3:24 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ ಸುರಕ್ಷತೆಗೆ ಹೆಚ್ಚಿನ ಆದ್ಯತೆ

18/06/2026, 15:16

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕೊಡಗು ಜಿಲ್ಲೆಯ ದುಬಾರೆಯಲ್ಲಿ ಸಂಭವಿಸಿದ ಆನೆ ಹಾಗೂ ಪ್ರವಾಸಿ ಮಹಿಳೆಯ ದುರಂತದ ಬೆನ್ನಲ್ಲೇ ಕರ್ನಾಟಕ ಅರಣ್ಯ ಇಲಾಖೆಯು ಆನೆ ಶಿಬಿರಗಳಿಗೆ ಹೊಸ ಸುರಕ್ಷತಾ ನಿಯಮಾವಳಿ ಜಾರಿಗೊಳಿಸಿದ್ದು, ಇನ್ನು ಮುಂದೆ ಪ್ರವಾಸಿಗರು ಆನೆಗಳಿಂದ ಕನಿಷ್ಠ 30 ಅಡಿ ಸುರಕ್ಷಿತ ಅಂತರ ಕಾಯ್ದುಕೊಳ್ಳುವುದು ಕಡ್ಡಾಯವಾಗಿದೆ. ಪ್ರವಾಸಿಗರು ಗುರುತಿಸಲಾದ ಗ್ರೀನ್ ಝೋನ್ (ವೀಕ್ಷಣಾ ಪ್ರದೇಶ)ನಲ್ಲೇ ನಿಂತು ಆನೆಗಳನ್ನು ವೀಕ್ಷಿಸಬೇಕಿದ್ದು, ಹೊಸ ನಿಯಮಗಳ ಅನ್ವಯ ಶಿಬಿರಗಳಲ್ಲಿ ಏನೇನು ಬದಲಾವಣೆ ಆಗಲಿದೆ ಎಂಬ ಮಾಹಿತಿ ಇಲ್ಲಿದೆ.
ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ನಿರ್ವಹಣಾ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗಾಗಿ ಕರ್ನಾಟಕ ಅರಣ್ಯ ಇಲಾಖೆ ಮೊದಲ ಬಾರಿಗೆ ಕರ್ನಾಟಕ ಆನೆ ಶಿಬಿರ ಸುರಕ್ಷತಾ ನಿಯಮಾವಳಿ (Karnataka Elephant Camp Safety Protocol) ಜಾರಿಗೊಳಿಸಿದೆ. ಇದರನ್ವಯ ಇನ್ನು ಮುಂದೆ ಪ್ರವಾಸಿಗರು ಆನೆಗಳನ್ನು ವೀಕ್ಷಿಸಲು ಕನಿಷ್ಠ 30 ಅಡಿ ಅಂತರ ಕಾಯ್ದುಕೊಳ್ಳಬೇಕು. ಆನೆಗಳಿಗೆ ಸ್ನಾನ ಮಾಡಿಸುವುದು, ಮುಟ್ಟುವುದು ಅಥವಾ ಆಹಾರ ನೀಡುವುದು ಸಂಪೂರ್ಣ ನಿಷೇಧವಾಗಿರಲಿದೆ.
ಪ್ರವಾಸಿಗರು ಗುರುತಿಸಲಾದ ಗ್ರೀನ್ ಝೋನ್ (ವೀಕ್ಷಣಾ ಪ್ರದೇಶ)ನಲ್ಲೇ ನಿಂತು ಆನೆಗಳನ್ನು ವೀಕ್ಷಿಸಬೇಕು. ಆನೆಗಳು ಹಾಗೂ ಪ್ರವಾಸಿಗರ ಚಟುವಟಿಕೆಗಳನ್ನು ಸಿಸಿಟಿವಿ ಕ್ಯಾಮೆರಾಗಳ ಮೂಲಕ ಮೇಲ್ವಿಚಾರಣೆ ಮಾಡಿ ದಾಖಲಿಸಲಾಗುತ್ತದೆ. ಸಾರ್ವಜನಿಕ ವೀಕ್ಷಣೆಗಾಗಿ ಯಾವುದೇ ಶಿಬಿರದಲ್ಲಿ 10ಕ್ಕಿಂತ ಹೆಚ್ಚು ಆನೆಗಳನ್ನು ಪ್ರದರ್ಶಿಸಲು ಅವಕಾಶ ಇರುವುದಿಲ್ಲ.

*ದುಬಾರೆ ದುರಂತದ ಬಳಿಕ ಹೊಸ ನಿಯಮ:*
ಮೇ 19ರಂದು ದುಬಾರೆ ಆನೆ ಶಿಬಿರದಲ್ಲಿ ತಮಿಳುನಾಡಿನ ಪ್ರವಾಸಿಗರೊಬ್ಬರು ಮೃತಪಟ್ಟಿದ್ದ ಘಟನೆ ಹಿನ್ನೆಲೆಯಲ್ಲಿ ಈ ಸುರಕ್ಷತಾ ನಿಯಮಾವಳಿಯನ್ನು ಜಾರಿಗೊಳಿಸಲಾಗಿದೆ. ಶಿಬಿರಗಳಿಗೆ ನಿಯಮಗಳನ್ನು ಪಾಲಿಸಲು 15 ದಿನಗಳ ಗಡುವು ನೀಡಲಾಗಿದೆ. ಬಳಿಕ ಪರಿಶೀಲನೆ ನಡೆಸಿ ಪ್ರಮಾಣೀಕರಣ ನೀಡಲಾಗುವುದು. ಅನುಮತಿ ಸಿಗುವವರೆಗೆ ಶಿಬಿರಗಳ ಕಾರ್ಯಾಚರಣೆಗೆ ಅವಕಾಶ ಇರುವುದಿಲ್ಲ ಎಂದು ಅರಣ್ಯ ಇಲಾಖೆಯ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ವನ್ಯಜೀವಿ) ಕುಮಾರ್ ಪುಷ್ಕರ್ ಅವರು, ತಿಳಿಸಿದ್ದಾರೆ.
ಪ್ರವಾಸಿಗರಿಗೆ ಸಮಯ ಹಾಗೂ ಸಂಖ್ಯಾ ಮಿತಿ
ಹೊಸ ನಿಯಮಗಳ ಅನ್ವಯ ಶಿಬಿರದ ಸಾಮರ್ಥ್ಯ, ಆನೆಗಳ ಸಂಖ್ಯೆ ಹಾಗೂ ಪ್ರವಾಸಿಗರ ದಟ್ಟಣೆ ಆಧರಿಸಿ ಪ್ರವಾಸಿಗರ ಬ್ಯಾಚ್‌ಗಳು ಹಾಗೂ ಸಮಯ ನಿಗದಿಪಡಿಸಲಾಗುತ್ತದೆ. ಗ್ರೀನ್ ಝೋನ್‌ನಲ್ಲಿ ಒಂದೇ ಸಮಯದಲ್ಲಿ 50ರಿಂದ 75 ಪ್ರವಾಸಿಗರಿಗೆ ಮಾತ್ರ ಅವಕಾಶ ಇರಲಿದ್ದು, ವೀಕ್ಷಣಾ ಅವಧಿ 20 ರಿಂದ 30 ನಿಮಿಷಕ್ಕೆ ಸೀಮಿತವಾಗಿರಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು