನಸ್ಸಿಗೂ ಕೂಡ ನೋವುಂಟು ಮಾಡುತ್ತದೆ. ರಾಜ್ಯದಲ್ಲಿ ಬಿಜೆಪಿ ಸರಕಾರವೇ ಅಧಿಕಾರದಲ್ಲಿರುವಾಗ ಇಂತಹ ಘಟನೆ ನಡೆದಿರುವುದು ನಿಜಕ್ಕೂ ಖಂಡನೀಯವಾಗಿದೆ. ಹಿಂದೂ ಧರ್ಮದ ರಕ್ಷಣೆಯನ್ನು ಗುತ್ತಿಗೆ ಪಡೆದವರ ರೀತಿ ಮಾತನಾಡುತ್ತಿದ್ದ ಬಿಜೆಪಿಗೆ ಇಂತಹ ದುಸ್ಸಾಹಸ ಮಾಡುವ ಮೊದಲು ಹಿಂದುತ್ವ ರಕ್ಷಣೆಯ ನೆ‌ನಪಾಗದೇ ಇರುವುದು ಮಾತ್ರ ಬೇಸರದ ವಿಚಾರವಾಗಿದೆ.

ಜನರ ಭಾವನಾತ್ಮಕ ಧಾರ್ಮಿಕ ಭಾವನೆಗಳಿಗೆ ಬಿಜೆಪಿ ಸರ್ಕಾರ ಧಕ್ಕೆ ತರುತ್ತಿದ್ದು, ಇದೇ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಮಾಡಿದ್ದರೆ ಇದೇ ಬಿಜೆಪಿ ನಾಯಕರು ಬೀದಿಗೆ ಬಂದು ಹೋರಾಟ ಮಾಡುತ್ತಿದ್ದರು. ಆದರೆ ಇವರದ್ದೇ ಬಿಜೆಪಿ ಸರಕಾರ ಆಡಳಿತದಲ್ಲಿ ಇರುವಾಗ ಇದರ ಬಗ್ಗೆ ಪ್ರತಿಕ್ರಿಯಿಸಿದೇ ಇರುವುದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಅವರು ಮಾಧ್ಯಮ ಪ್ರಕಟಣೆಯ ಮೂಲಕ ಕಿಡಿಕಾರಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು