8:26 PM Saturday6 - June 2026
ಬ್ರೇಕಿಂಗ್ ನ್ಯೂಸ್
Belagavi | ಅಥಣಿ: ಮಳೆ ಅಬ್ಬರಕ್ಕೆ ನೆಲಕ್ಕುರುಳಿದ ಬೃಹತ್‌ ಕಟ್ಟಡ; ತಪ್ಪಿದ ಭಾರೀ… ಸಿಇಟಿ ಫಲಿತಾಂಶ ಪ್ರಕಟ: ತನಿಷಾ ಕಾರ್ತಿಕ್‌ಗೆ ಇಂಜಿನಿಯರಿಂಗ್‌ನಲ್ಲಿ ಪ್ರಥಮ ರ‍್ಯಾಂಕ್ ಆನೆ ತುಳಿತಕ್ಕೆ ಪತ್ನಿ ಬಲಿ: ಐಪಿಎಸ್ ಅಧಿಕಾರಿ ಸುನಿಲ್ ಅಚ್ಚಯ್ಯಗೆ ಸಿಎಂ ಡಿ… ಮುಲಾಜಿಲ್ಲದೇ ಕ್ರಮ ಎಂದ ರಾಗಾ: ರಾಗವೇ ಬದಲಿಸಿ ‘ಐ ಆಯಮ್ ಹ್ಯಾಪಿ’ ಎಂದ… ಯಾವ ಟ್ರಬಲ್ ಶೂಟರೂ ಇಲ್ಲ; ಅಸ್ಸಾಂಗೆ ಹೋಗಿ ಯಾಕೆ ಟ್ರಬಲ್ ಶೂಟರ್ ಆಗ್ಲಿಲ್ಲ:… ಆರೋಗ್ಯ ಕ್ಷೇತ್ರದಲ್ಲಿ ಸಚಿವ ಯು.ಟಿ. ಖಾದರ್ ಹೊಸ ಮೈಲಿಗಲ್ಲು: ವೈದ್ಯರ ನೇರ ನೇಮಕಾತಿಗೆ… ಹೊಸ ರಾಜಕೀಯ ಹಾದಿಯತ್ತ ಅಣ್ಣಾಮಲೈ: ಕರ್ನಾಟಕದ ಸಿಂಗಂನಿಂದ ಹೊಸ ಪಕ್ಷ ಘೋಷಣೆ ತಿತಿಮತಿ | ಕಾಡಾನೆ ದಾಳಿ: ಕಾಫಿ ತೋಟ ವೀಕ್ಷಿಸಲು ಹೋಗಿದ್ದ ಐಜಿ ಪತ್ನಿ… ಚಿಕ್ಕಮಗಳೂರು: ಕರೆದ ಕೂಡಲೇ ಬರಲಿಲ್ಲವೆಂದು ಕೆಫೆ ಕಾರ್ಮಿಕನ ಮೇಲೆ ಹಲ್ಲೆ ಡಿಕೆಶಿ ಸಂಪುಟದ ಖಾತೆ ಹಂಚಿಕೆ: ಖಾದರ್ ಗೆ ಆರೋಗ್ಯ; ಉಳಿದಂತೆ ಯಾರು ಯಾರಿಗೆ…

ಇತ್ತೀಚಿನ ಸುದ್ದಿ

ಡಿಬಿಎಲ್ ಕಂಪನಿಯ ಕಳಪೆ ಕಾಮಗಾರಿ: ಮಂಗಳೂರು- ಮೂಡುಬಿದಿರೆ ಮಿಜಾರಿನಲ್ಲಿ ಮಳೆಗೆ ಕೊಚ್ಚಿ ಹೋದ ರಸ್ತೆ

06/06/2026, 20:25

ಮಂಗಳೂರು(reporterkarnataka.com): ಡಿಬಿಎಲ್ ಕಂಪನಿಯ ಕಳಪೆ ಕಾಮಗಾರಿಯಿಂದ ಮಂಗಳೂರು- ಮೂಡುಬಿದಿರೆ ಮಿಜಾರಿನಲ್ಲಿ ರಸ್ತೆಯು ಮಳೆಗೆ ಕೊಚ್ಚಿ ಹೋಗಿ ಅಪಾಯದ ಸ್ಥಿತಿ ಎದುರಾಗಿದೆ.
ರಾ. ಹೆ. ನಿಮಿ೯ಸುವ ಮೊದಲು ವೈಜ್ಞಾನಿಕ ರೀತಿಯಲ್ಲಿ ಸವೀ೯ಸ್ ರಸ್ತೆಯನ್ನು ನಿಮಿ೯ಸದೆ ನೀರು ಹರಿಯುವ ದೊಡ್ಡ ಸೇತುವೆ ಜಾಗದಲ್ಲಿ ಅತೀ ಚಿಕ್ಕ ಮೋರಿ ನಿರ್ಮಿಸಿರುವುದರಿಂದಲೇ ರಸ್ತೆ ಕುಸಿಯಲು ಕಾರಣವಾಗಿದೆ ಎಂದು ಸ್ಥಳೀಯರು ಆರೋಪಿಸಿದರು. ಇದೀಗ ಹೊಂಡವಾಗಿರುವ ರಸ್ತೆಯ ಬದಿಗೆ ಕಲ್ಲುಗಳನ್ನು ಮಾತ್ರ ಇಡಲಾಗಿದೆ ಹೊರತು ಯಾವುದೇ ಸುರಕ್ಷತಾ ಕ್ರಮದ ಸೂಚನಾ ಫಲಕಗಳನ್ನು ಸಂಬಂಧಪಟ್ಟ ಇಲಾಖೆಯವರು ಅಳವಡಿಸಿಲ್ಲ. ಇದರಿಂದಾಗಿ ರಾತ್ರಿ ಸಂಚರಿಸುವ ವಾಹನ ಸವಾರರಿಗೆ ಅಪಾಯ ಕಟ್ಟಿಟ್ಟ ಬುತ್ತಿ.
ಈ ಬಗ್ಗೆ ಮಾಧ್ಯಮದ ಜತೆ ಮಾತನಾಡಿದ ಸ್ಥಳೀಯರಾದ ಗಣೇಶ್ ಅವರು ಹೈವೇ ಕಾಮಗಾರಿಯು ಕಳಪೆಯಾಗಿದೆ. ಅಗತ್ಯವಿರುವಲ್ಲಿ ಮೋರಿ ರಚನೆ ಮಾಡದೆ ನೀರು ಹರಿದು ಹೋಗಲು ಸ್ಥಳವಿಲ್ಲದೆ ರಸ್ತೆಯಲ್ಲಿಯೇ ನಿಲ್ಲುವುದರಿಂದ ವಾಹನ ಸವಾರರಿಗೆ ಸಮಸ್ಯೆಯಾಗುತ್ತಿದೆ. ಎರಡ್ಮೂರು ಕಡೆಗಳಲ್ಲಿ ನಿಮಿ೯ಸಿರುವ ಮೋರಿಗಳಲ್ಲಿ ಸರಿಯಾಗಿ ನೀರು ಹರಿದು ಹೋಗದಿರುವುದರಿಂದಲೇ ಅನಾಹುತಕ್ಕೆ ಕಾರಣವಾಗಿದೆ ಎಂದಿದ್ದಾರೆ.
ರಾಷ್ಟ್ರೀಯ ಹೆದ್ದಾರಿಯವರು ಮೊದಲು ಸವೀ೯ಸ್ ರಸ್ತೆಯನ್ನು ನಿಮಿ೯ಸದೆ ಇರುವುದರಿಂದ ಅನಾಹುತಗಳು ಸಂಭವಿಸುತ್ತಿದೆ. ಈ ಬಗ್ಗೆ ನಾವು ಇಲಾಖೆಯ ಅಧಿಕಾರಿಗಳ ಗಮನಕ್ಕೆ ಹಲವು ಬಾರಿ ತಂದಿದ್ದೇವೆ ಆದರೆ ಪ್ರಯೋಜನವಾಗಿಲ್ಲ. ಮಿಜಾರಿನಲ್ಲಿ ಎಂಜಿನಿಯರ್, ಮೆಡಿಕಲ್ ಕಾಲೇಜುಗಳಿದ್ದು ಶಿಕ್ಷಣ ಕಾಶಿಯಾಗಿದೆ. ಆದರೆ ನೀರು ಹೋಗಲು ಸರಿಯಾದ ವ್ಯವಸ್ಥೆಯನ್ನು ಹೆದ್ದಾರಿ ಇಲಾಖೆಯವರು ಮಾಡದಿರುವುದರಿಂದ ಸಾವ೯ಜನಿಕರು ತೊಂದರೆಯನ್ನು ಅನುಭವಿಸುವಂತ್ತಾಗಿದೆ ಎಂದು ಸ್ಥಳೀಯರಾದ ತನ್ಸೀರ್ ತಿಳಿಸಿದ್ದಾರೆ.
DBL ಕಂಪನಿಯ ಅವೈಜ್ಞಾನಿಕ ಕಳಪೆ ಹೆದ್ದಾರಿ ಕಾಮಗಾರಿಯ ಬಗ್ಗೆ ,ನೀರು ಹರಿಯುವ ದೊಡ್ಡ ಸೇತುವೆ ಜಾಗದಲ್ಲಿ ಅತೀ ಚಿಕ್ಕ ಮೋರಿ ನಿರ್ಮಿಸಿರುವುದರ ಬಗ್ಗೆ, ಅದರ ಅಡಿಪಾಯವನ್ನು ನೀರು ಹರಿಯುವ ಜಾಗಕ್ಕಿಂತ ಮೇಲ್ಮಟ್ಟದಲ್ಲಿ ನಿರ್ಮಿಸಿದ ಬಗ್ಗೆ ಸಂಬಂಧಪಟ್ಟವರಿಗೆ ಸುಮಾರು 50ಕ್ಕೂ ಹೆಚ್ಚು ದೂರನ್ನು ನೀಡಲಾಗಿತ್ತು, ಆದರೆ ಸಂಬಂಧಪಟ್ಟವರು ಯಾವುದೇ ಕ್ರಮ ಕೈಕೊಂಡಿಲ್ಲ, ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಯೋಜನಾ ನಿರ್ದೇಶಕ (PD) ಒಂದೇ ಒಂದು ಸಲ ಕೂಡ ಬೇಟಿ ನೀಡಿಲ್ಲ , ಕಾಮಗಾರಿ ಆರಂಭವಾದ ದಿನದಿಂದ ಯಾವೊಬ್ಬ ಜನಪ್ರತಿನಿಧಿಯೂ ಈ ಅವೈಜ್ಞಾನಿಕ ಕಾಮಗಾರಿಯನ್ನು ವೀಕ್ಷಿಸಲು ಬಂದಿಲ್ಲ,
ಈಗ ತೆಂಕ ಮಿಜಾರಿನ ಈ ಹೆದ್ದಾರಿ ಒಂದೇ ಮಳೆಗೆ ಕೊಚ್ಚಿ ಹೋಗಿದೆ. ಇದಕ್ಕೆ ನೇರ ಹೊಣೆ ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಬೇಜಾವಾಬ್ದಾರಿ ಯೋಜನಾ ನಿರ್ದೇಶಕ,ಮತ್ತು ಅದರ ಇಂಜಿನಿಯರ್ ಗಳು. ಅವರ ಮೇಲೆ ಜಿಲ್ಲಾಡಳಿತ ಯಾವ ಕ್ರಮ ಕೈಗೊಳ್ಳಲಿದೆ ಕಾದು ನೋಡಬೇಕು.

ಇತ್ತೀಚಿನ ಸುದ್ದಿ

ಜಾಹೀರಾತು