10:39 AM Tuesday23 - June 2026
ಬ್ರೇಕಿಂಗ್ ನ್ಯೂಸ್
ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್…

ಇತ್ತೀಚಿನ ಸುದ್ದಿ

ಕನ್ನಡ ಭಾಷೆ ಬಲ್ಲವರನ್ನೇ ಬ್ಯಾಂಕ್ ಗಳಲ್ಲಿ ನೇಮಿಸಿ: ಕೂಡ್ಲಗಿಯಲ್ಲಿ ಕರವೇ ಆಗ್ರಹ; ಹಿಂದಿ ಹೇರಿಕೆಗೆ ಖಂಡನೆ

18/09/2021, 09:21

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com 

ಜಿಲ್ಲೆಯ ಕೂಡ್ಲಿಗಿ ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಇರುವ ಎಲ್ಲ ಬ್ಯಾಂಕ್ ಗಳಲ್ಲಿ ಕನ್ನಡ ಭಾಷೆಯಲ್ಲಿ ವ್ಯವಹರಿಸುವಂತಹ ಸಿಬ್ಬಂದಿ ನೇಮಿಸಿಕೊಳ್ಳುವಂತೆ ಒತ್ತಾಯಿಸಿ ಹಾಗೂ ಹಿಂದಿ ಭಾಷೆಯನ್ನು ಖಡ್ಡಾಯವಾಗಿಸಿ ಹೊರೆಯಾಗಿಸಿ ಹೇರುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ(ಕರವೇ) ಕೂಡ್ಲಿಗಿ ಪಟ್ಟಣದ ಬ್ಯಾಂಕ್ ಶಾಖೆಗಳ ಮುಂದೆ ಘಟಕದಿಂದ ಪ್ರತಿಭಟಿಸಿ ಹಕ್ಕೊತ್ತಾಯ ಮಾಡಲಾಯಿತು.

ಬ್ಯಾಂಕುಗಳಲ್ಲಿ ಗ್ರಾಹಕರ ಮೇಲಾಗುತ್ತಿರುವ ಹಿಂದಿ ಭಾಷಾ ಹೇರಿಕೆ ದೌರ್ಜನ್ಯವನ್ನು ನಿಲ್ಲಿಸಬೇಕೆಂದು ಕರ್ನಾಟಕ ಹಿತರಕ್ಷಣಾ ವೇದಿಕೆಯ ನಾರಾಯಣ ಗೌಡ ಬಣ ಆಗ್ರಹಿಸಿತು. ಕರವೇ ಮುಖಂಡರು ಪಟ್ಟಣದ ಭಾರತೀಯ ಸ್ಟೇಟ್ ಬ್ಯಾಂಕ್ ಕೂಡ್ಲಿಗಿ ಶಾಖೆಯ ಮುಂದೆ ಪ್ರತಿಭಟಿಸಿ ಮಾತನಾಡಿ, ಭಾರತ್ ಒಕ್ಕೂಟ ಸರ್ಕಾರವು ಪ್ರತಿವವರ್ಷ ಸೆಪ್ಟೆಂಬರ್ 14ರಂದು ಹಿಂದಿ ದಿವಸ್ ಎಂದು ಆಚರಣೆ ಮಾಡುತ್ತಿದ್ದು, ಅದನ್ನು ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣಗೌಡ ಬಣ ಸತತ ಇಪ್ಪತ್ತು ವರ್ಷಗಳಿಂದ,”ಹಿಂದಿ ದಿವಸ್” ನ್ನು ವಿರೋಧಿಸಿ ಖಂಡಿಸುತ್ತಿದೆ. ಹಿಂದಿ ಭಾಷೆಗೆ ಅನಗತ್ಯ ಮಹತ್ವ ನೀಡಿ ಅನ್ಯ ಭಾಷೆಗಳನ್ನು ಕಡೆಗಣಿಸಲಾಗುತ್ತಿದ್ದು, ಕನ್ನಡಿಗರ ತೆರಿಗೆ ಹಣದಲ್ಲಿ “ಹಿಂದಿ ದಿವಸ್” ಆಚರಣೆಯನ್ನು ಆಚರಿಸುತ್ತಿರುವುದನ್ನು ವಿರೋಧಿಸುತ್ತೇವೆ ಎಂದರು. 

ಕರ್ನಾಟಕದ ಬ್ಯಾಂಕುಗಳಲ್ಲಿ ಕನ್ನಡ ವ್ಯವಹಾರ ಭಾಷೆಗೆ ಪ್ರಾಧನ್ಯತೆ ನೀಡಬೇಕು, ಬ್ಯಾಂಕ್ ಸಿಬ್ಬಂದಿ ಹಿಂದಿ ಭಾಷೆಯನ್ನು ಗ್ರಾಹಕರ ಮೇಲೆ ಹೇರುವುದು ಖಂಡನೀಯ ಎಂದು ಅವರು ಆಕ್ರೊಶ ವ್ಯಕ್ತಪಡಸಿದರು.                                                 
ಕರವೇ ಬೇಡಿಕೆ: ಬ್ಯಾಂಕುಗಳಲ್ಲಿ ಎಲ್ಲ ವ್ಯವಹಾರ ಮತ್ತು ಸೇವೆಗಳು ಕನ್ನಡದಲ್ಲಿರಬೇಕು. ಬೇರೆ ರಾಜ್ಯದ ಉದ್ಯೋಗಿಗಳನ್ನು ಅವರವರ ರಾಜ್ಯಕ್ಕೆ ವರ್ಗಾಯಿಸಿ ಕರ್ನಾಟಕದ ಬ್ಯಾಂಕುಗಳಲ್ಲಿ ಕನ್ನಡಿಗರನ್ನೇ ನೇಮಿಸಬೇಕು, ಚಲನ್, ಖಾತೆ ಪುಸ್ತಕ, ಚೆಕ್ ಮತ್ತು ಎಲ್ಲಾ ಅರ್ಜಿನಮೂನೆಗಳು ಕನ್ನಡದಲ್ಲಿರಬೇಕು, ಹಿಂದಿ ದಿವಸ್, ಹಿಂದಿ ಸಪ್ತಾಹ, ಹಿಂದಿ ಪಕ್ವಾಡ ಎಂಬಿತ್ಯಾದಿ ಭಾಷಾ ಒಕ್ಕೂಟದ ವಿರೋಧಿ ಆಚರಣೆ ಕೂಡಲೇ ನಿಲ್ಲಬೇಕು, ಬ್ಯಾಂಕಿನ ನಾಮಫಲಕ ಮತ್ತು ಸೂಚನಾ ಫಲಕದಲ್ಲಿ ಶೇ. 60ರಷ್ಟು ಭಾಗ ಕನ್ನಡ ಭಾಷೆಯನ್ನೇ ಬಳಸಬೇಕು ಎಂಬ ಹಕ್ಕೊತ್ತಾಯದ ಪತ್ರವನ್ನು ಕೂಡ್ಲಿಗಿ ಭಾರತೀಯ ಸ್ಟೇಟ್ ಬ್ಯಾಂಕ್ ವ್ಯವಸ್ಥಾಪಕರಿಗೆ ಕರ್ನಾಟಕ ರಕ್ಷಣಾವೇದಿಕೆ ಸಲ್ಲಿಸಿತು. ಇದರಂತೆ ಪಟ್ಟಣದ ವಿವಿದ ಬ್ಯಾಂಕ್ ಶಾಖೆಗಳ ವ್ಯವಸ್ಥಾಪಕರಿಗೂ ಕರವೇಯಿಂದ ನೀಡಲಾಯಿತು. ಈ ಸಂದರ್ಭದಲ್ಲಿ ಕೂಡ್ಲಿಗಿ ಪ. ಪಂ ಸದಸ್ಯಸೈಯದ್ ಶುಕೂರ್, ಸಾಲುಮನಿ ರಾಘವೇಂದ್ರ,ಮೊರಬದ ವೀರಭದ್ರಪ್ಪ, ಹೆಗ್ಡಾಳ್ ಶಿವು, ಮಹೇಶ, ಬ್ಯಾಳಿ ತಿಪ್ಪೇಸ್ವಾಮಿ  ಹಾಗೂ ಚಂದ್ರು,ಅಬ್ದುಲ್ಲಾ, ದೊಡ್ಡ ಶೇಷಪ್ಪ, ದೊಡ್ಡಟ್ಟಿ ನಾಗಪ್ಪ, ಚಂದ್ರಪ್ಪ, ಸೇರಿದಂತೆ ಮತ್ತಿತರರು ಇದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು