6:01 AM Saturday30 - May 2026
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಆಡಳಿತದ ರಾಜ್ಯದಲ್ಲಿ ಇದ್ದೊಬ್ಬ ಒಬಿಸಿ ಸಿಎಂ ಕೆಳಗಿಳಿಸಿ ಅಪಮಾನ: ಮಂಗಳೂರಿನಲ್ಲಿ ಕೇಂದ್ರ… Kodagu | ಕುಶಾಲನಗರ: 15 ದಿನದೊಳಗೆ ದುಷ್ಕರ್ಮಿಗಳ ಗುಂಡೇಟಿಗೆ 2 ಕಾಡು ಕೋಣಗಳು… ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಭಾರತಕ್ಕೆ ಸಿಹಿಸುದ್ದಿ ಕೊಟ್ಟ ಇರಾನ್; 10 ಇಂಡಿಯನ್ ನಾವಿಕರ… Kerala | ಮಾಜಿ ಸಿಎಂ ಪಿಣರಾಯಿ ಮನೆ ಎದುರು ಇ.ಡಿ ವಾಹನಗಳ ಮೇಲೆ… Bangalore | ಐಪಿಎಲ್ ಬೆಟ್ಟಿಂಗ್ ವಿರುದ್ಧ ಸಿಸಿಬಿ ಭರ್ಜರಿ ಕಾರ್ಯಾಚರಣೆ: 23 ಜನ… ಕಾಂಗ್ರೆಸ್‌ ಹೈಡ್ರಾಮಾಕ್ಕೆ ವಿಜಯೇಂದ್ರ ವ್ಯಂಗ್ಯ: ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದ್ರೂ ಅದು… ಬೆಂಗಳೂರಿಗೆ ಮಹಾಮಾರಿ ಎಬೋಲಾ ಎಂಟ್ರಿ?: ಉಗಾಂಡದ ಮಹಿಳೆ ಐಸೋಲೇಷನ್‌ನಲ್ಲಿ..! ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ 30ರಂದು ಮಂಗಳೂರಿಗೆ: ಧರ್ಮಸ್ಥಳದಲ್ಲಿ ವಾಸ್ತವ್ಯ ಗಂಡನ ಸಾವಿನ ನೋವಿನಲ್ಲೂ ಮಾನವೀಯತೆ ಮೆರೆದ ಗರ್ಭಿಣಿ ಪತ್ನಿ! ಕಿಡ್ನಿ, ಹಾರ್ಟ್ ಮತ್ತು… ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ

ಇತ್ತೀಚಿನ ಸುದ್ದಿ

ಶಿರನಾಳ: ಸೆ. 18ರಂದು ಶ್ರೀ ಕೋಂತಕುಮಾರ ವೀರ ಮಲಕಾರಸಿದ್ದ ಸಿದ್ದಾಂತ ನಾಟಕ 

17/09/2021, 09:15

ಭೀಮಣ್ಣ ಪೂಜಾರಿ ಶಿರನಾಳ ವಿಜಯಪುರ
info.reporterkarnataka@gmail.com

ವಿಜಯಪುರ ಶಿರನಾಳದ ಶ್ಯಾಮರಸಿದ್ದೇಶ್ವರ ಗಜಾನನ ತರುಣ ಸಂಘ ಆಶ್ರಯದಲ್ಲಿ ಶ್ರೀ ಕೋಂತ ಕುಮಾರ ವೀರ ಮಲಕಾರ ಸಿದ್ದ ಸಿದ್ದಾಂತ ನಾಟಕ ಶ್ಯಾಮರ ಸಿದ್ದೇಶ್ವರ ದೇವಸ್ಥಾನದ ಎದುರುಗಡೆ ಸೆ. 18ರಂದು ಸಂಜೆ 8 ಗಂಟೆಗೆ ವಿಶೇಷ ಪೂಜೆಯೊಂದಿಗೆ ಜರುಗಲಿದೆ.

ಮುಮ್ಮೇಟ್ಟಗುಡ್ಡ ಶ್ರೀ ಬನಸಿದ್ಧ ಮಹಾರಾಜ ಅವರ ಸಾನಿಧ್ಯದಲ್ಲಿ ನಾಗಠಾಣ ಮಾಜಿ ಶಾಸಕ ವಿಠ್ಠಲ ದೋ. ಕಟಕದೊಂಡ ಉದ್ಘಾಟಿಸುವರು. ಮಖಣಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ರಮೇಶ ಚವ್ಹಾಣ ಅಧ್ಯಕ್ಷತೆ ವಹಿಸುವರು. ವಿಜಯಪುರ ಜಿಪಂ ನಿಕಟಪೂರ್ವ ಅಧ್ಯಕ್ಷೆ ಸುಜಾತಾ ಸೋ. ಕಳ್ಳಿಮನಿ ಹಾಗೂ ಬಬಲೇಶ್ವರ ಪಿಎಸ್ ಐ ಸೋಮನ ಗೌಡ್ರು ಜ್ಯೋತಿ ಬೆಳಗಿಸುವರು. 

ವಿಜಯಪುರ ಎಪಿಎಂಸಿ ಮಾಜಿ ಅಧ್ಯಕ್ಷ ಚನ್ನಪ್ಪ ಗೋ. ದಳವಾಯಿ ಹಾಗೂ ವಿಜಯಪುರ ತಾಪಂ ನಿಕಟಪೂರ್ವ ಅಧ್ಯಕ್ಷ ಕಾಳಪ್ಪ ಬಾ. ಬೆಳ್ಳುಂಡಗಿ ಗಜಾನನ ಫೋಟೋ ಪೂಜೆ ನೆರವೇರಿಸುವರು.

ವಿಜಯಪುರ ಎಪಿಎಂಸಿ ಮಾಜಿ ಸದಸ್ಯ ಸಿದ್ದಣ್ಣ ಸಕ್ರಿ, ಮಖಣಾಪುರ ಪಿಕೆಪಿಎಸ್ ಉಪಾಧ್ಯಕ್ಷ ಪೂಜಪ್ಪ ಮಾ. ಪೂಜಾರಿ ರಂಗಪೂಜೆ ನೆರವೇರಿಸುವರು. ವಿಜಯಪುರ ಬಂಜಾರ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಿ.ಎಲ್. ಚವ್ಹಾಣ, ವಿಜಯಪುರ ತಾಪಂ ನಿಕಟಪೂರ್ವ ಉಪಾಧ್ಯಕ್ಷ ಪಿಂಟು ಗೋ ರಾಠೋಡ ಮಿಂಚು ಹಾರಿಸುವರು. ಮಖಣಾಪುರ ಗ್ರಾಪಂ ಉಪಾಧ್ಯಕ್ಷ ಧನಸಿಂಗ್ ಚವ್ಹಾಣ ಬಲೂನು ಹಾರಿಸುವರು.

ಮುಖ್ಯ ಅತಿಥಿಗಳಾಗಿ ಖ್ಯಾತ ವಾಗ್ಮಿ ಮೋಹನ ಮೇಟಿ, ಪೊಲೀಸ್ ಇಲಾಖೆಯ ದುಂಡಪ್ಪ ಥಂಬದ, ಶಿರನಾಳ ಗ್ರಾಪಂ ಸದಸ್ಯ ಬೆಳ್ಳೋಗಸಿದ್ಧ ಶಿ. ಪೂಜಾರಿ, ಮಖಣಾಪುರ ಎಲ್ ಟಿ2 ಸದಸ್ಯ ಪ್ರಕಾಶ ಮೋ. ಚವ್ಹಾಣ, ಶಿರನಾಳ ಗ್ರಾಪಂ ಸದಸ್ಯ ಡಾ. ವಿಜಯ ಕುಮಾರ್ ಸೋ. ಬಗಲಿ, ಶಿರನಾಳ ಗ್ರಾಪಂ ಸದಸ್ಯ ಕಲ್ಲಪ್ಪ ಸಿ. ತಿಕೋಟಿ, ಶಿರನಾಳ ಗ್ರಾಪಂ ಸದಸ್ಯರಾದ ಗಂಗಾಬಾಯಿ ಪಾ. ಲೋಖಂಡೆ, ಮಹಾದೇವಿ ಸು. ಹಳ್ಳಿ ಹಾಗೂ ಕೊಂದನ ಸಿ. ಸಯದ ಭಾಗವಹಿಸುವರು.

ಇತ್ತೀಚಿನ ಸುದ್ದಿ

ಜಾಹೀರಾತು