7:40 AM Wednesday5 - August 2026
ಬ್ರೇಕಿಂಗ್ ನ್ಯೂಸ್
ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ…

ಇತ್ತೀಚಿನ ಸುದ್ದಿ

ಬೆಂಗಳೂರು ಪ್ರತ್ಯೇಕ ಅಪಘಾತಕ್ಕೆ 3 ಮಂದಿ ಬಲಿ: ಶಾಲಾ ಬಸ್ ಹರಿದು ಮಹಿಳೆ ಸಾವು; ಇತ್ತ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳ ದುರ್ಮರಣ

13/06/2026, 13:11

ಬೆಂಗಳೂರು(reporterkarnataka.com): ರಾಜ್ಯ ರಾಜಧಾನಿಯಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚುತ್ತಿದೆ. ಶಾಲಾ ಬಸ್ ಹರಿದು ಮಹಿಳೆ ಸಾವನ್ನಪ್ಪಿರೋ ಘಟನೆ ವೈಟ್ ಫೀಲ್ಡ್ ಬಳಿಯ ಸಿದ್ದಾಪುರದಲ್ಲಿ ನಡೆದಿದ್ದು, ಬೈಕ್​​ನಲ್ಲಿ ​ಮಗಳನ್ನು ಕಾಲೇಜಿಗೆ ಕರೆದೊಯ್ಯುತ್ತಿದ್ದ ವೇಳೆ ಮಳೆ ನೀರಲ್ಲಿ ಬೈಕ್ ಸ್ಕೀಡ್​ ಆಗಿ ಅಪಘಾತ ಸಂಭವಿಸಿದೆ.
ಬೈಕ್​​ನಿಂದ ಬಿದ್ದ ತಾಯಿ ಮೇಲೆ ಶಾಲಾ ಬಸ್ ಹರಿದಿದ್ದು, ಘಟನೆಯಲ್ಲಿ ತೀವ್ರ ಗಾಯಗೊಂಡಿದ್ದ ತಾಯಿ ಕಾಂತಾ ಸಾವನ್ನಪ್ಪಿದ್ದಾರೆ ಮತ್ತೊಂದೆಡೆ ಸ್ಕೂಟರ್ ಅಪಘಾತದಲ್ಲಿ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ.

*ತಾಯಿ ಸಾವು, ಮಗಳ ಸ್ಥಿತಿ ಗಂಭೀರ:*
ವೈಟ್ ಫೀಲ್ಡ್ ಬಳಿಯ ಸಿದ್ದಾಪುರದಲ್ಲಿ ತಾಯಿ-ಮಗಳು ಹೋಗ್ತಿದ್ದ ಬೈಕ್ ಅಪಘಾತಕ್ಕೀಡಾಗಿದ್ದು, ರಸ್ತೆ ಮೇಲೆ ಬಿದ್ದ ತಾಯಿ ಮೇಲೆ ಶಾಲಾ ಬಸ್ ಹರಿದಿದೆ. ಘಟನೆಯಲ್ಲಿ ತೀವ್ರ ಗಾಯಗೊಂಡಿದ್ದ ತಾಯಿ ಕಾಂತ ಸಾವನ್ನಪ್ಪಿದ್ದು, ಇತ್ತ ಮಗಳು ನೇಹಾ ಸ್ಥಿತಿ ಕೂಡ ಗಂಭೀರವಾಗಿದ್ದು, ಗಾಯಾಳು ನೇಹಾ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ವೈಟ್‌ಫೀಲ್ಡ್ ಸಂಚಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು