1:45 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ | ಜೈಪುರದಲ್ಲಿ ಪ್ರತಿಭಟನೆ ವೇಳೆ CJP ಸಂಸ್ಥಾಪಕ ದೀಪ್ಕೆ ಮೇಲೆ ಹಲ್ಲೆ

15/06/2026, 22:06

ಜೈಪುರ(reporterkarnataka.com): ಸೋಷಿಯಲ್ ಮೀಡಿಯಾ ಇತ್ತೀಚೆಗೆ ಭಾರೀ ಸದ್ದು ಮಾಡಿದ್ದ ನೂತನ ‘ಕಾಕ್ರೋಚ್ ಜನತಾ ಪಾರ್ಟಿ (CJP)’ ಸಂಸ್ಥಾಪಕ ಅಭಜಿತ್ ದೀಪ್ಕೆ ಅವರ ಮೇಲೆ ಹಲ್ಲೆ ನಡೆದಿದೆ. ರಾಜಸ್ಥಾನದ ಜೈಪುರದಲ್ಲಿ ಸಾರ್ವಜನಿಕ ಸಂವಾದ ನಡೆಸುವಾಗ ಸೋಮವಾರ (ಜೂನ್ 15) ವೇಳೆ ಅವರನ್ನು ಥಳಿಸಿದ ಘಟನೆ ನಡೆದಿದೆ. ಶೈಕ್ಷಣಿಕ ಅಕ್ರಮ, ಪ್ರಶ್ನೆ ಪತ್ರಿಕೆ ಸೋರಿಕೆ ಸಂಬಂಧ ಕೇಂದ್ರದ ವಿರುದ್ಧ ಧ್ವನಿ ಎತ್ತಿರುವ ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ರಾಜಸ್ಥಾನದ ಜೈಪುರದಲ್ಲಿ ಸಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.



ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಧಿಕ್ಕಾರ ಕೂಗುತ್ತಿದ್ದರು. ಈ ವೇಳೆ ಸಾರ್ವಜನಿಕ ಸಂವಾದ ನಡೆಸುತ್ತಿದ್ದ ಅಭಿಜೀತ್ ದೀಪ್ಕೆ ಅವರನ್ನು ಹೆಗಲ ಮೇಲೆ ಹೊತ್ತು ಜನರ ಗುಂಪಿನ ನಡುವೆ ಕರೆದೊಯ್ಯಲಾಗುತ್ತಿತ್ತು. ದೀಪ್ಕೆ ಸಹ ಸಾರ್ವಜನಿಕರತ್ತ ಕೈ ಬೀಸುತ್ತಿದ್ದರು. ಈ ವೇಳೆ ಗುಂಪಿನಲ್ಲಿದ್ದ ಕೆಲವರು ಅಭಿಜಿತ್ ದೀಪ್ಕೆ ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಮುಖ, ಮೈ, ತಲೆಗೆ ಹೊಡೆಯುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು