7:51 AM Monday16 - February 2026
ಬ್ರೇಕಿಂಗ್ ನ್ಯೂಸ್
ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8… ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ… ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ…

ಇತ್ತೀಚಿನ ಸುದ್ದಿ

ಹೆಬ್ರಿ: ಓವರ್ ಟೇಕ್ ಮಾಡುವ ಭರದಲ್ಲಿ ಹಿಂಬದಿಯ ವಾಹನದಡಿಗೆ ಸಿಲುಕಿ ಸವಾರ ಸ್ಥಳದಲ್ಲೇ ಸಾವು

16/09/2021, 18:59

ಹೆಬ್ರಿ(reporterkarnataka.com) :
ಇಲ್ಲಿನ ವರಂಗ ಸಮೀಪ ಗುರುವಾರ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಸಾಗರ ತಾಲೂಕಿನ ಸಿರದಂಗೂರು ಗ್ರಾಮದ ನಿವಾಸಿಯಾಗಿರುವ ಜಿನದತ್ತ ಜೈನ್ (42) ಎಂದು ಗುರುತಿಸಲಾಗಿದೆ.

ಓವರ್ ಟೇಕ್ ಮಾಡಲು ಹೋಗಿ ಎದುರಿನಿಂದ ಬರುತ್ತಿದ್ದ  ಲಾರಿಗೆ ಡಿಕ್ಕಿಯಾಗಿ ಹಿಂದಿನಿಂದ ಬರುತ್ತಿದ್ದ ಲಾರಿಯಡಿ‌ ಬಿದ್ದು ಈ ದುರ್ಘಟನೆ ನಡೆದಿದೆ.

ಜಿನದತ್ತ ಜೈನ್ ಅವರು ಕಾರ್ಕಳ ಅಗುಂಬೆ ಮಾರ್ಗವಾಗಿ ಸಾಗರದತ್ತ ಹೋಗುವ ಸಂದರ್ಭದಲ್ಲಿ ಓವರ್ ಟೇಕ್ ಭರದಲ್ಲಿ ಈ ಘಟನೆ ನಡೆದಿದೆ. ವರಂಗ ಕೆಲ್ ಟೆಕ್ ರಸ್ತೆ ತಿರುವಿನಲ್ಲಿಯೇ ಈ ಘಟನೆ ನಡೆದಿದೆ. ಇದು ಅಪಘಾತ ವಲಯವಾಗಿದ್ದು,

ಅನೇಕ ಅಪಘಾತಗಳು ಸಂಭವಿಸುತ್ತಿವೆ.ರಸ್ತೆಯಲ್ಲಿ ಸೂಚನ ಫಲಕ ಅಳವಡಿಸಬೇಕೆಂದು ಜನರು ಪಟ್ಟು ಹಿಡಿದಿದ್ದಾರೆ. ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು