12:04 PM Saturday6 - June 2026
ಬ್ರೇಕಿಂಗ್ ನ್ಯೂಸ್
ಆನೆ ತುಳಿತಕ್ಕೆ ಪತ್ನಿ ಬಲಿ: ಐಪಿಎಸ್ ಅಧಿಕಾರಿ ಸುನಿಲ್ ಅಚ್ಚಯ್ಯಗೆ ಸಿಎಂ ಡಿ… ಮುಲಾಜಿಲ್ಲದೇ ಕ್ರಮ ಎಂದ ರಾಗಾ: ರಾಗವೇ ಬದಲಿಸಿ ‘ಐ ಆಯಮ್ ಹ್ಯಾಪಿ’ ಎಂದ… ಯಾವ ಟ್ರಬಲ್ ಶೂಟರೂ ಇಲ್ಲ; ಅಸ್ಸಾಂಗೆ ಹೋಗಿ ಯಾಕೆ ಟ್ರಬಲ್ ಶೂಟರ್ ಆಗ್ಲಿಲ್ಲ:… ಆರೋಗ್ಯ ಕ್ಷೇತ್ರದಲ್ಲಿ ಸಚಿವ ಯು.ಟಿ. ಖಾದರ್ ಹೊಸ ಮೈಲಿಗಲ್ಲು: ವೈದ್ಯರ ನೇರ ನೇಮಕಾತಿಗೆ… ಹೊಸ ರಾಜಕೀಯ ಹಾದಿಯತ್ತ ಅಣ್ಣಾಮಲೈ: ಕರ್ನಾಟಕದ ಸಿಂಗಂನಿಂದ ಹೊಸ ಪಕ್ಷ ಘೋಷಣೆ ತಿತಿಮತಿ | ಕಾಡಾನೆ ದಾಳಿ: ಕಾಫಿ ತೋಟ ವೀಕ್ಷಿಸಲು ಹೋಗಿದ್ದ ಐಜಿ ಪತ್ನಿ… ಚಿಕ್ಕಮಗಳೂರು: ಕರೆದ ಕೂಡಲೇ ಬರಲಿಲ್ಲವೆಂದು ಕೆಫೆ ಕಾರ್ಮಿಕನ ಮೇಲೆ ಹಲ್ಲೆ ಡಿಕೆಶಿ ಸಂಪುಟದ ಖಾತೆ ಹಂಚಿಕೆ: ಖಾದರ್ ಗೆ ಆರೋಗ್ಯ; ಉಳಿದಂತೆ ಯಾರು ಯಾರಿಗೆ… ನಿಜವಾಯ್ತು ಮಿಥನ್ ರೈ ಭವಿಷ್ಯವಾಣಿ!: ಕೊನೆಗೂ ಡಿಕೆಶಿ ಆದ್ರು ಸಿಎಂ!!; ಇದೀಗ ವೀಡಿಯೊ… ಸಾಮೂಹಿಕ ನಾಯಕತ್ವದಲ್ಲೇ ಮುಂದುವರಿಯಿರಿ: ಸಿಎಂ ಡಿಕೆಶಿಗೆ ಹೈಕಮಾಂಡ್‌ ಕಟ್ಟುನಿಟ್ಟಿನ ಸೂಚನೆ

ಇತ್ತೀಚಿನ ಸುದ್ದಿ

Bantwal | ಮೇಲ್ಕಾರ್: 7.64 ಲಕ್ಷ ರೂ. ಮೌಲ್ಯದ ಎಂಡಿಎಂಎ ಡ್ರಗ್ಸ್ ವಶ; 3 ಮಂದಿ ಬಂಧನ

06/06/2026, 11:12

ಬಂಟ್ವಾಳ(reporterkarnataka.com): ಇಲ್ಲಿಗೆ ಸಮೀಪದ ಮೇಲ್ಕಾರ್ ಬಳಿ ಎಂಡಿಎಂಎ ಸಾಗಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿದ ಪೊಲೀಸರು 7.64 ಲಕ್ಷ ರೂ. ಮೌಲ್ಯದ ಎಂಡಿಎಂಎ ವಶಪಡಿಸಿಕೊಂಡಿದ್ದಾರೆ.
ಬಂಧಿತರನ್ನು ಬಂಟ್ವಾಳ ಪುದು ನಿವಾಸಿ ಎ. ಜುಬೈರ್ (39), ಬಂಟ್ವಾಳ ಸಜಿಪ ಮುನ್ನೂರು ನಿವಾಸಿ ಮೊಹಮ್ಮದ್ ಸವಾದ್ (36) ಹಾಗೂ ಬಂಟ್ವಾಳ ಬಿ ಮೂಡ ನಿವಾಸಿ ಬಿ.ಎಮ್. ರಶೀದ್ ಎಂದು ಗುರುತಿಸಲಾಗಿದೆ.
ಜೂನ್ 4ರಂದು ಸಂಜೆ, ಬಂಟ್ವಾಳ ನಗರ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ಸಂದೀಪ್‌ ಕುಮಾರ್‌ ಶೆಟ್ಟಿ ಅವರು ಠಾಣಾ ಸಿಬ್ಬಂದಿಗಳೊಂದಿಗೆ ಮೆಲ್ಕಾರ್ ಪ್ಲೈಒವರ್ ಬಳಿ ಕಾರೊಂದನ್ನು ತಪಾಸಣೆಗಾಗಿ ನಿಲ್ಲಿಸಿದ್ದು, ಕಾರಿನಲ್ಲಿ ಚಾಲಕ ಹಾಗೂ ಇಬ್ಬರು ಪ್ರಯಾಣಿಕರಿದ್ದರು. ಕಾರನ್ನು ಪರಿಶೀಲಿಸಿದಾಗ ಮನೋದ್ರೇಕಕಾರಿ ವಸ್ತು ಸೇವನೆ ಮಾಡಲು ಬಳಸುವ ಸಾಧನ ಕಂಡುಬಂದಿದ್ದು, ಈ ಬಗ್ಗೆ ಅವರನ್ನು ವಿಚಾರಿಸಿದಾಗ,ಜುಬೈರ್, ಮೊಹಮ್ಮದ್ ಸವಾದ್ ಹಾಗೂ ಬಿ.ಎಮ್. ರಶೀದ್ ಯಾನೆ ಮಾರಿಮುತ್ತು ಅವರು ತಾವು ಎಂಡಿಎಂಎ ಮಾದಕದ್ರವ್ಯವನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಉದ್ದೇಶದಿಂದ ಸಾಗಿಸುತ್ತಿರುವುದಾಗಿ ತಿಳಿಸಿದ್ದು, ತಪಾಸಣೆ ನಡೆಸಿದಾಗ ಆರೋಪಿಗಳ ಬಳಿ ಹಾಗೂ ಕಾರಿನಲ್ಲಿ ಅಂದಾಜು ರೂ 7,64,000-/ ಮೌಲ್ಯದ ಒಟ್ಟು 76 ಗ್ರಾಂ 40 ಮಿಲಿಗ್ರಾಂ ಎಂಡಿಎಂಎ ಮಾದಕದ್ರವ್ಯ ಹಾಗೂ ಮಾದಕ ವಸ್ತು ಸೇವನೆ ಮಾಡಲು ಉಪಯೋಗಿಸುವ ಸಾಧನ ಪತ್ತೆಯಾಗಿರುತ್ತದೆ. ಸೊತ್ತುಗಳನ್ನು, ಆರೋಪಿಗಳ ಬಳಿಯಿದ್ದ 3 ಮೊಬೈಲ್ ಪೋನ್ ಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ K,A 19 MR 1997 ನೊಂದಣಿಯ ಕಾರನ್ನು ವಶಕ್ಕೆ ಪಡೆಯಲಾಗಿದ್ದು, ಮುಂದಿನ ಕಾನೂನುಕ್ರಮ ಕೈಗೊಳ್ಳಲಾಗುವುದು.

ಇತ್ತೀಚಿನ ಸುದ್ದಿ

ಜಾಹೀರಾತು