2:43 PM Wednesday17 - June 2026
ಬ್ರೇಕಿಂಗ್ ನ್ಯೂಸ್
ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ

ಇತ್ತೀಚಿನ ಸುದ್ದಿ

ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ ನೀರಿನ ಬಾಟಲಿ ನಿಷೇಧ

11/06/2026, 20:16

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಸಾರ್ವಜನಿಕರ ಹಾಗೂ ಪರಿಸರದ ಹಿತದೃಷ್ಟಿಯಿಂದ ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ಗಿಂತ ಕಡಿಮೆ ಪ್ರಮಾಣದ ಎಲ್ಲಾ ತರಹದ ಕುಡಿಯುವ ನೀರಿನ ಬಾಟಲಿಗಳನ್ನು ಈ ಪ್ರಕಟಣೆ ದಿನಾಂಕದಿಂದ ಮಾರಾಟ, ಖರೀದಿ ಹಾಗೂ ಶೇಖರಣೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಈಗಾಗಲೇ ಸರ್ಕಾರದಿಂದ ನಿಷೇಧಿಸಿರುವ ಏಕ ಬಳಕೆ ಪ್ಲಾಸ್ಟಿಕ್ (ಕವರ್, ಇಯರ್ ಬಡ್ಸ್, ಸ್ಟ್ರಾ ಪೈಪ್, ಕ್ಯಾಂಡಿ ಮತ್ತು ಐಸ್ ಕ್ರೀಮ್ ಕಡ್ಡಿಗಳು, ಅಲಂಕಾರ ವಸ್ತುಗಳು, ಪ್ಯಾಕಿಂಗ್ ಸಾಮಾಗ್ರಿಗಳು, ಆಮಂತ್ರಣ ಪತ್ರಿಕೆಗಳು ಹಾಗೂ ಇತ್ಯಾದಿ) ಸಹ ನಿಷೇಧಿಸಿರುವುದರಿಂದ ಸಾರ್ವಜನಿಕರು, ಉದ್ದಿಮೆದಾರರು ಹಾಗೂ ಪ್ರವಾಸಿಗರು ಬಳಸದಂತೆ ಕೋರಲಾಗಿದೆ.
ಆದರಿಂದ ಉದ್ದಿಮೆದಾರರು ತಕ್ಷಣದಿಂದ ಜಾರಿಗೆ ಬರುವಂತೆ 2 ಲೀಟರ್ ಗಿಂತ ಕಡಿಮೆ ಪ್ರಮಾಣದ ಎಲ್ಲಾ ತರಹದ ಕುಡಿಯುವ ನೀರಿನ ಬಾಟಲಿಗಳನ್ನು ಮಾರಾಟ ಹಾಗೂ ಸಂಗ್ರಹಿಸದಂತೆ ಹಾಗೆಯೇ ಸರ್ಕಾರದಿಂದ ನಿಷೇಧಿಸಿರುವ ಏಕ ಬಳಕೆ ಪ್ಲಾಸ್ಟಿಕ್ ಮಾರಾಟ ಮಾಡದಂತೆ, ಸಂಗ್ರಹಿಸುವುದನ್ನು ಕೂಡಲೇ ಸ್ಥಗಿತಗೊಳಿಸುವುದು ತಪ್ಪಿದ್ದಲ್ಲಿ ದಂಡ ವಿಧಿಸಲಾಗುವುದು ಹಾಗೂ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಕೃಷ್ಣಪ್ರಸಾದ್ ಅವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು