3:34 PM Tuesday2 - June 2026
ಬ್ರೇಕಿಂಗ್ ನ್ಯೂಸ್
ತಮಿಳುನಾಡಿನಲ್ಲಿ ಸಂಚಲನ ಸೃಷ್ಟಿಸಿದ ಅಣ್ಣಾಮಲೈ ನಡೆ; ಬಿಜೆಪಿಗೆ ಶುರುವಾಯ್ತು ಢವ ಢವ ನಾವು ಪಕ್ಷನಿಷ್ಠರು, ಜಮೀರ್‌ ವಿರುದ್ದ ಬೃಹತ್‌ ಷಡ್ಯಂತ್ರ: ವೈರಲ್‌ ಆಡಿಯೋ ಬಗ್ಗೆ ಸಿರಾಜ್‌… ಪಕ್ಷ ವಿರೋಧಿ ಕೃತ್ಯಕ್ಕೆ ಸಿಕ್ತು ಸಾಕ್ಷ್ಯ: ಜಮೀರ್ ಅಹ್ಮದ್ ಸ್ಫೋಟಕ ಆಡಿಯೋ ವೈರಲ್ ಕಾಂಗ್ರೆಸ್ ಆಡಳಿತದ ರಾಜ್ಯದಲ್ಲಿ ಇದ್ದೊಬ್ಬ ಒಬಿಸಿ ಸಿಎಂ ಕೆಳಗಿಳಿಸಿ ಅಪಮಾನ: ಮಂಗಳೂರಿನಲ್ಲಿ ಕೇಂದ್ರ… Kodagu | ಕುಶಾಲನಗರ: 15 ದಿನದೊಳಗೆ ದುಷ್ಕರ್ಮಿಗಳ ಗುಂಡೇಟಿಗೆ 2 ಕಾಡು ಕೋಣಗಳು… ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಭಾರತಕ್ಕೆ ಸಿಹಿಸುದ್ದಿ ಕೊಟ್ಟ ಇರಾನ್; 10 ಇಂಡಿಯನ್ ನಾವಿಕರ… Kerala | ಮಾಜಿ ಸಿಎಂ ಪಿಣರಾಯಿ ಮನೆ ಎದುರು ಇ.ಡಿ ವಾಹನಗಳ ಮೇಲೆ… Bangalore | ಐಪಿಎಲ್ ಬೆಟ್ಟಿಂಗ್ ವಿರುದ್ಧ ಸಿಸಿಬಿ ಭರ್ಜರಿ ಕಾರ್ಯಾಚರಣೆ: 23 ಜನ… ಕಾಂಗ್ರೆಸ್‌ ಹೈಡ್ರಾಮಾಕ್ಕೆ ವಿಜಯೇಂದ್ರ ವ್ಯಂಗ್ಯ: ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದ್ರೂ ಅದು… ಬೆಂಗಳೂರಿಗೆ ಮಹಾಮಾರಿ ಎಬೋಲಾ ಎಂಟ್ರಿ?: ಉಗಾಂಡದ ಮಹಿಳೆ ಐಸೋಲೇಷನ್‌ನಲ್ಲಿ..!

ಇತ್ತೀಚಿನ ಸುದ್ದಿ

Bantwala | ಮಾಣಿಯ ಕರ್ನಾಟಕ ಪ್ರೌಢ ಶಾಲೆಯ ಇಬ್ಬರು ಸಿಬ್ಬಂದಿಗಳಿಗೆ ಬೀಳ್ಕೊಡುಗೆ

02/06/2026, 15:33

ಮಾಣಿ(reporterkarnataka.com): ಕಡು ಬಡತನದ ಮಧ್ಯೆಯೂ ಅವಿಭಕ್ತ ಕುಟುಂಬದ ಜವಾಬ್ದಾರಿಯುತ ಯಜಮಾನನಾಗಿ, ಸಾಮಾಜಿಕವಾಗಿ, ಧಾರ್ಮಿಕವಾಗಿ, ಸಾಂಸ್ಕೃತಿಕವಾಗಿ ಮತ್ತು ಯಕ್ಷ ಪ್ರೇಮಿಯಾಗಿ ಬೆಳೆದವರು ತಿಮ್ಮಪ್ಪ ಅವರು ಎಂದು ಗ್ರಾಪಂ ಮಾಜಿ ಅಧ್ಯಕ್ಷ, ಶಾಲಾ ಆಡಳಿತ ಮಂಡಳಿ ಸದಸ್ಯ ಬಾಲಕೃಷ್ಣ ಆಳ್ವ ಕೊಡಾಜೆ ಹೇಳಿದರು.
ಅವರು ಮಾಣಿಯ ಕರ್ನಾಟಕ ಪ್ರೌಢ ಶಾಲೆಯಲ್ಲಿ ಕಳೆದ 40 ವರ್ಷಗಳಿಂದ ಡಿ – ಗ್ರೂಪ್ ನೌಕರನಾಗಿದ್ದು ವಯೋನಿವೃತ್ತಿ ಹೊಂದಿದ ಪಿ. ತಿಮ್ಮಪ್ಪ ಅವರ ಬೀಳ್ಕೊಡುಗೆ ಸಮಾರಂಭದಲ್ಲಿ ಅಭಿನಂದನಾ ಭಾಷಣ ಮಾಡಿದರು.
ಕಳೆದ 20 ವರ್ಷಗಳಿಂದ ಅಡುಗೆ ಸಿಬ್ಬಂದಿಯಾಗಿ ಸೇವೆಗೈದು ನಿವೃತ್ತಿ ಹೊಂದಿದ ಗಂಗಮ್ಮ ಅವರ ಬಗ್ಗೆ ಹಿರಿಯ ಶಿಕ್ಷಕಿ ಶ್ಯಾಮಲಾ ಕೆ. ಮಾತನಾಡುತ್ತಾ ಅತಿ
ಕಡಿಮೆ ಸಂಬಳ ಪಡೆದರೂ ಕೆಲಸದ ಮೇಲಿನ ಶ್ರದ್ಧೆ ಮತ್ತು ವಿದ್ಯಾರ್ಥಿಗಳ ಪ್ರೀತಿಯಿಂದಾಗಿ ಲಾಕ್ ಡೌನ್ ಸಂದರ್ಭದಲ್ಲಿ ಕೂಡ ಕರ್ತವ್ಯ ನಿರ್ವಹಿಸಿ ಬದ್ಧತೆ ಮೆರೆದಿದ್ದಾರೆ ಎಂದು ಕೊಂಡಾಡಿದರು.
ಇದೇ ಸಂದರ್ಭ ಸುಮಾರು 10 ವರ್ಷಗಳಿಂದ ಗೌರವ ಶಿಕ್ಷಕಿಯಾಗಿ ಸೇವೆಗೈದ ಸುಶ್ಮಿತಾ ಎ.ವಿ. ಅವರನ್ನು ಗೌರವಿಸಲಾಯಿತು.
ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಕಿರಣ್ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಶಾಲಾ ಸಂಚಾಲಕ ಕೆ. ಇಬ್ರಾಹಿಂ, ಗ್ರಾಪಂ ಪಿಡಿಓ ಗಿರಿಜಾ, ನಿವೃತ್ತ ಶಿಕ್ಷಕರುಗಳಾದ ಬಿ.ಕೆ. ಭಂಡಾರಿ, ಪಿ. ಗಂಗಾಧರ ರೈ.ಎಂ. ಕೆ. ಬಾಲಕೃಷ್ಣ, ಐ. ಜಯಲಕ್ಷ್ಮಿ , ಕೃಷ್ಣಪ್ಪ ನಾಯ್ಕ, Bantwala | ಮಾಣಿಯ ಕರ್ನಾಟಕ ಪ್ರೌಢ ಶಾಲೆಯ ಇಬ್ಬರು ಸಿಬ್ಬಂದಿಗಳಿಗೆ ಬೀಳ್ಕೊಡುಗೆ
ಜಯಾನಂದ ಪೆರಾಜೆ ಶುಭಹಾರೈಸಿದರು.
ಮುಖ್ಯ ಶಿಕ್ಷಕ ಎಸ್ . ಚೆನ್ನಪ್ಪ ಗೌಡ ಸ್ವಾಗತಿಸಿದರು. ಹಿರಿಯ ಶಿಕ್ಷಕ ಎನ್. ಗಂಗಾಧರ ಗೌಡ ವಂದಿಸಿದರು‌. ಹಿಂದಿ ಶಿಕ್ಷಕ ಜಯರಾಮ ಕಾಂಚನ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ಪ್ರತಿಮಾ ಮತ್ತು ಅಭಿಲಾಷ್ ಕುಮಾರ್ ಜಿ. ಸಹಕರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು