5:46 PM Thursday27 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ತಮಿಳುನಾಡು ಮುಖ್ಯಮಂತ್ರಿ ವಿಜಯನ್ ಜೂ.12ರಂದು ಕೊಲ್ಲೂರು ದೇಗುಲಕ್ಕೆ ಭೇಟಿ: ಮೂಕಾಂಬಿಕೆಯ ದರ್ಶನ

10/06/2026, 21:42

ಉಡುಪಿ(reporterkarnataka.com): ತಮಿಳುನಾಡು ನೂತನ ಮುಖ್ಯಮಂತ್ರಿ ಹಾಗೂ ಖ್ಯಾತ ನಟರಾದ ಜೋಸೆಫ್ ವಿಜಯ್ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಪ್ರಸಿದ್ಧ ಕೊಲ್ಲೂರು ಮೂಕಾಂಬಿಕಾ ಕ್ಷೇತ್ರಕ್ಕೆ ಜೂನ್ 12ರಂದು ಭೇಟಿ ನೀಡಲಿದ್ದಾರೆ.
ಮುಖ್ಯಮಂತ್ರಿ ಆದ ಬಳಿಕ ಮೊದಲ ಬಾರಿಗೆ ಅವರು ಕೊಲ್ಲೂರು ಕ್ಷೇತ್ರಕ್ಕೆ ಆಗಮಿಸುತ್ತಿರುವುದು ವಿಶೇಷವಾಗಿದೆ.

*ಯಾವಾಗ ಭೇಟಿ?:*
ಜೂನ್ 12 ಶುಕ್ರವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಕೊಲ್ಲೂರಿಗೆ ಆಗಮಿಸಲಿರುವ ಸಿಎಂ ವಿಜಯ್, ಶ್ರೀ ಮೂಕಾಂಬಿಕಾ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ದೇವಸ್ಥಾನ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಅಗತ್ಯ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.
ದರ್ಶನದ ಬಳಿಕ ಚೆನ್ನೈಗೆ ವಾಪಸ್ ತೆರಳಲಿದ್ದಾರೆ.
ಮೂಕಾಂಬಿಕಾ ದೇವಿ ದರ್ಶನ, ಪೂಜಾ ಕಾರ್ಯಕ್ರಮ ಮುಗಿದ ಬಳಿಕ ಸಿಎಂ ವಿಜಯ್ ಮಂಗಳೂರಿಗೆ ತೆರಳಿ ಅಲ್ಲಿನ ವಿಮಾನ ನಿಲ್ದಾಣದಿಂದ ಚೆನ್ನೈಗೆ ಪ್ರಯಾಣ ಬೆಳೆಸಲಿದ್ದಾರೆ. ಅವರ ಭೇಟಿಗೆ ಸಂಬಂಧಿಸಿದಂತೆ ಸ್ಥಳೀಯ ಆಡಳಿತ ಹಾಗೂ ಪೊಲೀಸ್ ಇಲಾಖೆ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿವೆ.

*ದೇಶದ ಗಣ್ಯರ ನೆಚ್ಚಿನ ಶಕ್ತಿಪೀಠ ಮೂಕಾಂಬಿಕಾ ಕ್ಷೇತ್ರ:*
ಕೊಲ್ಲೂರು ಮೂಕಾಂಬಿಕಾ ದೇವಾಲಯವು ದೇಶದ ಪ್ರಸಿದ್ಧ ಶಕ್ತಿಪೀಠಗಳಲ್ಲಿ ಒಂದಾಗಿದ್ದು, ರಾಜಕೀಯ ನಾಯಕರು, ಚಿತ್ರರಂಗದ ಗಣ್ಯರು, ಉದ್ಯಮಿಗಳು ಸೇರಿದಂತೆ ಅನೇಕ ಗಣ್ಯರು ಆಗಾಗ್ಗೆ ಭೇಟಿ ನೀಡಿ ದೇವಿಯ ಆಶೀರ್ವಾದ ಪಡೆಯುತ್ತಾರೆ. ಹಲವು ರಾಜ್ಯಗಳ ಮುಖ್ಯಮಂತ್ರಿಗಳು, ಕೇಂದ್ರ ಸಚಿವರು ಹಾಗೂ ಸಿನಿಮಾ ತಾರೆಯರು ಸಹ ಈ ಕ್ಷೇತ್ರಕ್ಕೆ ಭೇಟಿ ನೀಡಿರುವ ಇತಿಹಾಸವಿದೆ.

ಇತ್ತೀಚಿನ ಸುದ್ದಿ

ಜಾಹೀರಾತು