3:07 PM Wednesday8 - April 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ಅಳಿಯನಿಗೆ ಭರ್ಜರಿ ಪಾರ್ಟಿ: ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ತವರಿನಲ್ಲಿ ಅದ್ದೂರಿ… ಎನ್.ಆರ್.ಪುರ: ಶಿವಮೊಗ್ಗದ ನರ್ಸ್ ಆತ್ಮಹತ್ಯೆ; ಹೊಳೆಗೆ ಹಾರಿ ಜೀವತ್ಯಾಗ Kodagu | ನಟಿ ರಶ್ಮಿಕಾ ಮಂದಣ್ಣಗೆ ತಂದೆಯಿಂದ ವಿರಾಜಪೇಟೆಯ “ಸೆರಿನಿಟಿ ಕಾಟೇಜ್” ಗಿಫ್ಟ್ ಮಧ್ಯಪ್ರಾಚ್ಯ ಯುದ್ಧ: ಕೊಡಗಿನಲ್ಲಿ ಸಿಲುಕಿದ ಇರಾನಿ ದಂಪತಿ; ಪಾಸ್‌ಪೋರ್ಟ್ ಆತಂಕ ಬಾಗಲಕೋಟೆ ಉಪ ಚುನಾವಣೆ | ಬಿಜೆಪಿ ಅಭ್ಯರ್ಥಿ ವಿರುದ್ಧ ಕರಪತ್ರ ಹಂಚಿಕೆ: ಇಬ್ಬರು… ಮುಖ್ಯಮಂತ್ರಿ ಸಿದ್ದರಾಮಯ್ಯ ನಿದ್ದೆಗೆಡಿಸಿದ ಉಪ ಚುನಾವಣೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ Bangalore | ಅಡುಗೆ ಅನಿಲ ದಾಸ್ತಾನು ಕೊರತೆ ಇಲ್ಲ: ವದಂತಿಗಳಿಗೆ ಕಿವಿಗೊಡಬೇಡಿ: ಡಿಸಿ… ಮಂಜೇಶ್ವರ ದಲ್ಲಿ ಸಿದ್ದರಾಮಯ್ಯ ಅಬ್ಬರದ ಪ್ರಚಾರ | ಪ್ರಧಾನಿ ಮೋದಿ ಅವರಿಂದ ಆಹಾರ… ಕೇರಳ ಚುನಾವಣೆಗೆ ಕರ್ನಾಟಕದ ಹಣ?: ತಿರುವನಂತಪುರದಲ್ಲಿ ಕಂತೆ ಕಂತೆ ನೋಟು ಸಮೇತ ಸಿಕ್ಕಿಬಿದ್ದ… ಚಾರಣಕ್ಕೆ ತೆರಳಿ 4 ದಿನಗಳಿಂದ ನಾಪತ್ತೆಯಾಗಿದ್ದ ಕೇರಳದ ಟೆಕ್ಕಿ ಶರಣ್ಯ ಪತ್ತೆ

ಇತ್ತೀಚಿನ ಸುದ್ದಿ

ಶಿರನಾಳ: ಸೆ. 18ರಂದು ಶ್ರೀ ಕೋಂತಕುಮಾರ ವೀರ ಮಲಕಾರಸಿದ್ದ ಸಿದ್ದಾಂತ ನಾಟಕ 

17/09/2021, 09:15

ಭೀಮಣ್ಣ ಪೂಜಾರಿ ಶಿರನಾಳ ವಿಜಯಪುರ
info.reporterkarnataka@gmail.com

ವಿಜಯಪುರ ಶಿರನಾಳದ ಶ್ಯಾಮರಸಿದ್ದೇಶ್ವರ ಗಜಾನನ ತರುಣ ಸಂಘ ಆಶ್ರಯದಲ್ಲಿ ಶ್ರೀ ಕೋಂತ ಕುಮಾರ ವೀರ ಮಲಕಾರ ಸಿದ್ದ ಸಿದ್ದಾಂತ ನಾಟಕ ಶ್ಯಾಮರ ಸಿದ್ದೇಶ್ವರ ದೇವಸ್ಥಾನದ ಎದುರುಗಡೆ ಸೆ. 18ರಂದು ಸಂಜೆ 8 ಗಂಟೆಗೆ ವಿಶೇಷ ಪೂಜೆಯೊಂದಿಗೆ ಜರುಗಲಿದೆ.

ಮುಮ್ಮೇಟ್ಟಗುಡ್ಡ ಶ್ರೀ ಬನಸಿದ್ಧ ಮಹಾರಾಜ ಅವರ ಸಾನಿಧ್ಯದಲ್ಲಿ ನಾಗಠಾಣ ಮಾಜಿ ಶಾಸಕ ವಿಠ್ಠಲ ದೋ. ಕಟಕದೊಂಡ ಉದ್ಘಾಟಿಸುವರು. ಮಖಣಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ರಮೇಶ ಚವ್ಹಾಣ ಅಧ್ಯಕ್ಷತೆ ವಹಿಸುವರು. ವಿಜಯಪುರ ಜಿಪಂ ನಿಕಟಪೂರ್ವ ಅಧ್ಯಕ್ಷೆ ಸುಜಾತಾ ಸೋ. ಕಳ್ಳಿಮನಿ ಹಾಗೂ ಬಬಲೇಶ್ವರ ಪಿಎಸ್ ಐ ಸೋಮನ ಗೌಡ್ರು ಜ್ಯೋತಿ ಬೆಳಗಿಸುವರು. 

ವಿಜಯಪುರ ಎಪಿಎಂಸಿ ಮಾಜಿ ಅಧ್ಯಕ್ಷ ಚನ್ನಪ್ಪ ಗೋ. ದಳವಾಯಿ ಹಾಗೂ ವಿಜಯಪುರ ತಾಪಂ ನಿಕಟಪೂರ್ವ ಅಧ್ಯಕ್ಷ ಕಾಳಪ್ಪ ಬಾ. ಬೆಳ್ಳುಂಡಗಿ ಗಜಾನನ ಫೋಟೋ ಪೂಜೆ ನೆರವೇರಿಸುವರು.

ವಿಜಯಪುರ ಎಪಿಎಂಸಿ ಮಾಜಿ ಸದಸ್ಯ ಸಿದ್ದಣ್ಣ ಸಕ್ರಿ, ಮಖಣಾಪುರ ಪಿಕೆಪಿಎಸ್ ಉಪಾಧ್ಯಕ್ಷ ಪೂಜಪ್ಪ ಮಾ. ಪೂಜಾರಿ ರಂಗಪೂಜೆ ನೆರವೇರಿಸುವರು. ವಿಜಯಪುರ ಬಂಜಾರ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಿ.ಎಲ್. ಚವ್ಹಾಣ, ವಿಜಯಪುರ ತಾಪಂ ನಿಕಟಪೂರ್ವ ಉಪಾಧ್ಯಕ್ಷ ಪಿಂಟು ಗೋ ರಾಠೋಡ ಮಿಂಚು ಹಾರಿಸುವರು. ಮಖಣಾಪುರ ಗ್ರಾಪಂ ಉಪಾಧ್ಯಕ್ಷ ಧನಸಿಂಗ್ ಚವ್ಹಾಣ ಬಲೂನು ಹಾರಿಸುವರು.

ಮುಖ್ಯ ಅತಿಥಿಗಳಾಗಿ ಖ್ಯಾತ ವಾಗ್ಮಿ ಮೋಹನ ಮೇಟಿ, ಪೊಲೀಸ್ ಇಲಾಖೆಯ ದುಂಡಪ್ಪ ಥಂಬದ, ಶಿರನಾಳ ಗ್ರಾಪಂ ಸದಸ್ಯ ಬೆಳ್ಳೋಗಸಿದ್ಧ ಶಿ. ಪೂಜಾರಿ, ಮಖಣಾಪುರ ಎಲ್ ಟಿ2 ಸದಸ್ಯ ಪ್ರಕಾಶ ಮೋ. ಚವ್ಹಾಣ, ಶಿರನಾಳ ಗ್ರಾಪಂ ಸದಸ್ಯ ಡಾ. ವಿಜಯ ಕುಮಾರ್ ಸೋ. ಬಗಲಿ, ಶಿರನಾಳ ಗ್ರಾಪಂ ಸದಸ್ಯ ಕಲ್ಲಪ್ಪ ಸಿ. ತಿಕೋಟಿ, ಶಿರನಾಳ ಗ್ರಾಪಂ ಸದಸ್ಯರಾದ ಗಂಗಾಬಾಯಿ ಪಾ. ಲೋಖಂಡೆ, ಮಹಾದೇವಿ ಸು. ಹಳ್ಳಿ ಹಾಗೂ ಕೊಂದನ ಸಿ. ಸಯದ ಭಾಗವಹಿಸುವರು.

ಇತ್ತೀಚಿನ ಸುದ್ದಿ

ಜಾಹೀರಾತು