6:13 AM Thursday6 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಕೊಡಗು: ಜೂ.25 ರವರೆಗೆ ಎಲ್ಲ ವಿಧದ ವಾಹನಗಳ ಸಂಚಾರಕ್ಕೆ ಅವಕಾಶ

16/06/2026, 20:51

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕೊಡಗು ಜಿಲ್ಲೆಯಲ್ಲಿ ಈಗಾಗಲೇ ಮುಂಗಾರು ಮಳೆ ಪ್ರಾರಂಭವಾಗಿದ್ದು, ಮಳೆಯ ಪ್ರಮಾಣ ಹೆಚ್ಚಾದಲ್ಲಿ ನೆಲದಲ್ಲಿ ತೇವಾಂಶ ಅಧಿಕವಾಗಿ, ಅಧಿಕ ಭಾರದ ವಾಹನಗಳು ಸಂಚರಿಸಿದಲ್ಲಿ ಭೂ ಕುಸಿತ ಉಂಟಾಗಿ ಅನಾಹುತಗಳಾಗುವ ಸಾಧ್ಯತೆ ಹೆಚ್ಚಿರುವುದರಿಂದ ಜಿಲ್ಲೆಯ ರಸ್ತೆಗಳು, ಸಾರ್ವಜನಿಕ ಆಸ್ತಿ-ಪಾಸ್ತಿ ರಕ್ಷಣೆ ಹಾಗೂ ಪ್ರಯಾಣಿಕರ ಮತ್ತು ಸಾರ್ವಜನಿಕರ ಸುರಕ್ಷತೆಯ ಹಿತದೃಷ್ಟಿಯಿಂದ ಕರ್ನಾಟಕ ಪೊಲೀಸ್ ಕಾಯ್ದೆ 1963ರ ವಿಧಿ 31 ಮತ್ತು ಇತರೆ ಸಂಬಂಧಿತ ಕಾಯ್ದೆಗಳಡಿ ದತ್ತವಾದ ಅಧಿಕಾರದಂತೆ ಕೊಡಗು ಜಿಲ್ಲೆಯಾದ್ಯಂತ ಜೂನ್, 10ರಿಂದ ಜುಲೈ 9 ರವರೆಗೆ ಮರಳು ಮತ್ತು ಮರದ ದಿಮ್ಮಿಗಳ ಸಾಗಾಣಿಕೆ ಹಾಗೂ ಭಾರೀ ವಾಹನಗಳ ಸಂಚಾರ ನಿಷೇಧಿಸಲಾಗಿತ್ತು.
ಆದರೆ, ಪ್ರಸ್ತುತ ಕೋರಿಕೆಯಂತೆ ಹಾಗೂ ಹಾಲಿ ಜಿಲ್ಲೆಯಲ್ಲಿನ ಹವಾಮಾನ ಪರಿಸ್ಥಿತಿಯನ್ನು ಅವಲೋಕಿಸಿ, ಭಾಗಶಃ ಮಾರ್ಪಡಿಸಿ ಎಲ್ಲಾ ವಿಧದ ವಾಹನಗಳ ಸಂಚಾರಕ್ಕೆ ಜೂನ್, 25 ರವರೆಗೆ ಅವಕಾಶ ನೀಡಿದೆ. ಉಳಿದಂತೆ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಜಿಲ್ಲಾ ದಂಡಾಧಿಕಾರಿ ಹಾಗೂ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರಾದ ಎಸ್.ಜೆ.ಸೋಮಶೇಖರ್ ಅವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು