ಇತ್ತೀಚಿನ ಸುದ್ದಿ
ಚಿಕ್ಕಮಗಳೂರು | ಆಮ್ಲಜನಕದ ಕೊರತೆ: ಬಾವಿ ಕ್ಲೀನ್ ಮಾಡುತ್ತಿದ್ದ ವ್ಯಕ್ತಿ ದಾರುಣ ಸಾವು
25/05/2026, 20:20
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಬಾವಿ ಕ್ಲೀನ್ ಮಾಡುವಾಗ ಆಮ್ಲಜನಕದ ಕೊರತೆಯಿಂದ ವ್ಯಕ್ತಿ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ನಗರದ ಉಂಡೇದಾಸರಹಳ್ಳಿ ಬಡಾವಣೆಯಲ್ಲಿ ನಡೆದಿದೆ.

ಮೋಹನ್ (40) ಮೃತ ದುರ್ದೈವಿ.ದರ್ಶನ್ ಎಂಬುವರ ಮನೆಯ ಬಾವಿ ಕ್ಲೀನ್ ಮಾಡಲು ಮೋಹನ್ ಹೋಗಿದ್ದರು.
ಬಾವಿ ಕ್ಲೀನ್ ಮಾಡಲು ಬಾವಿಯೊಳಗೆ ಇಳಿದಾಗ ಉಸಿರಾಟದ ಸಮಸ್ಯೆಯಿಂದ ಅವರು ಸಾವನ್ನಪ್ಪಿದ್ದಾರೆ.
ಸ್ಥಳಕ್ಕೆ ನಗರ ಠಾಣಾ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದ್ದಾರೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.












