6:18 AM Monday16 - February 2026
ಬ್ರೇಕಿಂಗ್ ನ್ಯೂಸ್
ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8… ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ… ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ…

ಇತ್ತೀಚಿನ ಸುದ್ದಿ

ಮುಜರಾಯಿ ಸಚಿವೆಯಾಗಿದ್ದರೂ ದೇವಸ್ಥಾನ ಧ್ವಂಸ ಮಾಡಿದ ಬಗ್ಗೆ ಬಾಯಿ ಬಿಡದ ಸಚಿವೆ ಬೇಕಾಗಿಲ್ಲ : ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧದ ಪೋಸ್ಟ್ ವೈರಲ್

16/09/2021, 20:24

ಮಂಗಳೂರು (ReporterKarnataka.com)

ಮುಜರಾಯಿ ಸಚಿವೆಯಾಗಿದ್ದರೂ ದೇವಸ್ಥಾನ ಧ್ವಂಸ ಮಾಡಿದ ಬಗ್ಗೆ ಬಾಯಿ ಬಿಡದ ಸಚಿವೆ ಬೇಕಾಗಿಲ್ಲ ಎನ್ನುವ ಪೋಸ್ಟ್ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ರಾಜ್ಯದಲ್ಲಿ ದೇವಾಲಯಗಳ ನೆಲಸಮ ಮಾಡಲು ಆದೇಶ ಹೊರಡಿಸಿದ ನ್ಯಾಯಲಯ ಹಾಗೂ ದೇವಾಲಯಗಳನ್ನು ನೆಲಸಮ ಮಾಡಲು ಅವಕಾಶ ಒದಗಿಸಿಕೊಟ್ಟ ಆಡಳಿತರೂಢ ಬಿಜೆಪಿ ಸರಕಾರದ ವಿರುದ್ಧ ವಿವಿಧ ಸಂಘಟನೆಗಳು ಹಲವು ನಗರಗಳಲ್ಲಿ ಪ್ರತಿಭಟನೆಗಳನ್ನು ಕೈಗೊಂಡು ಆಕ್ರೋಶವನ್ನು ಹೊರಹಾಕುತ್ತಿದೆ.

ಮಂಗಳೂರು, ಮೈಸೂರು ದಾವಣಗೆರೆ ಸೇರಿದಂತೆ ಹಲವೆಡೆ ಹಿಂದೂ ಸಂಘಟನೆಗಳು ಪ್ರತಿಭಟನೆಗಳನ್ನು ಹಮ್ಮಿಕೊಂಡಿತ್ತು ಏತನ್ಮಧ್ಯೆ ರಾಜ್ಯ ಮುಖ್ಯಮಂತ್ರಿ ಅವಸರ ಅವಸರವಾಗಿ ದೇವಾಲಯಗಳನ್ನು ನೆಲಸಮಗೊಳಿಸಬೇಡಿ ಎಂದು ಹೇಳಿಕೆಯನ್ನು ನೀಡಿದ್ದಾರೆ.

ಹಾಗೆಯೆ ಅನೇಕ ಯುವ ಹಿಂದೂ ಕಾರ್ಯಕರ್ತರು ಬಿಜೆಪಿಯ ಸ್ಥಾನಮಾನಕ್ಕೆ ರಾಜೀನಾಮೆ ನೀಡಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ ಆದರೆ ಇಷ್ಟೆಲ್ಲ ಘಟನೆಗಳ ನಡುವೆ ಮುಜರಾಯಿ ಸಚಿವರಾಗಿರುವ ಶಶಿಕಲ್ಲಾ ಜೊಲ್ಲೆ ಮಾತ್ರ ತುಟಿಕ್ ಪಿಟಿಕ್ ಅಂದಿಲ್ಲ.
ಈಗ ಹಿಂದೂ ಕಾರ್ಯಕರ್ತರ ಕೆಂಗಣ್ಣಿಗೆ ಶಶಿಕಲಾ ಜೊಲ್ಲೆ ಅವರೂ ಗುರಿಯಾಗಿದ್ದು, ಐತಿಹಾಸಿಕ ಚೋಳರ ಕಾಲದ ನಂಜನಗೂಡು ದೇವಾಲಯಗಳನ್ನು ನೆಲಸಮಗೊಳಿಸಿದಾಗಲೂ ಮುಜಾರಾಯಿ ಸಚಿವರು ಯಾವುದೇ ರೀತಿಯ ಪ್ರತಿಕ್ರಿಯೆಯನ್ನು ನೀಡದೆ ಸುಮ್ಮನಿರುವುದು ಹಲವಾರು ಪ್ರಶ್ನೆಗಳಿಗೆ ಎಡೆ ಮಾಡಿಕೊಟ್ಟಿದೆ.

ಇತ್ತೀಚಿನ ಸುದ್ದಿ

ಜಾಹೀರಾತು