3:59 AM Tuesday25 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಕುರಿ ಕಾಯುವ ಕೆಲಸದ ಹಣದ ವಿಚಾರಕ್ಕೆ ಗಲಾಟೆ: ಕೊಲೆಯಲ್ಲಿ ಅಂತ್ಯ; ಮೂವರು ಅರೆಸ್ಟ್

09/06/2026, 16:28

ಬೆಳಗಾವಿ(reporterkarnataka.com): ಕುರಿ ಕಾಯುವ ಕೆಲಸಕ್ಕೆ ಪಡೆದಿದ್ದ ಮುಂಗಡ ಹಣದ ವಿಚಾರವಾಗಿ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಭೀಕರ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ದೊಡವಾಡ ಗ್ರಾಮದಲ್ಲಿ ನಡೆದಿದೆ.
ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ.ಹಾಲಪ್ಪ, ಮಂಜುನಾಥ ಮತ್ತು ಅರ್ಜುನ ಬಂಧಿತ ಆರೋಪಿಗಳಾಗಿದ್ದಾರೆ.

*ಏನಿದು ಘಟನೆ?:*
ದೊಡವಾಡ ಗ್ರಾಮದ ನಿವಾಸಿಯಾದ ಫಕ್ಕೀರಪ್ಪ ಕಿರಕಸಾಲಿ (38) ಎಂಬುವವರೇ ಕೊಲೆಯಾದ ದುರ್ದೈವಿ. ಇವರು ಕಳೆದ ಕೆಲವು ದಿನಗಳ ಹಿಂದೆ ಹಠಾತ್ತನೆ ಕಾಣೆಯಾಗಿದ್ದರು. ನಂತರ ಗ್ರಾಮದ ರುದ್ರವ್ವ ಬಸಪ್ಪ ಹೆಬ್ಬಳ್ಳಿ ಅವರಿಗೆ ಸೇರಿದ ಜೋಳದ ಜಮೀನಿನಲ್ಲಿರುವ ಹುಣಸೆ ಮರದ ಬಳಿ ಇವರ ಶವ ನಿಗೂಢವಾಗಿ ಪತ್ತೆಯಾಗಿತ್ತು. ಫಕ್ಕೀರಪ್ಪ ಸಾವಿನಿಂದ ಕಂಗಾಲಾದ ಅವರ ಪತ್ನಿ ನೀಲಮ್ಮ ಕಿರಕಸಾಲಿ ಅವರು ಬೈಲಹೊಂಗಲ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರು ದಾಖಲಿಸಿಕೊಂಡ ತಕ್ಷಣ ಕಾರ್ಯಾಚರಣೆಗೆ ಇಳಿದ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದರು.
ಪೊಲೀಸರು ತನಿಖೆಯ ಭಾಗವಾಗಿ ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿದಾಗ ಮಹತ್ವದ ಸುಳಿವು ಲಭ್ಯವಾಗಿತ್ತು. ಕಾಣೆಯಾಗಿದ್ದ ದಿನದಂದು ಆರೋಪಿಗಳಾದ ಹಾಲಪ್ಪ ಜವಳಿ ಮತ್ತು ಮಂಜುನಾಥ ತಳವಾರ ಅವರು ಫಕ್ಕೀರಪ್ಪನನ್ನು ತಮ್ಮೊಂದಿಗೆ ಕರೆದುಕೊಂಡು ಹೋಗಿರುವುದು ಸಿಸಿಟಿವಿಯಲ್ಲಿ ಸ್ಪಷ್ಟವಾಗಿ ಸೆರೆಯಾಗಿತ್ತು. ಆ ಇಬ್ಬರನ್ನು ವಶಕ್ಕೆ ಪಡೆದು ಪೊಲೀಸರು ತಮ್ಮದೇ ಶೈಲಿಯಲ್ಲಿ ವಿಚಾರಣೆ ನಡೆಸಿದಾಗ ಕೊಲೆಯ ಹಿಂದಿನ ಅಸಲಿ ಸತ್ಯ ಹೊರಬಿದ್ದಿದೆ.
10 ಸಾವಿರ ಹಣ ಪಡೆದುಕೊಂಡಿದ್ದ
ಕೊಲೆಯಾದ ಫಕ್ಕೀರಪ್ಪ ಈ ಹಿಂದೆ ಆರೋಪಿಗಳಿಂದ ಕುರಿ ಕಾಯುವ ಕೆಲಸ ಮಾಡಿಕೊಡುವುದಾಗಿ ಹೇಳಿ 10 ಸಾವಿರ ರೂಪಾಯಿ ಮುಂಗಡ ಹಣ ಪಡೆದುಕೊಂಡಿದ್ದ ಎನ್ನಲಾಗಿದೆ. ಆದರೆ, ಹಣ ಪಡೆದ ಕೆಲವೇ ದಿನಗಳಲ್ಲಿ ಫಕ್ಕೀರಪ್ಪ ಕೆಲಸವನ್ನು ಅರ್ಧಕ್ಕೆ ಬಿಟ್ಟು ತನ್ನ ಮನೆಗೆ ಮರಳಿದ್ದ. ಈ ವಿಚಾರವಾಗಿ ಆರೋಪಿಗಳು ಮತ್ತು ಫಕ್ಕೀರಪ್ಪನ ನಡುವೆ ತೀವ್ರ ವೈಷಮ್ಯ ಬೆಳೆದಿತ್ತು. ಕಳೆದ ಮೇ 28 ರಂದು ರಾತ್ರಿ ಇವರೆಲ್ಲರೂ ಒಟ್ಟಿಗೆ ಕುಳಿತು ಮದ್ಯ ಸೇವಿಸಿ ಊಟ ಮಾಡುವಾಗ ಮತ್ತೆ ಇದೇ ಹಣದ ಮರುಪಾವತಿ ವಿಷಯ ಮುನ್ನೆಲೆಗೆ ಬಂದಿದೆ. ಈ ವೇಳೆ ಮಾತಿಗೆ ಮಾತು ಬೆಳೆದು, ಫಕ್ಕೀರಪ್ಪ ಆರೋಪಿಗಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಇದರಿಂದ ತೀವ್ರವಾಗಿ ಕೋಪಗೊಂಡ ಆರೋಪಿಗಳು ತಕ್ಷಣವೇ ಅಲ್ಲಿದ್ದ ಕೊಡಲಿ ಕಾವಿನಿಂದ ಫಕ್ಕೀರಪ್ಪನ ತಲೆ, ಕೈ, ಕಾಲು ಹಾಗೂ ಮೈಮೇಲೆ ಮನಬಂದಂತೆ ಭೀಕರವಾಗಿ ಹಲ್ಲೆ ನಡೆಸಿದ್ದಾರೆ. ಹಲ್ಲೆಯ ತೀವ್ರತೆಗೆ ಫಕ್ಕೀರಪ್ಪನ ಬಲಗಾಲು ಮುರಿದು ಹೋಗಿದ್ದು, ಸ್ಥಳದಲ್ಲೇ ಅವರು ಪ್ರಾಣ ಬಿಟ್ಟಿದ್ದಾರೆ. ಬಳಿಕ ಸಾಕ್ಷ್ಯ ನಾಶಪಡಿಸಲು ಶವವನ್ನು ಜಮೀನಿನಲ್ಲಿ ಎಸೆದು ಹೋಗಿರುವುದು ಪೊಲೀಸರ ತನಿಖೆಯಲ್ಲಿ ಬಹಿರಂಗವಾಗಿದೆ.
ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕ ರಾಮಗೊಂಡ ಬಸರಗಿ ಹಾಗೂ ಡಿಎಸ್‌ಪಿ ವೀರಯ್ಯ ಹಿರೇಮಠ ಅವರ ಸೂಕ್ತ ಮಾರ್ಗದರ್ಶನದಲ್ಲಿ, ಸಿಪಿಐ ಶಿವಾನಂದ ಗುಡಗನಟ್ಟಿ ಮತ್ತು ಪಿಎಸ್‌ಐ ಹೆಚ್.ಕೆ. ಪಾಟೀಲ ನೇತೃತ್ವದ ವಿಶೇಷ ಪೊಲೀಸ್ ತಂಡವು ಅತ್ಯಂತ ಚಾಣಾಕ್ಷತನದಿಂದ ಕಾರ್ಯಾಚರಣೆ ನಡೆಸಿ ಈ ಕೊಲೆ ರಹಸ್ಯವನ್ನು ಭೇದಿಸುವಲ್ಲಿ ಯಶಸ್ವಿಯಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು