5:41 AM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಪಾಲ್ದನೆ ಚರ್ಚ್ ಐ.ಸಿ.ವೈ.ಎಂ. ಘಟಕಕ್ಕೆ ಗೊನ್ಝಾಲೊ ಗ್ರಾಸಿಯಾ ಮತ್ತು ಅತ್ಯುತ್ತಮ ಪಿ.ಆರ್. ಪ್ರಶಸ್ತಿ

15/06/2026, 17:17

ಮಂಗಳೂರು(reporterkarnataka.com): ಮಂಗಳೂರಿನ ಪಾಲ್ದನೆ ಸಂತ ತೆರೆಸಾ ಚರ್ಚ್ ನ ಐ.ಸಿ.ವೈ.ಎಂ. ಘಟಕವು ತನ್ನ ಚಟುವಟಿಕೆಗಳಿಗಾಗಿ ಮಂಗಳೂರು ಧರ್ಮ ಪ್ರಾಂತ್ಯದ ಸೈಂಟ್ ಪೀಟರ್ ಸಿಟಿ ಡೀನರಿಯಿಂದ ಗೊನ್ಝಾಲೊ ಗ್ರಾಸಿಯಾ ಪ್ರಶಸ್ತಿ ಮತ್ತು ಅತ್ಯುತ್ತಮ ಪಿ.ಆರ್. ಪ್ರಶಸ್ತಿಯನ್ನು ಪಡೆದುಕೊಂಡಿದೆ.
ಪಾಲ್ದನೆ ಚರ್ಚ್ ನ ಐ. ಸಿ. ವೈ. ಎಂ. ಘಟಕದ ನಿಕಟ ಪೂರ್ವ ಅಧ್ಯಕ್ಷರಾಗಿದ್ದ ವಿನಿಶಾ ಬ್ರಾಗ್ಸ್ ಅಧ್ಯಕ್ಷತೆಯ ತಂಡವು ಸೈಂಟ್ ಪೀಟರ್ ಸಿಟಿ ವಲಯ ವ್ಯಾಪ್ತಿಯಲ್ಲಿ ಅತ್ಯಧಿಕ ಕಾರ್ಯ ಚಟುವಟಿಕೆಗಳನ್ನು ಕೈಗೆತ್ತಿಕೊಂಡು ನಡೆಸಿದ್ದಕ್ಕಾಗಿ ಈ ಪ್ರಶಸ್ತಿಯನ್ನು ನೀಡಲಾಗಿದೆ.
ಸೈಂಟ್ ಪೀಟರ್ ಪಿನಾಕಲ್ ಪ್ರಶಸ್ತಿ ಪಡೆದ ಐ.ಸಿ.ವೈ.ಎಂ. ಘಟಕವನ್ನು ಪಾಲ್ದನೆ ಚರ್ಚ್ ನ ಪ್ರಧಾನ ಧರ್ಮಗುರು ವಂದನೀಯ ಫಾ. ರಿಚಾರ್ಡ್ ಅಲೋಶಿಯಸ್ ಕುವೆಲ್ಲೊ ಅವರು ಅಭಿನಂದಿಸಿದ್ದಾರೆ. ಚರ್ಚ್ ಉಪಾಧ್ಯಕ್ಷ ಎಲಿಯಾಸ್ ಫೆರ್ನಾಂಡಿಸ್, ಕಾರ್ಯದರ್ಶಿ ರೋಷನ್ ಮೊಂತೇರೊ, ಸರ್ವ ಆಯೋಗಗಳ ಸಂಯೋಜಕ ವಿಲಿಯಂ ಲೋಬೊ ಮತ್ತು ಇತರ ಪದಾಧಿಕಾರಿಗಳು ಐ.ಸಿ.ವೈ.ಎಂ. ಘಟಕದ ಸಾಧನೆ ಬಗ್ಗೆ ಪ್ರಶಂಸೆ ವ್ಯಕ್ತ ಪಡಿಸಿ ಅಭಿನಂದಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು