10:40 AM Tuesday23 - June 2026
ಬ್ರೇಕಿಂಗ್ ನ್ಯೂಸ್
ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್…

ಇತ್ತೀಚಿನ ಸುದ್ದಿ

ವಿಶ್ವಕರ್ಮ ಸಮಾಜವು ಸಂಘಟನಾತ್ಮಕವಾಗಿ ಒಗ್ಗೂಡಲು ಆದ್ಯತೆ ಕೊಡಿ: ಕೃಷ್ಣಚಾರ್

18/09/2021, 08:51

ವಿಶ್ವಕರ್ಮ ಸಮಾಜವು ಸಂಘಟನಾತ್ಮಕವಾಗಿ ಒಗ್ಗೂಡಲು ಆದ್ಯತೆ ಕೊಡಿ: ಕೃಷ್ಣಚಾರ್

info.reporterkarnataka@gmail.com

ವಿಶ್ವಕರ್ಮ ಸಮುದಾಯವು ಸಂಘಟನಾತ್ಮಕವಾಗಿ ಬೆಳೆಯಲು ಹಾಗೂ ನಮ್ಮ ಸಮುದಾಯವನ್ನು ಗುರುತಿಸಿ ಅಭಿವೃದ್ಧಿಯತ್ತ ಕೊಂಡೊಯ್ಯಲು ಒಗ್ಗಟ್ಟಿನ ಅಗತ್ಯವಿದೆ. ಒಗ್ಗಟ್ಟು ಇದ್ದರೆ ಅಭಿವೃದ್ಧಿಯತ್ತ ಸಾಗಲು ಸಾಧ್ಯವೆಂದು ನಾಗಮಂಗಲ ತಾಲೂಕು ವಿಶ್ವಕರ್ಮ ಸಮಾಜದ ಅಧ್ಯಕ್ಷರಾದ ಕೃಷ್ಣಚಾರ್ ಹೇಳಿದರು.

ಅವರು ನಾಗಮಂಗಲ ತಾಲೂಕು ಕಚೇರಿಯ ಸಭಾಂಗಣದಲ್ಲಿ ಏರ್ಪಡಿಸಿದ್ದ ವಿಶ್ವಕರ್ಮ ಜಯಂತೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಕೇವಲ ಕುಸುರಿ ಕೆಲಸವಷ್ಟೇ ಅಲ್ಲದೆ ತಮ್ಮಗಳ ಹಾಗೂ ಸಮುದಾಯದ ಚಿಂತನಾಶಕ್ತಿ ಮೈಗೂಡಿಸಿಕೊಳ್ಳಬೇಕು. ನಮ್ಮ ಸಮುದಾಯದ ನಾಯಕರುಗಳು ಜಯಂತೋತ್ಸವ ಆಚರಣೆ ಮಾಡಲು ಸತತ ಪ್ರಯತ್ನ ದೊಂದಿಗೆ ಇಂದು ರಾಜ್ಯಾದ್ಯಂತ ಆಚರಣೆ ಮಾಡುತ್ತಿದ್ದು ಇಂತಹ ಶಕ್ತಿ ಹಾಗೂ ಸಮುದಾಯದ ಬೆಳವಣಿಗೆಯನ್ನು ಕೊಂಡೊಯ್ಯಲು ನಾವುಗಳು ಒಗ್ಗಟ್ಟಿನ ಶಕ್ತಿ ಅಗತ್ಯತೆ ಎಂದು ತಿಳಿಸಿದರು.

ನಮ್ಮ ಸಮುದಾಯದ ಪರಂಪರೆಯನ್ನು ನಮ್ಮ ಮಕ್ಕಳು ನಮಗೆ ಸೀಮಿತವಾಗಿರದೆ ಒಟ್ಟಿಗೆ  ವಿದ್ಯಾಭ್ಯಾಸಕ್ಕೆ ಹೆಚ್ಚಿನ ಒತ್ತು ನೀಡುವ ಮುಖಾಂತರ ಬದುಕಿಗೆ ವೃತ್ತಿ ಜೀವನಕ್ಕೆ ವಿದ್ಯೆ ಎರಡನ್ನು ನಾವುಗಳು ಕೊಂಡೊಯ್ಯುವ ಮುಖಾಂತರ ನಮ್ಮ ಸಮುದಾಯದ ಏಳಿಗೆಗೆ ವಿಶ್ವಕರ್ಮ ಪರಂಪರೆಗೆ ನಮ್ಮಗಳ ಸೇವೆ ಅನನ್ಯವಾಗಿದೆ ಎಂದರು.

ಇದೇ ವೇಳೆ ತಾಲೂಕು ಆಡಳಿತ ವತಿಯಿಂದ ವಿಶ್ವಕರ್ಮ ಗುರುವಿಗೆ ಪುಷ್ಪನಮನ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ತಾಲೂಕು ಉಪ ತಹಸಿಲ್ದಾರಾದ ಭಾಗ್ಯಮ್ಮ ಹಾಗೂ ಇಲಾಖಾಧಿಕಾರಿಗಳು ಹಾಗೂ ವಿಶ್ವಕರ್ಮ ಸಂಘದ ಪದಾಧಿಕಾರಿಗಳು ಇತರರು ಹಾಜರಿದ್ದರು .

ಇತ್ತೀಚಿನ ಸುದ್ದಿ

ಜಾಹೀರಾತು