6:23 PM Friday22 - May 2026
ಬ್ರೇಕಿಂಗ್ ನ್ಯೂಸ್
ಭಾರತೀಯರ ರಕ್ತಕ್ಕೆ ಪಾಕ್​ನಲ್ಲಿ ಪ್ರತೀಕಾರ: ಪುಲ್ವಾಮಾ ದಾಳಿ ಮಾಸ್ಟರ್‌ ಮೈಂಡ್ ಹಮ್ಜಾ ಬುರ್ಹಾನ್… ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ? ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು ಒಂದು ದೇಶ – ಒಂದು ಚುನಾವಣೆ: ವಿವಿಧ ವರ್ಗಗಳ ಅಭಿಪ್ರಾಯ ಆಲಿಸಿದ ಜಂಟಿ… ದುಬಾರೆಯಲ್ಲಿ ಆನೆಗಳ ಸ್ನಾನ ನಾಳೆಯಿಂದ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ:… ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ

ಇತ್ತೀಚಿನ ಸುದ್ದಿ

Sulia | ಪೆರಾಜೆ: ಕೆರಳಿದ ಕಣಜದ ಹಿಂಡು ಕಚ್ಚಿ ತೀವ್ರ ಗಾಯಗೊಂಡಿದ್ದ ಕೃಷಿಕ ಆಸ್ಪತ್ರೆಯಲ್ಲಿ ಸಾವು

22/05/2026, 18:04

ಸುಳ್ಯ(reporterkarnataka.com): ಅರಂತೋಡು ಸಮೀಪದ ಪೆರಾಜೆ ಗ್ರಾಮದ ಹೊದ್ದೆಟ್ಟಿ ಎಂಬಲ್ಲಿ ಅತ್ಯಂತ ದುರದೃಷ್ಟಕರ ಘಟನೆಯೊಂದು ಸಂಭವಿಸಿದ್ದು, ಕಣಜದ ಹುಳುಗಳ ಹಿಂಡು ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.
ಕೃಷಿ ತೋಟದಲ್ಲಿ ಕೆಲಸ ನಿರತರಾಗಿದ್ದ ಜಗದೀಶ್ ಎಂಬುವವರೇ ಈ ಕಣಜದ ಹುಳುಗಳ ಭೀಕರ ದಾಳಿಗೆ ಸಿಲುಕಿ ಅಕಾಲಿಕ ಮರಣ ಹೊಂದಿದ ದುರ್ದೈವಿಯಾಗಿದ್ದಾರೆ. ಮೃತ ಜಗದೀಶ್ ಅವರು ತಮ್ಮ ತೋಟದ ಜಾಗದಲ್ಲಿ ಕಳೆ ಕಟಾವು ಯಂತ್ರದ (ಗ್ರಾಸ್ ಕಟ್ಟರ್) ಸಹಾಯದಿಂದ ಕಾಡು ಮತ್ತು ಅನಗತ್ಯ ಗಿಡಗಂಟಿಗಳನ್ನು ಕಡಿಯುವ ಕಾಯಕದಲ್ಲಿ ತೊಡಗಿದ್ದರು. ಈ ಸಂದರ್ಭದಲ್ಲಿ ಪೊದೆಯಲ್ಲಿದ್ದ ಕಣಜದ ಗೂಡಿಗೆ ಯಂತ್ರವು ತಗುಲಿದ ಪರಿಣಾಮ ಕೆರಳಿದ ನೂರಾರು ಕಣಜದ ಹುಳುಗಳ ಗುಂಪು ಒಮ್ಮೆಲೇ ಜಗದೀಶ್ ಅವರ ಮೇಲೆರಗಿ ದೇಹದಾದ್ಯಂತ ಮನಬಂದಂತೆ ಕಚ್ಚಿ ತೀವ್ರವಾಗಿ ಗಾಯಗೊಳಿಸಿವೆ.
ದಾಳಿಯಿಂದಾಗಿ ತೀವ್ರ ಅಸ್ವಸ್ಥಗೊಂಡು ಜಾಗದಲ್ಲೇ ಕುಸಿದು ಬಿದ್ದಿದ್ದ ಇವರನ್ನು ತೋಟದ ಬಳಿಯಿದ್ದ ಸ್ಥಳೀಯರು ಗಮನಿಸಿ, ಕೂಡಲೇ ರಕ್ಷಣೆಗೆ ಧಾವಿಸಿ ಸುಳ್ಯದ ಸರ್ಕಾರಿ ಆಸ್ಪತ್ರೆಗೆ ತುರ್ತಾಗಿ ದಾಖಲಿಸಿದ್ದರು. ಆದರೆ ದೇಹದಾದ್ಯಂತ ಕಣಜದ ವಿಷದ ಪ್ರಭಾವ ತೀವ್ರವಾಗಿದ್ದರಿಂದ ಆಸ್ಪತ್ರೆಯಲ್ಲಿ ನೀಡಿದ ಯಾವುದೇ ಚಿಕಿತ್ಸೆಗಳು ಫಲಕಾರಿಯಾಗದೆ ಜಗದೀಶ್ ಅವರು ಕೊನೆಯುಸಿರೆಳೆದಿದ್ದಾರೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ.

ಇತ್ತೀಚಿನ ಸುದ್ದಿ

ಜಾಹೀರಾತು