5:41 AM Tuesday18 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ ಲೋಕಾಯುಕ್ತ ಬಲೆಗೆ

11/06/2026, 12:25

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ಸರ್ವೇ ಇಲಾಖೆ ಎ.ಡಿ.ಎಲ್.ಆರ್. ಕಚೇರಿಯಲ್ಲಿ ಲಂಚ ಪಡೆಯುವಾಗ ಸರ್ವೇ ಇಲಾಖೆ ಸಿಬ್ಬಂದಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ನಡೆದಿದೆ.
ಸರ್ವೇ ಸ್ಕೆಚ್ ಗೆ 20 ಸಾವಿರಕ್ಕೆ ಬೇಡಿಕೆ ಇಟ್ಟಿದ್ದ ಸರ್ವೇ ಇಲಾಖೆಯ ಎ ಡಿ ಎಲ್ ಆರ್ ಕಚೇರಿ ಸಿಬ್ಬಂದಿ ಸುಮಾ ಎಂಬುವವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
15 ಸಾವಿರ ಲಂಚ ಪಡೆಯುವ ವೇಳೆ ಲೋಕಾ ಬಲೆಗೆ ಬಿದ್ದಿದ್ದಾರೆ. ಸುಮಾ, ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ಸರ್ವೇಯರ್, ಮೂಡಿಗೆರೆ ಸರ್ವೇ ಇಲಾಖೆಯಲ್ಲಿ ಹಲವು ವರ್ಷಗಳಿಂದ ಕೆಲಸ ಮಾಡುತ್ತಿದ್ದರು.
ಎ.ಡಿ.ಎಲ್.ಆರ್.ಕಚೇರಿಯಲ್ಲೇ ಹಣ ಪಡೆಯುವ ವೇಳೆ ಸಿಕ್ಕಿಬಿದ್ದ ಸುಮಾ, ಲೋಕಾಯುಕ್ತ ಡಿವೈಎಸ್.ಪಿ ತಿರುಮಲೇಶ್ ನೇತೃತ್ವದಲ್ಲಿ ದಾಳಿ. ಲಂಚಕ್ಕೆ ಬೇಡಿಕೆ ಇಟ್ಟು ಸುಮಾ ಬಳಿ ಹಣ ನೀಡುವಂತೆ ಎ ಡಿ ಎಲ್ ಆರ್ ಮಂಜೇಶ್ ಹೇಳಿದ್ದರು ಎನ್ನಲಾಗಿದೆ.
ಮೂಡಿಗೆರೆ ತಾಲ್ಲೂಕು ದೇವವೃಂದ ಗ್ರಾಮದ ಮಂಜುನಾಥ್ ಎಂಬುವವರಿಂದ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈ ಬಗ್ಗೆ ಮನನೊಂದು ಮಂಜುನಾಥ್ ಲೋಕಾಯುಕ್ತಕ್ಕೆ ದೂರು ನೀಡಿದ್ದರು.
ಮಂಜುನಾಥ್ ಅವರು ಜಮೀನು ಅಲಿನೇಸನ್ ಆಗಿತ್ತು, ಈ ಸ್ವತ್ತಿಗಾಗಿ ಸರ್ವೇ ಸ್ಕೆಚ್ ಬೇಕಾಗಿತ್ತು. ಸರ್ವೇ ಸ್ಕೆಚ್ ನೀಡಲು 20 ಸಾವಿರಕ್ಕೆ ಬೇಡಿಕೆ ಇಟ್ಟಿದ್ದ ಆರೋಪದಲ್ಲಿ ಎಡಿಎಲ್ ಆರ್ ಮಂಜೇಶ್, ಸರ್ವೇಯರ್ ನಂದಿನಿ, ದೀಪಕ್, ಸುಮಾ ಇವರ ಮೇಲೆ ಮಂಜುನಾಥ್ ದೂರು ನೀಡಿದ್ದರು.
15 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತರು ನೇರವಾಗಿ ದಾಳಿ ನಡೆಸಿ ಕಚೇರಿಯಲ್ಲಿ ಲಂಚ ಪಡೆಯುತ್ತಿದ್ದ ಸುಮಾ ಅವರನ್ನು ಬಂಧಿಸಿದ್ದಾರೆ.
ಮೂಡಿಗೆರೆ ಎ ಡಿ ಎಲ್ ಅರ್ ಮತ್ತು ಸರ್ವೇ ಇಲಾಖೆಯ ಕೆಲ ಅಧಿಕಾರಿಗಳು ಮತ್ತು ನೌಕರರು ರೈತರನ್ನು ಲಂಚಕ್ಕಾಗಿ ಸತಾಯಿಸುತ್ತಿದ್ದ ಆರೋಪಗಳು ಕೇಳಿ ಬಂದಿದ್ದವು.

ಇತ್ತೀಚಿನ ಸುದ್ದಿ

ಜಾಹೀರಾತು