11:32 AM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಮಹಾರಾಷ್ಟ್ರದ ಅಂಬೇನಾಳಿ ಘಾಟ್‌ನಲ್ಲಿ ಪ್ರಪಾತಕ್ಕೆ ಬಿದ್ದ ಕಾರು: 8 ಯುವಕರ ಸಾವು; ಸಿಎಂ ಫಡ್ನವೀಸ್ ತೀವ್ರ ಆಘಾತ

25/05/2026, 22:21

ಮುಂಬೈ(reporterkarnataka.com): ಎಸ್‌ಯುವಿ ಕಾರೊಂದು ಸುಮಾರು 1 ಸಾವಿರ ಅಡಿ ಆಳದ ಕಣಿವೆಗೆ ಬಿದ್ದು 8 ಯುವಕರು ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯಲ್ಲಿ ನಡೆದಿದೆ.ಮೃತರು ಮಹಾರಾಷ್ಟ್ರದ ಸತಾರ ಹಾಗೂ ರತ್ನಗಿರಿ ನಗರದವರು ಎಂದು ತಿಳಿದು ಬಂದಿದೆ.
ಪೋಳಾದಪುರ್-ಮಹಾಬಲೇಶ್ವರ ರಸ್ತೆಯ ಅಂಬೇನಾಳಿ ಘಾಟ್ ಬಳಿ ಈ ದುರಂತ ಭಾನುವಾರ ಬೆಳಗಿನ ಜಾವ ಸಂಭವಿಸಿದೆ ಎಂದು ರಾಯಗಢ ಎಸ್‌ಪಿ ತಿಳಿಸಿದ್ದಾರೆ.ಅಂಬೇನಾಳಿ ಘಾಟ್ ಬಳಿ ಕಡಿದಾದ ರಸ್ತೆಯ ತಿರುವಿನಲ್ಲಿ ಕಾರು ಹೋಗುತ್ತಿರುವಾಗ ಆಳವಾದ ಕಣಿವೆಗೆ ನಿಯಂತ್ರಣ ತಪ್ಪಿ ಬಿದ್ದಿದೆ. ಆ ಪ್ರದೇಶದಲ್ಲಿ ಮೊಬೈಲ್ ನೆಟ್‌ವರ್ಕ್ ಸಹ ಸಿಗದಿದ್ದರಿಂದ ತುರ್ತು ಸಹಾಯ ಸಾಧ್ಯವಾಗಿರಲಿಲ್ಲ. ಇದರಿಂದ ಮೃತರ ಕುಟುಂಬದವರು ಆತಂಕಗೊಂಡು ತಮ್ಮವರು ಸಂಪರ್ಕಕಕ್ಕೆ ಸಿಗುತ್ತಿಲ್ಲ ಎಂದು ಪೊಲೀಸರಿಗೆ ಮಾಹಿತಿ ನೀಡಿದ್ದರು.
ಮಾಹಿತಿ ತಿಳಿದು ಪೊಲೀಸರು ಕಾರ್ಯಾಚರಣೆ ಕೈಗೊಂಡಾಗ ಭೀಕರ ಅಪಘಾತ ಸಂಭವಿಸಿರುವುದು ಕಂಡು ಬಂದಿದೆ.
ಮೃತರನ್ನು ಸತಾರಾ ನಿವಾಸಿಗಳಾದ ರಿತೇಶ್ ಲೋಖಂಡೆ (22), ಸುಹಾಸ್ ಲೋಖಂಡೆ (20), ಉತ್ಕರ್ಷ್ ಶಿಂಗ್ಟೆ (21), ನಿಖಿಲ್ ಶಿಂಗ್ಟೆ (25), ಮಹೇಶ್ ಪವಾರ್ (25), ಆದಿತ್ಯ ಸಾಳುಂಖೆ (21), ರಾಜೇಶ್ ಕಾಟ್ಕರ್ (35), ಮತ್ತು ರತ್ನಗಿರಿಯ ಅಂಶ್ ಚವಾಣ್ (19) ಎಂದು ಗುರುತಿಸಲಾಗಿದೆ.
ಯುವಕರು ಮೋಜಿಗಾಗಿ ರತ್ನಾಗಿರಿಯ ಕಡಲತೀರ ದಾಪೋಲಿಗೆ ತೆರಳಿದ್ದರು. ಪ್ರವಾಸ ಮುಗಿಸಿ ವಾಪಸ್ ದಾಪೋಲಿಯಿಂದ ಸತಾರಕ್ಕೆ ಬರುವಾಗ ಈ ದುರಂತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಣಿವೆಯಲ್ಲಿ ಸಿಲುಕಿದ್ದ ಮೃತದೇಹಗಳನ್ನು ಹಾಗೂ ಕಾರನ್ನು ಪೊಲೀಸರು ಎನ್‌ಡಿಆರ್‌ಎಫ್ ಸಿಬ್ಬಂದಿ ಹಾಗೂ ಸ್ಥಳೀಯರ ನೆರವಿನಿಂದ ಭಾರಿ ಹರಸಾಹಸಪಟ್ಟು ಮೇಲೆ ತಂದಿದ್ದಾರೆ. ಈ ಕುರಿತ ಅಂಬೇನಾಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನು, ಘಟನೆ ಬಗ್ಗೆ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡಣವೀಸ್ ಅವರು ತೀವ್ರ ಆಘಾತ ವ್ಯಕ್ತಪಡಿಸಿದ್ದು ಇದು ಅತ್ಯಂತ ನೋವಿನ ಸಂಗತಿ, ಮೃತ ಯುವಕರ ಕುಟುಂಬದವರ ಜೊತೆ ಮಾತನಾಡಿದ್ದೇನೆ ಎಂದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು