2:10 PM Thursday27 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಬ್ರಹ್ಮಾವರ: ತಾಯಿಯ ಕಂಕುಳಿನಲ್ಲಿದ್ದ ಮಗು ಮೇಲೆ ತೆಂಗಿನ ಕಾಯಿ ಬಿದ್ದು ದಾರುಣ ಸಾವು

11/06/2026, 11:13

ಬ್ರಹ್ಮಾವರ(reporterkarnataka.com): ತಾಯಿಯ ಕಂಕುಳಿನಲ್ಲಿದ್ದ ಮಗುವಿನ ಮೇಲೆ ನೇರವಾಗಿ ತೆಂಗಿನ ಕಾಯಿ ಬಿದ್ದು ಒಂದೂವರೆ ವರ್ಷದ ಗಂಡು ಮಗು ಮೃತಪಟ್ಟ ಘಟನೆ ಬ್ರಹ್ಮಾವರದ ಹೆರಂಜೆಯಲ್ಲಿ ಸಂಭವಿಸಿದೆ.
ತಾಯಿಯು ಎಂದಿನಂತೆ 6 ವರ್ಷ ಪ್ರಾಯದ ದೊಡ್ಡ ಮಗುವನ್ನು ಶಾಲೆಗೆ ಬಿಡಲು ಹೊರಟಿದ್ದರು, ಈ ವೇಳೆ ಸಣ್ಣ ಮಗುವನ್ನು ಕೂಡ ಎತ್ತಿಕೊಂಡು ತಾಯಿ ಹೊರಟು ಸ್ವಲ್ಪ ದೂರ ಸಾಗುವಷ್ಟರಲ್ಲಿ ದಾರಿ ಬದಿಯಲ್ಲಿದ್ದ ತೆಂಗಿನ ತೋಟದಲ್ಲಿದ್ದ ಮರದಿಂದ ಅಚಾನಕ್‌ ಆಗಿ ತೆಂಗಿನ ಕಾಯಿ ನೇರವಾಗಿ ಮಗುವಿನ ತಲೆಗೆ ಬಿತ್ತು. ಕೂಡಲೇ ಸ್ಥಳೀಯರು ಸೇರಿ ಮಗುವನ್ನು ಮಣಿಪಾಲದ ಆಸ್ಪತ್ರೆಗೆ ದಾಖಲಿಸಿದರು. ತಲೆಗೆ ಗಂಭೀರ ಏಟು ಆಗಿದ್ದರಿಂದ ಕೂಡಲೇ ಶಸ್ತ್ರ ಚಿಕಿತ್ಸೆ ನಡೆಸಿದರೂ ಮಗುವನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಸಂಜೆಯ ವೇಳೆಗೆ ಮಗು ಕೊನೆಯುಸಿರೆಳೆಯಿತು.

*ಸ್ಥಳೀಯರ ಪ್ರಯತ್ನ:*
ಮಗುವಿನ ಮೇಲೆ ತೆಂಗಿನ ಕಾಯಿ ಬಿದ್ದ ಸುದ್ದಿ ತಿಳಿದಾಕ್ಷಣ ಸ್ಥಳೀಯರು ನೆರವಿಗೆ ಧಾವಿಸಿದರು. ಪಕ್ಕದ ಮನೆಯ ವಾಹನದಲ್ಲಿ ಆಸ್ಪತ್ರೆಗೆ ಸಾಗಿಸುವಾಗ ಸ್ಥಳೀಯ ವ್ಯಕ್ತಿ ಮಗುವಿನ ಉಸಿರಾಟಕ್ಕೆ ನೆರವಾಗುವಂತೆ ಸಿಪಿಆರ್‌ ಮಾಡುತ್ತಾ ಸಾಗಿದರು. ಆಸ್ಪತ್ರೆಗೆ ತಲುಪುವವರೆಗೆ ಮಗು ಕಣ್ಣು ಬಿಟ್ಟು ಆಚೀಚೆ ನೋಡುತ್ತಿತ್ತು ಎಂದು ಮನೆಯವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು