9:10 AM Wednesday5 - August 2026
ಬ್ರೇಕಿಂಗ್ ನ್ಯೂಸ್
ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ…

ಇತ್ತೀಚಿನ ಸುದ್ದಿ

ಕಲಬುರಗಿಯಲ್ಲಿ ಭಾರಿ ಮಳೆ: ಸಿಡಿಲು ಬಡಿದು ನೆಲಕ್ಕುರುಳಿದ ಮನೆ; ಮಠ ಜಲಾವೃತ

27/05/2026, 17:32

ಕಲಬುರಗಿ(reporterkarnataka.com): ನಗರವು ಸೇರಿದಂತೆ ಜಿಲ್ಲೆಯಲ್ಲಿ ಬುಧವಾರ ನಸುಕಿನ ಜಾವ ಭಾರಿ ಮಳೆ ಬಿದ್ದಿದೆ. ಮಳೆಗೆ ಸೇಡಂ ತಾಲೂಕಿನ ಲಾಡ್ಲಾಪುರದಲ್ಲಿ ವಿದ್ಯುತ್ ಕಂಬ ಉರಳಿ ಬಿದ್ದಿದ್ದು, ತೊಟ್ನಳ್ಳಿಯಲ್ಲಿ ಮಠ ಜಲಾವೃತಗೊಂಡಿದೆ ಮತ್ತು ಗ್ರಾಮದ ಮನೆಗೆ ಸಿಡಿಲು ಬಡಿದೆ. ಜಿಲ್ಲೆಯ ಸೇಡಂ ಚಿತ್ತಾಪುರ, ಅಫಜಲಪುರ, ಜೇವರ್ಗಿ, ಕಾಳಗಿ ತಾಲೂಕಿನಲ್ಲಿ ಅಲ್ಲಲ್ಲಿ ಭಾರಿ ಮಳೆಯಾಗಿದೆ.ತೋಟಗಾರಿಕೆ ಬೆಳೆಗಳು ಸೇರಿದಂತೆ ಇತರೆ ವಾಣಿಜ್ಯ ಬೆಳೆಗಳಿಗೆ ತೀವ್ರ ಹಾನಿ ಉಂಟಾಗಿದೆ ಎಂದು ಮೂಲಗಳು ತಿಳಿಸಿವೆ.
ಇದರಿಂದಾಗಿ ರಸ್ತೆಗುಂಟ ಹಾಗೂ ಜನವಸತಿ ಇರುವಲ್ಲಿ ಕೆಲವು ಮರಗಳು ಧರಾಶಾಹಿಯಾಗಿದ್ದು, ವಿದ್ಯುತ್ ಕಂಬಗಳು ಉರುಳಿ ಬಿದ್ದಿವೆ. ಇದರಿಂದ ಯಾವುದೇ ಪ್ರಾಣಹಾನಿಯಾಗಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಆದರೆ ಸೇಡಂ ತಾಲೂಕಿನಲ್ಲಿ ಭಾರಿ ಮಳೆಯಾಗಿದ್ದು ಅಂದಾಜು 96 ಮಿಲಿ ಮೀಟರ್ ಮಳೆಯಾಗಿದೆ ಎಂದು ಜಿಲ್ಲಾಡಳಿತದ ಮೂಲಗಳು ತಿಳಿಸಿವೆ.
ಸೇಡಂ ತಾಲೂಕಿನ ತೊಟ್ನಳ್ಳಿ ಗ್ರಾಮದಲ್ಲಿ ವಿದ್ಯುತ್ ಕಂಬ ಉರುಳಿ ಬಿದ್ದು ಮನೆಗೆ ಜಖಂ ಆಗಿದೆ. ಅಲ್ಲದೆ ಸಿಡಿಲು ಬಡಿದು ಮನೆಯೆಂದು ಸಂಪೂರ್ಣವಾಗಿ ಧರಾಶಾಹಿಯಾಗಿದೆ. ಅದೇ ರೀತಿಯಾಗಿ ಲಾಡ್ಲಾಪುರದಲ್ಲೂ ಕೂಡ ವಿದ್ಯುತ್ ಕಂಬ ಉರಳಿ ಬಿದ್ದಿದೆ. ಆದರೆ ಯಾವುದೇ ಸಾವು ನೋವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ.
ತೊಟ್ನಳ್ಳಿ ಬಳಿಯ ಮಹಾಂತೇಶ್ವರ ಮಠಕ್ಕೂ ಕೂಡ ಭಾರಿ ಪ್ರಮಾಣದಲ್ಲಿ ನೀರು ನುಗ್ಗಿದ್ದರಿಂದ ಮಠ ಸಂಪೂರ್ಣ ಜಲಾವೃತವಾಗಿದೆ ಎಂದು ಮೂಲಗಳು ತಿಳಿಸಿವೆ.

*ಸಿಡಿಲಿಗೆ 18 ಕುರಿ ಬಲಿ:* ಕಾಳಗಿ ತಾಲೂಕಿನಲ್ಲೂ ಕೂಡ ಭಾರೀ ಮಳೆ ಬಿದ್ದಿದೆ ಮಳೆ ಮತ್ತು ಸಿಡಿಲಿನ ಆರ್ಭಟಕ್ಕೆ 18 ಕುರಿಗಳು ಸಾವನ್ನಪ್ಪಿವೆ ಎಂದು ವರದಿಯಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು