11:19 AM Wednesday10 - June 2026
ಬ್ರೇಕಿಂಗ್ ನ್ಯೂಸ್
ಸಿಎಂ ಕಾನೂನು ಸಲಹೆಗಾರ ಸ್ಥಾನಕ್ಕೆ ಎ. ಎಸ್. ಪೊನ್ನಣ್ಣ ರಾಜೀನಾಮೆ: ಸಚಿವ ಸ್ಥಾನ… Kodagu | ನಾಪೋಕ್ಲು: ಕಾರು – ಬೈಕ್ ಅಪಘಾತ- ಸವಾರ ಸ್ಥಳದಲ್ಲೇ ಸಾವು Bangalore | ನೌಕರಿ ಕೊಡಿಸುವುದಾಗಿ 40 ಮಂದಿಗೆ 5.3 ಕೋಟಿ ವಂಚನೆ: ಅಪ್ಪ… ಶಕ್ತಿ ಯೋಜನೆಯಿಂದ ವ್ಯಾಪಾರ ನಷ್ಟ, ಸಾಲಗಾರರ ಕಾಟ: ಮಂಡ್ಯದಲ್ಲಿ ಪತ್ನಿ, ಮಗನನ್ನು ಕೊಂದು… ರಾಜ್ಯಸಭೆ ಚುನಾವಣೆ: ರಾಜ್ಯದಿಂದ ಕಾಂಗ್ರೆಸ್ಸಿನ ಮೂವರು, ಓರ್ವ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ ಬಿಪಿಎಲ್ ಮಾತ್ರವಲ್ಲ, ಎಪಿಎಲ್ ಕುಟುಂಬಗಳಿಗೂ ಗುಡ್‌ನ್ಯೂಸ್: ಆರೋಗ್ಯ ಸಚಿವ ಖಾದರ್ ಜಲಸಂಪನ್ಮೂಲ ಖಾತೆಯಲ್ಲೇ ಮುಂದುವರಿಯುವೆ; ನಂಗೆ ಬೆಂಗಳೂರು ಉಸ್ತುವಾರಿಯೂ ಬೇಡ, ಏನೂ ಬೇಡ: ರಾಮಲಿಂಗಾ… ಇಂಡಿಯಾ ಮೈತ್ರಿಕೂಟದ ಸಭೆ: ಎಸ್ ಐಆರ್ ವಿರುದ್ಧ ಸುಪ್ರೀಂಕೋರ್ಟ್ ಸಿಜೆಗೆ ದೂರು ಸೇರಿದಂತೆ… ಮಳೆಗಾಲ ಎಫೆಕ್ಟ್: ಜೂನ್ 10ರಿಂದ ಕೊಡಗು ಜಿಲ್ಲೆಯಲ್ಲಿ ಬುಲೆಟ್ ಟ್ಯಾಂಕರ್ ಸಹಿತ ಭಾರೀ… ಸೈಟ್ ಇಲ್ಲದವರಿಗೆ ಉಚಿತ ಸೈಟ್ ಭಾಗ್ಯ: ಮುಖ್ಯಮಂತ್ರಿ ಡಿಕೆಶಿ ಮಹತ್ವದ ಘೋಷಣೆ

ಇತ್ತೀಚಿನ ಸುದ್ದಿ

ಒಂದೇ ಶಾಲೆಯ 17 ವಿದ್ಯಾರ್ಥಿಗಳು ಅಗ್ನಿವೀರರಾಗಿ ಆಯ್ಕೆ: ಧಾರವಾಡದ ಯುವಕರ ಐತಿಹಾಸಿಕ ಸಾಧನೆ

10/06/2026, 11:01

ಧಾರವಾಡ(reporterkarnataka.com): ಅಚಲ ನಿರ್ಧಾರ, ಸೈನ್ಯಕ್ಕೆ ಸೇರ್ಪಡೆ ಆಗಲೇಬೇಕು ಎಂಬ ತವಕ, ನಿರಂತರ ಪರಿಶ್ರಮ ದೇಹ ದಂಡನೆ ಈ ಎಲ್ಲ ಪ್ರಯತ್ನಕ್ಕೂ ಆ ವಿದ್ಯಾರ್ಥಿಗಳಿಗೆ ಇದೀಗ ಪ್ರತಿಫಲ ಸಿಕ್ಕಿದೆ. ಒಂದೇ ಶಾಲೆಯಲ್ಲಿ ಕಲಿತ ಒಟ್ಟು 17 ಜನ ಯುವಕರು ಇದೀಗ ಅಗ್ನಿವೀರರಾಗಿ ಆಯ್ಕೆಯಾಗಿದ್ದಾರೆ.


ಇಷ್ಟಕ್ಕೂ ಈ ಯುವಕರು ಯಾವ ಗ್ರಾಮದವರು? ಯಾವ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ. ತಮ್ಮ ಶಿಕ್ಷಕರಿಂದ ಅಭಿನಂದನೆ ಪಡೆದುಕೊಳ್ಳುತ್ತಿರುವ ಈ ಯುವಕರು ಉಪ್ಪಿನ ಬೆಟಗೇರಿ ಕಲ್ಲೂರು ಹಾಗೂ ಹನುಮನಹಾಳ ಗ್ರಾಮದವರು ಈ ಎಲ್ಲ ಯುವಕರು ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪೂರ್ಣಗೊಳಿಸಿದ್ದು, ಉಪ್ಪಿನ ಬೆಟಗೇರಿ ಗ್ರಾಮದ ಎಸ್‌ಜಿವಿ ಹೈಸ್ಕೂಲ್ ಮತ್ತು ಕಾಲೇಜಿನಲ್ಲಿ ಇದೇ ಶಾಲೆಯಲ್ಲಿ ಕಲಿತ ಈ ಯುವಕರಿಗೆ ಭಾರತೀಯ ಸೇನೆ ಸೇರಬೇಕು ಎಂಬ ಆಸೆ ಇತ್ತು. ಆ ಆಸೆ ಹೊತ್ತುಕೊಂಡೇ ತಮ್ಮ ಗುರಿ ಸಾಧಿಸಲು ಪ್ರಯತ್ನ ಆರಂಭಿಸಿದ್ದರು. ನಿರಂತರ ಪರಿಶ್ರಮದ ಫಲವಾಗಿ ಇದೀಗ 17 ಜನ ಯುವಕರು ಭಾರತೀಯ ಸೇನೆಗೆ ಅಗ್ನಿವೀರರಾಗಿ ಆಯ್ಕೆಯಾಗಿದ್ದಾರೆ. ಇದರಲ್ಲಿ ಓರ್ವ ಯುವಕ ವಾಯುಸೇನೆಯ ಅಗ್ನಿವೀರನಾಗಿ ಆಯ್ಕೆಯಾಗಿದ್ದಾನೆ.
ಉಪ್ಪಿನಬೆಟಗೇರಿಯ ಶಂಕರ ಕುರಗುಂದ, ಶಿವಾನಂದ ಮಸೂತಿ, ನಿರಂಜನ ಹುಟಗಿ, ಕಲೀಂ ಮುಜಾವರ, ಈರಣ್ಣ ಮಸೂತಿ, ಗಂಗಾಧರ ಅಂಬಣ್ಣವರ, ಶಬ್ಬೀರ್ ನದಾಫ್ ಸೇರಿದಂತೆ ಒಟ್ಟು 7 ಯುವಕರು ಹಾಗೂ ಕಲ್ಲೂರಿನ ಅಭಿಷೇಕ ಚಿಕ್ಕಮಠ, ಪ್ರದೀಪ ಮರೇದ, ಕುಮಾರ ಬುಡರಕಟ್ಟಿ, ಈರಣ್ಣ ಮರೇದ, ಪ್ರದೀಪ ಶಿವಳ್ಳಿ, ಅಮೀತಪೀರ್ ಸೈಯದನವರ ಸೇರಿದಂತೆ ಒಟ್ಟು 6 ಯುವಕರು ಮತ್ತು ಹನುಮನಾಳ ಗ್ರಾಮದ ಗೋಪಾಲ ಅಂಗಡಿ, ಸೋಮಲಿಂಗ ಅಂಗಡಿ, ಗೋಪಾಲ ಗಬ್ಬೂರ ಮೆಳೆಪ್ಪ ಅಂಗಡಿ ಸೇರಿದಂತೆ ಒಟ್ಟು 4 ಯುವಕರು ಹೀಗೆ ಉಪ್ಪಿನಬೆಟಗೇರಿಯ ಶ್ರೀ ಗುರು ವಿರೂಪಾಕ್ಷೇಶ್ವರ ಪ್ರೌಢಶಾಲೆಯಲ್ಲಿ ಕಲಿತ ಒಟ್ಟು 17 ಯುವಕರು ʻಅಗ್ನಿವೀರ’ರಾಗಿ ಆಯ್ಕೆಯಾಗಿದ್ದಾರೆ.
ಒಂದೇ ಶಾಲೆಯಲ್ಲಿ ಕಲಿತು ಒಟ್ಟಿಗೇ ಭಾರತೀಯ ಸೇನೆಗೆ ಸೇರಿದ ಈ ಯುವಕರು ಉಳಿದ ಮಕ್ಕಳಿಗೂ ಪ್ರೇರಣೆಯಾಗಲಿ ಎಂದು ಎಸ್‌ಜಿವಿ ಹೈಸ್ಕೂಲ್ ಮತ್ತು ಕಾಲೇಜು ಶಿಕ್ಷಕರು ಆ ಯುವಕರನ್ನು ಶಾಲೆಗೆ ಕರೆಯಿಸಿ ಅವರಿಂದ ಪ್ರೇರಣಾದಾಯಕ ಮಾತುಗಳನ್ನಾಡಿಸಿದ್ದಾರೆ. ಅಷ್ಟೇ ಅಲ್ಲದೇ ತಮ್ಮ ಶಾಲೆಯಲ್ಲೇ ಕಲಿತ ಮಕ್ಕಳು ಇದೀಗ ಭಾರತೀಯ ಸೇನೆಗೆ ಆಯ್ಕೆಯಾಗಿರುವುದಕ್ಕೆ ಶಿಕ್ಷಕರು ಕೂಡ ಹೆಮ್ಮೆಪಡುವುದರ ಜೊತೆಗೆ ಇದೇ ಶಾಲೆಯಿಂದ ಇನ್ನಷ್ಟು ಮಕ್ಕಳು ಭಾರತೀಯ ಸೇನೆಗೆ ಸೇರುವಂತಾಗಲಿ ಎಂದಿದ್ದಾರೆ ಒಟ್ಟಾರೆ ಒಂದೇ ಶಾಲೆಯಲ್ಲಿ ಕಲಿತು ಇದೀಗ ಒಂದೇ ಬಾರಿಗೆ ಭಾರತೀಯ ಸೇನೆಗೆ ಆಯ್ಕೆಯಾದ ಈ ವಿದ್ಯಾರ್ಥಿಗಳು, ಸೇನೆಗೆ ಆಯ್ಕೆಯಾಗಿದ್ದೇವೆ ಎಂದರೆ ಯುದ್ಧಕ್ಕೂ ಹೆದರುವ ಮಾತಿಲ್ಲ. ತಾಯಿ ಭಾರತಿಗೆ ನಾವು ಸೇನೆಯಲ್ಲಿ ಇರುವಷ್ಟು ದಿನ ಸೇವೆ ಸಲ್ಲಿಸಿ ಬರುತ್ತೇವೆ ಎಂದು ಅಭಿಮಾನದ ಮಾತುಗಳನ್ನಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು