11:13 AM Monday31 - August 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

ತಡರಾತ್ರಿ ರಹಸ್ಯ ಸಭೆ ಸಕ್ಸಸ್: ರಾಮಲಿಂಗಾ ರೆಡ್ಡಿ ಮನವೊಲಿಸಿದ ಸಿಎಂ ಡಿ.ಕೆ. ಶಿವಕುಮಾರ್

06/06/2026, 11:25

ಬೆಂಗಳೂರು(reporterkarnataka.com): ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ರಾಮಲಿಂಗಾ ರೆಡ್ಡಿ ಜೊತೆಗಿನ ಸಂಧಾನ ಸಕ್ಸಸ್ ಆಗಿದೆ. ಕಳೆದ ರಾತ್ರಿ ರಾಮಲಿಂಗಾರೆಡ್ಡಿ ಜೊತೆಗೆ ಸಿಎಂ ಡಿ.ಕೆ. ಶಿವಕುಮಾರ್ ಒನ್ ಟು ಒನ್ ಮೀಟಿಂಗ್ ಮಾಡಿದ್ದಾರೆ. ಜಯನಗರದ ಹೋಟೆಲ್ ವೊಂದರಲ್ಲಿ ರಾಮಲಿಂಗಾರೆಡ್ಡಿ ಜತೆ ಚರ್ಚೆ ನಡೆಸಿದ್ದಾರೆ. ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿಯುವಂತೆ ರಾಮಲಿಂಗಾರೆಡ್ಡಿ ಅವರ ಮನವೊಲಿಸಿದ್ದಾರೆ.
ರಾಮಲಿಂಗಾ ರೆಡ್ಡಿ ರಾಜೀನಾಮೆ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಎರಡೂವರೆ ಗಂಟೆಗಳ ಕಾಲ ಮಾತುಕತೆ ನಡೆಸಲಾಗಿದೆ. ಸಭೆ ಬಳಿಕ ತಮ್ಮ ನಿಲುವಿನ ಬಗ್ಗೆ ರಾಮಲಿಂಗಾರೆಡ್ಡಿ ಇನ್ನೂ ಸ್ಪಷ್ಟಪಡಿಸಿಲ್ಲ. ಇದು ಪಕ್ಷದ ವಿಚಾರ ನಾವೇ ಬಗೆಹರಿಸಿಕೊಳ್ಳುತ್ತೇವೆ ಎಂದಷ್ಟೇ ಸಿಎಂ ಹೇಳಿದ್ದಾರೆ.
ನಾವೆಲ್ಲ ಕೂತು ಮಾತನಾಡಿದ್ದೇವೆ. ಪರಿಹಾರ ಆಗಿದೆ ಎಂದು ರಾಮಲಿಂಗಾರೆಡ್ಡಿ ಮನವೊಲಿಕೆ ಬಳಿಕ ಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಇದು ನಮ್ಮ ಫ್ಯಾಮಿಲಿ ಪ್ರಾಬ್ಲಮ್, ನಾನು, ರಾಮಲಿಂಗಾರೆಡ್ಡಿ, ಹೆಚ್.ಎಂ. ರೇವಣ್ಣ 1980ರಿಂದಲೂ ಸ್ನೇಹಿತರು. ನಾನು ಚೀಫ್ ಮಿನಿಸ್ಟರ್, ರಾಮಲಿಂಗಾರೆಡ್ಡಿ ಮಿನಿಸ್ಟರ್. ನಾವೆಲ್ಲರೂ ಸ್ನೇಹಿತರು. ನಾವು ಕಾಂಗ್ರೆಸ್ ನಲ್ಲಿ ಬೆಳೆದವರು. ಪಕ್ಷವನ್ನು ಬೆಳೆಸುತ್ತಿರುವವರು. ಬೆಂಗಳೂರು ಅಭಿವೃದ್ಧಿ ಆಗಬೇಕು ಎನ್ನುವವರು. ರಾಮಲಿಂಗಾರೆಡ್ಡಿ ಏನು ಪಕ್ಷ ಬಿಟ್ಟು ಹೋಗುತ್ತೇನೆ ಎಂದು ಹೇಳಿಲ್ಲ. ಅವರ ನೋವು ಹೇಳಿಕೊಂಡಿದ್ದಾರೆ. ಮಿಸ್ ಕಮ್ಯುನಿಕೇಷನ್ ಆಗಿದೆ ಎಂದು ಹೇಳಿದ್ದಾರೆ.
ತಮಗೆ ಜಲ ಸಂಪನ್ಮೂಲ ಖಾತೆ ಬೇಡ ಎಂದಿದ್ದಾರೆ. ಎಲ್ಲವನ್ನು ಹೇಳಬೇಕಾದ ಅನಿವಾರ್ಯತೆ ಇಲ್ಲ. ನಾವೆಲ್ಲರೂ ಕಾಂಗ್ರೆಸ್ ಪಕ್ಷವನ್ನು ಫಸ್ಟ್ ಕ್ಲಾಸ್ ಆಗಿ ನಡೆಸುತ್ತಿದ್ದೇವೆ. ಹಿರಿಯ ನಾಯಕರಿಗೆ ಅವಕಾಶ ಕೊಟ್ಟಿದ್ದೇವೆ. ಎಲ್ಲಾ ಸರಿ ಮಾಡುತ್ತೇವೆ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಎಲ್ಲಾ ನಿವಾರಣೆಯಾಗಿದೆ. ಅವರು ಏನು ಹೇಳಿದರೋ ಅದನ್ನೇ ನಾನು ಹೇಳೋದು ಎಂದು ಡಿ.ಕೆ. ಶಿವಕುಮಾರ್ ಜತೆಗಿನ ಸಭೆ ಬಳಿಕ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು