4:36 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ ಮತದ ಮೇಲೆ ಎಚ್‌ಡಿಕೆ ಕಣ್ಣು!

17/06/2026, 19:43

ಬೆಂಗಳೂರು(reporterkarnataka.com):ನಾಳೆ ನಡೆಯಲಿರುವ ಮಹತ್ವದ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ರಾಜಕಾರಣದಲ್ಲಿ ಮತ್ತೆ ‘ರೆಸಾರ್ಟ್ ರಾಜಕೀಯ’ದ ಸದ್ದು ಜೋರಾಗಿದೆ. ಕ್ರಾಸ್ ವೋಟಿಂಗ್ ಭೀತಿ ಹಾಗೂ ಆಂತರಿಕ ಭಿನ್ನಮತ ತಡೆಯಲು ಮುನ್ನೆಚ್ಚರಿಕಾ ಕ್ರಮ ಕೈಗೊಂಡಿರುವ ಜೆಡಿಎಸ್(JDS) ತನ್ನ ಪಕ್ಷದ ಎಲ್ಲಾ 16 ಶಾಸಕರನ್ನು ಬೆಂಗಳೂರು ಹೊರವಲಯದ ದೇವನಹಳ್ಳಿ ಬಳಿಯಿರುವ ಖಾಸಗಿ ರೆಸಾರ್ಟ್‌ಗೆ ಶಿಫ್ಟ್ ಮಾಡಿದೆ. ಇಂದು ರಾತ್ರಿ ರೆಸಾರ್ಟ್‌ನಲ್ಲೇ ಶಾಸಕರ ವಾಸ್ತವ್ಯ ಚುನಾವಣಾ ತಂತ್ರಗಾರಿಕೆಯ ಭಾಗವಾಗಿ ಜೆಡಿಎಸ್‌ನ 16 ಶಾಸಕರು ಈಗಾಗಲೇ ದೇವನಹಳ್ಳಿಯ ರೆಸಾರ್ಟ್ ತಲುಪಿದ್ದು, ಅಲ್ಲಿಯೇ ಬಿಡುಬಿಟ್ಟಿದ್ದಾರೆ. ಇಂದು ಇಡೀ ರಾತ್ರಿ ಶಾಸಕರು ರೆಸಾರ್ಟ್‌ನಲ್ಲೇ ವಾಸ್ತವ್ಯ ಹೂಡಲಿದ್ದು, ನಾಳೆ ಬೆಳಗ್ಗೆ ಪರೀಕ್ಷೆಯ ದಿನದಂತೆ ಒಟ್ಟಾಗಿಯೇ ವಿಧಾನಸೌಧಕ್ಕೆ ಮತದಾನ ಮಾಡಲು ಆಗಮಿಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

*ಜನಾರ್ದನ ರೆಡ್ಡಿ ಮತ ಸೆಳೆಯಲು ಜೆಡಿಎಸ್ ಮಾಸ್ಟರ್ ಪ್ಲಾನ್!:*
ಈ ಬಾರಿಯ ಪರಿಷತ್ ಚುನಾವಣೆಯಲ್ಲಿ ಪ್ರತಿಯೊಂದು ಮತವೂ ಅತ್ಯಂತ ನಿರ್ಣಾಯಕವಾಗಿದ್ದು, ಗಂಗಾವತಿ ಶಾಸಕ ಜಿ. ಜನಾರ್ದನ ರೆಡ್ಡಿ ಅವರ ಮತವನ್ನು ತಮ್ಮ ಮೈತ್ರಿಕೂಟದ ಅಭ್ಯರ್ಥಿ ಪರವಾಗಿ ಸೆಳೆಯಲು ಜೆಡಿಎಸ್ ಭರ್ಜರಿ ತಂತ್ರ ರೂಪಿಸಿದೆ. ಜನಾರ್ದನ ರೆಡ್ಡಿ ಅವರ ಬೆಂಬಲವನ್ನು ಸಂಪೂರ್ಣವಾಗಿ ಕ್ರೋಢೀಕರಿಸಲು ಜೆಡಿಎಸ್‌ನ ಉನ್ನತ ನಾಯಕರು ಈಗಾಗಲೇ ತೆರೆಮರೆಯಲ್ಲಿ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು