7:39 AM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

Breaking : ಮಕ್ಕಳ ಕ್ಷೀರಭಾಗ್ಯ ಯೋಜನೆಯ ಹಾಲಿನ ಪುಡಿಯೂ ಅನ್ಯರ ಪಾಲು: ಅಕ್ರಮ ಸಾಗಾಟ ಪತ್ತೆ ಮಾಡಿದ ಅಥಣಿ ಗ್ರಾಮಸ್ಥರು !

17/09/2021, 11:48

ರಾಹುಲ್ ಅಥಣಿ ಬೆಳಗಾವಿ
info.reporterkarnataka@gmail.com

ಪಡಿತರ ಅಕ್ಕಿ ಅಕ್ರಮ ಸಾಗಾಟ, ಅಂಗನವಾಡಿ ಮಕ್ಕಳಿಗೆ ನೀಡುವ ಮೊಟ್ಟೆಯಲ್ಲಿ ಅವ್ಯವಹಾರದ ನಡುವೆ ಇನ್ನೊಂದು ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ. ಅಂಗನವಾಡಿ ಮತ್ತು ಶಾಲೆಗಳಲ್ಲಿ ಕ್ಷೀರಭಾಗ್ಯ ಯೋಜನೆಯಡಿ ನೀಡುವ ಹಾಲಿನ ಪುಡಿಯನ್ನು ಅಕ್ರಮ ಸಾಗಾಟ ನಡೆದಿದೆ.

ಅಪೌಷ್ಟಿಕತೆ ಹೋಗಲಾಡಿಸಲು ಸರಕಾರ ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ, ಅಂಗನವಾಡಿ ಹಾಗೂ ಶಾಲೆಗಳಲ್ಲಿ ಕ್ಷೀರಭಾಗ್ಯ ಯೋಜನೆಯಡಿಯಲ್ಲಿ ಹಾಲಿನ ಪುಡಿ ಸರಬರಾಜು ಮಾಡಲಾಗುತ್ತದೆ. ಆದರೆ ಚಿಕ್ಕೋಡಿ ಉಪವಿಭಾಗ ಅಥಣಿ ತಾಲೂಕಿನ ಖಿಳೆಗಾಂವ್ ಗ್ರಾಮದಲ್ಲಿ ಅಕ್ರಮವಾಗಿ ಹಾಲಿನ ಪುಡಿ ಸಾಗಾಟ ಮಾಡುತ್ತಿರುವ ಓರ್ವನನ್ನು ಗ್ರಾಮಸ್ಥರು ಸೆರೆಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ನಡೆದಿದೆ.

ಅಕ್ರಮವಾಗಿ ಕ್ಷೀರಭಾಗ್ಯ ಯೋಜನೆಯ ಹಾಲಿನ ಪುಡಿಯನ್ನು ಬೈಕ್ ಮೇಲೆ ಸಾಗಾಟ ಮಾಡುತ್ತಿರುವ ಅಥಣಿ ತಾಲೂಕಿನ ಅನಂತಪುರ ಗ್ರಾಮದ ಗಂಗಾಧರ ಶಂಕರ ಪತ್ತಾರ ಎಂದು ತಿಳಿದು ಬಂದಿದೆ. 

ಕಳೆದ ಒಂದು ವರ್ಷಗಳಿಂದ, ಇದೇ ರೀತಿಯಾಗಿ ಅಕ್ರಮವಾಗಿ ಸಾಗಾಟ ಮಾಡುತ್ತಿರುವುದನ್ನು ಗ್ರಾಮಸ್ಥರು ಗಮನಿಸಿ, ಖಿಳೇಗಾಂವ್ ಗ್ರಾಮದ ಅಂಗನವಾಡಿ ಹಾಗೂ ಪ್ರಾಥಮಿಕ ಶಾಲೆಗಳಿಂದ ಹಾಲಿನಪುಡಿ ಪಾಕೆಟ್ಟು ತೆಗೆದುಕೊಂಡು ಸಾಗಾಟ ಮಾಡುತ್ತಿರುವ ವ್ಯಕ್ತಿಯನ್ನು ಗ್ರಾಮಸ್ಥರು ತಡೆಹಿಡಿದು ತರಾಟೆ ತೆಗೆದುಕೊಂಡರು ಘಟನೆ ಸಂಭವಿಸಿದೆ. ಅದರೊಂದಿಗೆ ಅವನನ್ನು ಅಥಣಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಸ್ಥಳಕ್ಕೆ ಅಥಣಿ ಪೊಲೀಸ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಥಣಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ  ನಡೆದಿದೆ

ಇತ್ತೀಚಿನ ಸುದ್ದಿ

ಜಾಹೀರಾತು