1:19 AM Saturday16 - May 2026
ಬ್ರೇಕಿಂಗ್ ನ್ಯೂಸ್
ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ…

ಇತ್ತೀಚಿನ ಸುದ್ದಿ

ಕೋಲಾರ: ಮಕ್ಕಳಲ್ಲಿ ಹೆಚ್ಚಾಗುತ್ತಿರುವ ವೈರಲ್ ಫೀವರ್ ತಡೆಗೆ ವಿಶೇಷ ವೈದ್ಯರ ತಂಡ ರಚಿಸಿ, ನಕಲಿ ಕ್ಲಿನಿಕ್‍ಗಳಿಗೆ ಕಡಿವಾಣ ಹಾಕಲು ಆಗ್ರಹ

18/09/2021, 09:11

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಮಕ್ಕಳಲ್ಲಿ ಹೆಚ್ಚಾಗುತ್ತಿರುವ ವೈರಲ್ ಫೀವರ್ ತಡೆಗೆ ವಿಶೇಷ ವೈದ್ಯರ ತಂಡ ರಚಿಸುವ ಜತೆಗೆ ಜಿಲ್ಲೆಯಲ್ಲಿನ ನಕಲಿ ಕ್ಲಿನಿಕ್‍ಗಳಿಗೆ ಕಡಿವಾಣ ಹಾಕುವಂತೆ ಆಗ್ರಹಿಸಿ ರೈತ ಸಂಘದಿಂದ ಆರೋಗ್ಯ ಇಲಾಖೆಯ ವೈದ್ಯಾಧಿಕಾರಿ ಡಾ.ಚಂದನ್‍ಗೆ ಮನವಿ ಸಲ್ಲಿಸಲಾಯಿತು.

ಮನವಿ ಸಲ್ಲಿಸಿ ಮಾತನಾಡಿದ ರೈತಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ, ಕೊರೊನಾ 1ನೇ, 2ನೇ ಅಲೆಗಳಿಂದ ತತ್ತರಿಸಿದ್ದ ಜನರು ಇದೀಗ ಕೊಂಚ ಮಟ್ಟಿಗೆ ಚೇತರಿಕೆ ಕಾಣುತ್ತಿರುವ ಸಂದರ್ಭದಲ್ಲಿ ಈಗಾಗಲೇ ತಜ್ಞರು ನೀಡಿರುವ ಮೂರನೇ ಅಲೆಗೆ ಸಂಬಂಧಿಸಿದ ವರದಿಯು ಎಚ್ಚರಗೊಳಿಸುತ್ತಿದೆ.

ಮೂರನೇ ಅಲೆಯು ಮಕ್ಕಳ ಮೇಲೆ ಹೆಚ್ಚಿನ ಪರಿಣಾಮ ಬೀರಲಿರುವುದಾಗಿ ವರದಿಯಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ. ಇಂತಹ ಸಂದರ್ಭದಲ್ಲಿ ಜಿಲ್ಲೆಯಲ್ಲಿ ವೈರಲ್ ಫೀವರ್ ಮಕ್ಕಳಲ್ಲಿ ಕಾಣಿಸಿಕೊಂಡಿರುವುದು ಪೋಷಕರಲ್ಲಿ ಮತ್ತಷ್ಟು ಆತಂಕವನ್ನು ಉಂಟು ಮಾಡಿದೆ ಎಂದು ತಿಳಿಸಿದರು.

ಈಗಾಗಲೇ ನೂರಾರು ಮಕ್ಕಳು ವಿವಿಧ ಆಸ್ಪತ್ರೆಗಳಲ್ಲಿ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಆದರೆ, ಆರೋಗ್ಯ ಇಲಾಖೆಯಿಂದ ಯಾವುದೇ ಕ್ರಮಕೈಗೊಳ್ಳದೇ ಇರುವುದು ಖಂಡನೀಯವಾಗಿದ್ದು, ಕೂಡಲೇ ವಿಶೇಷ ವೈದ್ಯರ ತಂಡವನ್ನು ರಚಿಸಿ ಮಕ್ಕಳ ರಕ್ಷಣೆಗೆ ಅಗತ್ಯ ಕ್ರಮಕೈಗೊಳ್ಳಬೇಕಿದೆ ಎಂದು ಆಗ್ರಹಿಸಿದರು.

ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಎ.ನಳಿನಿಗೌಡ ಮಾತನಾಡಿ, ಇನ್ನು ಜಿಲ್ಲೆಯಲ್ಲಿ ನಕಲಿ ಕ್ಲಿನಿಕ್‍ಗಳ ಹಾವಳಿ ಬಗ್ಗೆ ಸಾಕಷ್ಟು ಬಾರಿ ಮನವಿ ಮೂಲಕ ದೂರು ಸಲ್ಲಿಸಿದ್ದರೂ ಪ್ರಯೋಜನವಾಗಿಲ್ಲ. ಗಡಿ ಭಾಗಗಳಲ್ಲಂತೂ ಪರಿಸ್ಥಿತಿ ಹೇಳತೀರದಾಗಿದ್ದು, ಜನರ ಜೀವಗಳ ಜೊತೆ ಚೆಲ್ಲಾಟವಾಡುತ್ತಿದ್ದರೂ ಸಂಬಂಧಪಟ್ಟ ಇಲಾಖೆಯವರು ಮೌನಕ್ಕೆ ಶರಣಾಗಿರುವುದು ಸರಿಯಲ್ಲ.

ಈಗಾಗಲೇ ಮಕ್ಕಳಲ್ಲಿ ವೈರಲ್ ಫೀವರ್ ಕಾಣಿಸಿಕೊಂಡಿದ್ದು, ಆರೋಗ್ಯ ಇಲಾಖೆಯಿಂದ ಸೂಕ್ತ ಕ್ರಮಕೈಗೊಳ್ಳದ ಹಿನ್ನೆಲೆಯಲ್ಲಿ ಗ್ರಾಮೀಣ ಭಾಗದ ಜನರು ವಿಧಿಯಿಲ್ಲದೆ ನಕಲಿ ಕ್ಲಿನಿಕ್‍ಗಳ ಮೊರೆ ಹೋಗಬೇಕಾಗಿದೆ. ಹೀಗಾಗಿ ವಿಶೇಷ ವೈದ್ಯರ ತಂಡ ರಚನೆ ಮಾಡುವ ಜೊತೆಗೆ ನಕಲಿ ಕ್ಲಿನಿಕ್‍ಗಳಿಗೆ ಕಡಿವಾಣ ಹಾಕಿ ಜನರ ಆರೋಗ್ಯ ರಕ್ಷಣೆಗೆ ಮುಂದಾಗಬೇಕೆಂದು ಆಗ್ರಹಿಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ಡಾ.ಚಂದನ್, ತಮ್ಮ ಮನವಿಯನ್ನು ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ಅಗತ್ಯ ಕ್ರಮಕೈಗೊಳ್ಳುವ ಭರವಸೆ ನೀಡಿದರು.

ಮನವಿ ನೀಡುವಾಗ ಜಿಲ್ಲಾಧ್ಯಕ್ಷ ಐತಾಂಡಹಳ್ಳಿ ಮಂಜುನಾಥ್, ತಾಲೂಕು ಅಧ್ಯಕ್ಷ ಈಕಂಬಳ್ಳಿ ಮಂಜುನಾಥ್, ವಕ್ಕಲೇರಿ ಹನುಮಯ್ಯ, ಮಂಗಸಂದ್ರ ನಾಗೇಶ್, ತಿಮ್ಮಣ್ಣ, ಮಾಲೂರು ತಾಲೂಕು ಅಧ್ಯಕ್ಷ ಮಾಸ್ತಿ ವೆಂಕಟೇಶ್, ಬೂದಿಕೋಟೆ ಅಧ್ಯಕ್ಷ ನಾಗಯ್ಯ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು