9:12 PM Thursday18 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ಪ್ರಧಾನಿ ಮೋದಿ ಜನ್ಮದಿನಾಚರಣೆ: ಮಂಗಳೂರಿನಲ್ಲಿ ಕಾಂಗ್ರೆಸ್ ನಿಂದ ಟೀ, ಪಕೋಡ ಮಾರಿ ವಿನೂತನ ಪ್ರತಿಭಟನೆ

17/09/2021, 17:57

ಮಂಗಳೂರು(reporterkarnataka.com); ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದ ಮಿನಿ ವಿಧಾನ ಸೌಧ ಬಳಿ ಶೂ ಪಾಲೀಸ್,ಟೀ ಸ್ಟಾಲ್, ಪಕೋಡ ಸ್ಟಾಲ್ ತೆರೆದು ವಿನೂತನವಾಗಿ ಪ್ರತಿಭಟನೆ ನಡೆಸಲಾಯಿತು.ಮೋದಿ ಜನ್ಮದಿನಾಚರಣೆಯನ್ನು‘ರಾಷ್ಟ್ರೀಯ ನಿರುದ್ಯೋಗ’ ದಿನವಾಗಿ ಆಚರಿಸಲು ರಾಷ್ಟ್ರೀಯ ಯುವ ಕಾಂಗ್ರೆಸ್ ಕರೆ ನೀಡಿತ್ತು. ಈ ಹಿನ್ನೆಲೆಯಲ್ಲಿ  ಶುಕ್ರವಾರ ಸಂಜೆ 3.00 ಗಂಟೆಗೆ ಮಂಗಳೂರಿನ ಮಿನಿ ವಿಧಾನ ಸೌಧ ಬಳಿ ಟಿ ಸ್ಟಾಲ್’, ‘ಶೂ ಪಾಲೀಸ್’, ‘ಪಕೋಡ ಸ್ಟಾಲ್’ ತೆರದು ಅಣುಕು ಪ್ರದರ್ಶನ ನಡೆಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. 


ಈ ಸಂದರ್ಭದಲ್ಲಿ ಮಾಜಿ  ಸಚಿವ ಬಿ.  ರಮಾನಾಥ ರೈ  ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿಫಲತೆಯ ಬಗ್ಗೆ ವಿವರಿಸಿದರು. ಉದ್ಯೋಗ ಸೃಷ್ಟಿಗೆ ಅವರು ಒತ್ತಾಯಿಸಿದರು.  ಈ ವೇಳೆ ವೀ ವಾಂಟ್ ಎಂಪ್ಲ್ಯಾ ಮೆಂಟ್ ಎಂದು ಘೋಷಣೆಯ ಬೋರ್ಡ್ ಅಳವಡಿಸಿದಿದ್ದರು.


ಪ್ರತಿಭಟನಾ ನಿರತರು ವಾಹನ ಗಳನ್ನು ನಿಲ್ಲಿಸಿ ಉಚಿತ ಪಕೋಡ ನೀಡಿ ಪ್ರಧಾನಿ ಹುಟ್ಟುಹಬ್ಬವನ್ನು ಆಚರಣೆಯನ್ನು ಆಚರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು