1:58 PM Wednesday22 - July 2026
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ…

ಇತ್ತೀಚಿನ ಸುದ್ದಿ

ಹೆಬ್ರಿ: ಓವರ್ ಟೇಕ್ ಮಾಡುವ ಭರದಲ್ಲಿ ಹಿಂಬದಿಯ ವಾಹನದಡಿಗೆ ಸಿಲುಕಿ ಸವಾರ ಸ್ಥಳದಲ್ಲೇ ಸಾವು

16/09/2021, 18:59

ಹೆಬ್ರಿ(reporterkarnataka.com) :
ಇಲ್ಲಿನ ವರಂಗ ಸಮೀಪ ಗುರುವಾರ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಸಾಗರ ತಾಲೂಕಿನ ಸಿರದಂಗೂರು ಗ್ರಾಮದ ನಿವಾಸಿಯಾಗಿರುವ ಜಿನದತ್ತ ಜೈನ್ (42) ಎಂದು ಗುರುತಿಸಲಾಗಿದೆ.

ಓವರ್ ಟೇಕ್ ಮಾಡಲು ಹೋಗಿ ಎದುರಿನಿಂದ ಬರುತ್ತಿದ್ದ  ಲಾರಿಗೆ ಡಿಕ್ಕಿಯಾಗಿ ಹಿಂದಿನಿಂದ ಬರುತ್ತಿದ್ದ ಲಾರಿಯಡಿ‌ ಬಿದ್ದು ಈ ದುರ್ಘಟನೆ ನಡೆದಿದೆ.

ಜಿನದತ್ತ ಜೈನ್ ಅವರು ಕಾರ್ಕಳ ಅಗುಂಬೆ ಮಾರ್ಗವಾಗಿ ಸಾಗರದತ್ತ ಹೋಗುವ ಸಂದರ್ಭದಲ್ಲಿ ಓವರ್ ಟೇಕ್ ಭರದಲ್ಲಿ ಈ ಘಟನೆ ನಡೆದಿದೆ. ವರಂಗ ಕೆಲ್ ಟೆಕ್ ರಸ್ತೆ ತಿರುವಿನಲ್ಲಿಯೇ ಈ ಘಟನೆ ನಡೆದಿದೆ. ಇದು ಅಪಘಾತ ವಲಯವಾಗಿದ್ದು,

ಅನೇಕ ಅಪಘಾತಗಳು ಸಂಭವಿಸುತ್ತಿವೆ.ರಸ್ತೆಯಲ್ಲಿ ಸೂಚನ ಫಲಕ ಅಳವಡಿಸಬೇಕೆಂದು ಜನರು ಪಟ್ಟು ಹಿಡಿದಿದ್ದಾರೆ. ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು