10:28 PM Monday25 - May 2026
ಬ್ರೇಕಿಂಗ್ ನ್ಯೂಸ್
ಕೊಲ್ಲೂರು ಆಕ್ಸಿಡೆಂಟ್ | ಮೃತ ಮಹಿಳೆಯ ಮೈ ಮೇಲಿನ ಚಿನ್ನಾಭರಣ ಕದ್ದ ಕೇಸಿಗೆ… ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ… ಮಂಗಳೂರು ವಿಮಾನ ದುರಂತ | ಕಾಕ್‌ಪಿಟ್‌ನಲ್ಲಿ ಹಾರಾಟದ ವೇಳೆ 1 ಗಂಟೆ 40… ಭಾರತೀಯರ ರಕ್ತಕ್ಕೆ ಪಾಕ್​ನಲ್ಲಿ ಪ್ರತೀಕಾರ: ಪುಲ್ವಾಮಾ ದಾಳಿ ಮಾಸ್ಟರ್‌ ಮೈಂಡ್ ಹಮ್ಜಾ ಬುರ್ಹಾನ್… ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ? ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು ಒಂದು ದೇಶ – ಒಂದು ಚುನಾವಣೆ: ವಿವಿಧ ವರ್ಗಗಳ ಅಭಿಪ್ರಾಯ ಆಲಿಸಿದ ಜಂಟಿ… ದುಬಾರೆಯಲ್ಲಿ ಆನೆಗಳ ಸ್ನಾನ ನಾಳೆಯಿಂದ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ:…

ಇತ್ತೀಚಿನ ಸುದ್ದಿ

ಮಹಾರಾಷ್ಟ್ರದ ಅಂಬೇನಾಳಿ ಘಾಟ್‌ನಲ್ಲಿ ಪ್ರಪಾತಕ್ಕೆ ಬಿದ್ದ ಕಾರು: 8 ಯುವಕರ ಸಾವು; ಸಿಎಂ ಫಡ್ನವೀಸ್ ತೀವ್ರ ಆಘಾತ

25/05/2026, 22:21

ಮುಂಬೈ(reporterkarnataka.com): ಎಸ್‌ಯುವಿ ಕಾರೊಂದು ಸುಮಾರು 1 ಸಾವಿರ ಅಡಿ ಆಳದ ಕಣಿವೆಗೆ ಬಿದ್ದು 8 ಯುವಕರು ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯಲ್ಲಿ ನಡೆದಿದೆ.ಮೃತರು ಮಹಾರಾಷ್ಟ್ರದ ಸತಾರ ಹಾಗೂ ರತ್ನಗಿರಿ ನಗರದವರು ಎಂದು ತಿಳಿದು ಬಂದಿದೆ.
ಪೋಳಾದಪುರ್-ಮಹಾಬಲೇಶ್ವರ ರಸ್ತೆಯ ಅಂಬೇನಾಳಿ ಘಾಟ್ ಬಳಿ ಈ ದುರಂತ ಭಾನುವಾರ ಬೆಳಗಿನ ಜಾವ ಸಂಭವಿಸಿದೆ ಎಂದು ರಾಯಗಢ ಎಸ್‌ಪಿ ತಿಳಿಸಿದ್ದಾರೆ.ಅಂಬೇನಾಳಿ ಘಾಟ್ ಬಳಿ ಕಡಿದಾದ ರಸ್ತೆಯ ತಿರುವಿನಲ್ಲಿ ಕಾರು ಹೋಗುತ್ತಿರುವಾಗ ಆಳವಾದ ಕಣಿವೆಗೆ ನಿಯಂತ್ರಣ ತಪ್ಪಿ ಬಿದ್ದಿದೆ. ಆ ಪ್ರದೇಶದಲ್ಲಿ ಮೊಬೈಲ್ ನೆಟ್‌ವರ್ಕ್ ಸಹ ಸಿಗದಿದ್ದರಿಂದ ತುರ್ತು ಸಹಾಯ ಸಾಧ್ಯವಾಗಿರಲಿಲ್ಲ. ಇದರಿಂದ ಮೃತರ ಕುಟುಂಬದವರು ಆತಂಕಗೊಂಡು ತಮ್ಮವರು ಸಂಪರ್ಕಕಕ್ಕೆ ಸಿಗುತ್ತಿಲ್ಲ ಎಂದು ಪೊಲೀಸರಿಗೆ ಮಾಹಿತಿ ನೀಡಿದ್ದರು.
ಮಾಹಿತಿ ತಿಳಿದು ಪೊಲೀಸರು ಕಾರ್ಯಾಚರಣೆ ಕೈಗೊಂಡಾಗ ಭೀಕರ ಅಪಘಾತ ಸಂಭವಿಸಿರುವುದು ಕಂಡು ಬಂದಿದೆ.
ಮೃತರನ್ನು ಸತಾರಾ ನಿವಾಸಿಗಳಾದ ರಿತೇಶ್ ಲೋಖಂಡೆ (22), ಸುಹಾಸ್ ಲೋಖಂಡೆ (20), ಉತ್ಕರ್ಷ್ ಶಿಂಗ್ಟೆ (21), ನಿಖಿಲ್ ಶಿಂಗ್ಟೆ (25), ಮಹೇಶ್ ಪವಾರ್ (25), ಆದಿತ್ಯ ಸಾಳುಂಖೆ (21), ರಾಜೇಶ್ ಕಾಟ್ಕರ್ (35), ಮತ್ತು ರತ್ನಗಿರಿಯ ಅಂಶ್ ಚವಾಣ್ (19) ಎಂದು ಗುರುತಿಸಲಾಗಿದೆ.
ಯುವಕರು ಮೋಜಿಗಾಗಿ ರತ್ನಾಗಿರಿಯ ಕಡಲತೀರ ದಾಪೋಲಿಗೆ ತೆರಳಿದ್ದರು. ಪ್ರವಾಸ ಮುಗಿಸಿ ವಾಪಸ್ ದಾಪೋಲಿಯಿಂದ ಸತಾರಕ್ಕೆ ಬರುವಾಗ ಈ ದುರಂತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಣಿವೆಯಲ್ಲಿ ಸಿಲುಕಿದ್ದ ಮೃತದೇಹಗಳನ್ನು ಹಾಗೂ ಕಾರನ್ನು ಪೊಲೀಸರು ಎನ್‌ಡಿಆರ್‌ಎಫ್ ಸಿಬ್ಬಂದಿ ಹಾಗೂ ಸ್ಥಳೀಯರ ನೆರವಿನಿಂದ ಭಾರಿ ಹರಸಾಹಸಪಟ್ಟು ಮೇಲೆ ತಂದಿದ್ದಾರೆ. ಈ ಕುರಿತ ಅಂಬೇನಾಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನು, ಘಟನೆ ಬಗ್ಗೆ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡಣವೀಸ್ ಅವರು ತೀವ್ರ ಆಘಾತ ವ್ಯಕ್ತಪಡಿಸಿದ್ದು ಇದು ಅತ್ಯಂತ ನೋವಿನ ಸಂಗತಿ, ಮೃತ ಯುವಕರ ಕುಟುಂಬದವರ ಜೊತೆ ಮಾತನಾಡಿದ್ದೇನೆ ಎಂದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು