8:08 PM Friday15 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ಮೂಡಬಿದ್ರೆ: ಅಕ್ರಮ ಜಾನುವಾರ ಸಾಗಾಟ; ಇಬ್ಬರ ಬಂಧನ; ಕಾರು ವಶ

15/05/2026, 20:07

ಮೂಡಬಿದ್ರೆ(reporterkarnataka.com): ಮಾರುತಿ ಬ್ರೀಜಾ ವಾಹನದಲ್ಲಿ ಅಕ್ರಮವಾಗಿ ಜಾನುವಾರುಗಳ ಸಾಗಾಟ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಮೂಡಬಿದ್ರೆ ಪೊಲೀಸರು ಮೂಡಬಿದ್ರೆ ಸಮೀಪದ ಪಡುಮಾರ್ನಾಡು ಗ್ರಾಮದ ಗುಂಡುಕಲ್ಲು ಎಂಬಲ್ಲಿ ಬಂಧಿಸಿದ್ದಾರೆ.
ಮೇ 14ರಂದು ಬೆಳ್ಳಿಗ್ಗೆ 7.00 ಗಂಟೆಗೆ ಪಿಎಸ್ ಐ ಕೃಷ್ಣಪ್ಪ ಮತ್ತು ಸಿಬ್ಬಂದಿಗಳು ರೌಂಡ್ಸ್ ಕರ್ತವ್ಯದಲ್ಲಿದ್ದಾಗ ಬೆಳುವಾಯಿ ಕಡೆಯಿಂದ ಮಾರ್ನಾಡು ಅಳಿಯೂರು ಕಡೆಗೆ ಮಾರುತಿ ಬ್ರೀಜಾ ವಾಹನದಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಮಾಡಿಕೊಂಡು ಹೋಗುತ್ತಿದ್ದಾರೆ ಎಂಬ ಮಾಹಿತಿಯಂತೆ ಸಿಬ್ಬಂದಿಗಳೊಂದಿಗೆ ಮೂಡಬಿದ್ರೆ ತಾಲೂಕು ಪಡುಮಾರ್ನಾಡು ಗ್ರಾಮದ ಗುಂಡುಕಲ್ಲು ಕ್ರಾಸ್ ಬಳಿ ತಲುಪಿ ವಾಹನ ತಪಾಸಣೆ ಮಾಡುತ್ತಿರುವ ಬೆಳುವಾಯಿ ಕಡೆಯಿಂದ ಬೂದು KA19MK4265 ನೇ ಬಣ್ಣದ ಮಾರುತಿ ಬ್ರೀಜಾ ಕಾರು ಬಂದಿದ್ದು, ನಿಲ್ಲಿಸಲು ಸೂಚನೇ ನೀಡಿದಾಗ ನಿಲ್ಲಿಸದೇ ಮುಂದಕ್ಕೆ ಚಲಾಯಿಸಿಕೊಂಡು ಹೋಗಿರುತ್ತಾರೆ. ನಂತರ ಆ ವಾಹನವನ್ನು ಬೆನ್ನಟ್ಟಿದಾಗ ಸ್ವಲ್ಪ ಮುಂದಕ್ಕೆ ಗುಂಡುಕಲ್ಲು 5 ಸೈಂಟ್ಸ್ ರಸ್ತೆಗೆ ತಿರುಗಿ ಸಾಹುಲ್ ಹಮೀದ್ ಎಂಬುವರ ಮನೆ ಕಂಪೌಂಡ್ ಒಳಭಾಗದಲ್ಲಿ ಬ್ರೀಜಾ ಕಾರನ್ನು ನಿಲ್ಲಿಸಿ ವಾಹನದಲ್ಲಿದ್ದ ಚಾಲಕ ಮೂಡಬಿದ್ರೆ ಠಾಣಾ ಎಂ.ಓ.ಬಿ ಆಗಿರುವ ಹಂಡೇಲಿನ ಮಹಮ್ಮದ್ ಆರೀಪ್ ಮತ್ತು ಆತನ ಸಹಚರ ಗಂಟಾಲಕಟ್ಟೆಯ ಇಮ್ರಾನ್ ಅಲಿಯಾಸ್ ಇಬ್ರಾಹಿಂ ಕಾರಿನಿಂದ ಇಳಿದು ಓಡಿಹೋಗುತ್ತಿದ್ದವರನ್ನು ಸಿಬ್ಬಂದಿಗಳು ಬೆನ್ನಟ್ಟಿ ಹಿಡಿದು ವಿಚಾರಿಸಿ ನಂತರ ಮಾರುತಿ ಬ್ರೀಜಾ ಕಾರನ್ನು ಪರಿಶೀಲಿಸಿದಾಗ ಕಾರಿನ ಹಿಂಬದಿ ಸೀಟ್ ನ್ನು ತೆಗೆದು ಅದರ ಮೇಲೆ ನೀಲಿ ಬಣ್ಣದ ಪ್ಲಾಸ್ಟಿಕ್ ನ್ನು ಹಾಕಿ ಅದರ ಮೇಲೆ 1 ಗಂಡು ಕರುವನ್ನು ಹಿಂಸಾತ್ಮಕವಾಗಿ ಕಾಲು ಮತ್ತು ತಲೆಯನ್ನು ಹಗ್ಗದಿಂದ ಕಟ್ಟಿ ತುಂಬಿಸಿರುವುದು ಕಂಡು ಬಂದಿರುತ್ತದೆ. ಆರೋಪಿಗಳು ಒಂದು ವಾರದಿಂದ ಬೇರೆ ಬೇರೆ ಕಡೆಗಳಿಂದ ದನಗಳನ್ನು ಕಳ್ಳತನ ಮಾಡಿಕೊಂಡು ಬಂದು ಪಡುಮಾರ್ನಾಡು ಗ್ರಾಮದ ಗುಂಡುಕಲ್ಲು ನಿವಾಸಿ ಸಾಹುಲ್ ಹಮೀದ್ ರವರ ಮನೆಯ ಬಳಿ ಕಡಿದು ಮಾಂಸ ಮಾಡಿ ಮಾರಾಟ ಮಾಡುವ ಸಲುವಾಗಿ ಅಥವಾ ದನಗಳನ್ನು ಕಡಿಯಲೆಂದು ಇತರರಿಗೆ ಮಾರಾಟ ಮಾಡುವ ಸಲುವಾಗಿ ಸಂಗ್ರಹಣೆ ಮಾಡಿರುವುದಾಗಿ ತಿಳಿಸಿರುತ್ತಾರೆ. ಆರೋಪಿಗಳು ದನವನ್ನು ಕಳ್ಳತನ ಮಾಡಿಕೊಂಡು ಹಿಂಸಾತ್ಮಕವಾಗಿ ಸಾಗಾಟ ಮಾಡುತ್ತಿರುವುದರಿಂದ ದನವನ್ನು, KA19MK4265 ನೇ ಮಾರುತಿ ಬ್ರೀಜಾ ಕಾರನ್ನು ಮತ್ತು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು