3:29 AM Friday14 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ ತೀರ್ಮಾನ

19/06/2026, 21:17

ಬೆಂಗಳೂರು(reporterkarnataka.com): ರಾಜ್ಯದ ಐದು ಗ್ಯಾರಂಟಿ ಯೋಜನೆಗಳ ಸೌಲಭ್ಯ ಪಡೆಯುತ್ತಿರುವ ಲಕ್ಷಾಂತರ ಫಲಾನುಭವಿಗಳಿಗೆ ಡಿ.ಕೆ. ಶಿವಕುಮಾರ್‌ ನೇತೃತ್ವದ ಸರ್ಕಾರ ದೊಡ್ಡ ಸಮಾಧಾನಕರ ಸುದ್ದಿಯೊಂದನ್ನು ನೀಡಿದೆ. ಗ್ಯಾರಂಟಿ ಯೋಜನೆಗಳ ನಿಯಮಾವಳಿಗಳ ಪರಿಷ್ಕರಣೆಗಾಗಿ ಯಾವುದೇ ಫಲಾನುಭವಿಯೂ ಮತ್ತೊಮ್ಮೆ ಹೊಸದಾಗಿ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ ಎಂಬ ಅತ್ಯಂತ ಪ್ರಮುಖ ತೀರ್ಮಾನವನ್ನು ಸರ್ಕಾರ ಕೈಗೊಂಡಿದೆ. ಜನರಿಗೆ ನೆಮ್ಮದಿ ನೀಡಿದ ಸರ್ಕಾರದ ನಿರ್ಧಾರ
ಗ್ಯಾರಂಟಿ ಯೋಜನೆಗಳ ಸಮಗ್ರ ಪರಿಷ್ಕರಣೆ ಪೂರ್ವಭಾವಿಯಾಗಿ ಮುಖ್ಯಮಂತ್ರಿಗಳು ಶುಕ್ರವಾರ ವಿಧಾನಸೌಧದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ಪದಾಧಿಕಾರಿಗಳು ಹಾಗೂ ಉನ್ನತ ಮಟ್ಟದ ಅಧಿಕಾರಿಗಳ ಜೊತೆ ಮಹತ್ವದ ಪೂರ್ವಭಾವಿ ಸಭೆ ನಡೆಸಿದರು. ಈ ಸಭೆಯಲ್ಲಿ ಸಾರ್ವಜನಿಕರಿಗೆ ಅನಗತ್ಯ ತೊಂದರೆ ನೀಡುವುದನ್ನು ತಪ್ಪಿಸಲು ಮರು ಅರ್ಜಿ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೈಬಿಡಲು ನಿರ್ಧರಿಸಲಾಯಿತು. ಇದರ ಬದಲಾಗಿ, ಪ್ರಸ್ತುತ ಸೌಲಭ್ಯ ಪಡೆಯುತ್ತಿರುವ ಹಾಲಿ ಫಲಾನುಭವಿಗಳ ದಾಖಲೆಗಳು ಹಾಗೂ ಅರ್ಹತೆಗಳನ್ನು ಆಡಳಿತಾತ್ಮಕ ಮಟ್ಟದಲ್ಲೇ ಮರುಪರಿಶೀಲನೆ ಮಾಡಲು ಸರ್ಕಾರ ಮುಂದಾಗಿದೆ.
ಈಗಾಗಲೇ ಗ್ಯಾರಂಟಿ ಹಣ ಪಡೆಯುತ್ತಿರುವವರ ಪೈಕಿ ಯಾರು ಅರ್ಹರು ಮತ್ತು ಯಾರು ಅನರ್ಹರು ಎಂಬುದನ್ನು ಪತ್ತೆಹಚ್ಚಲು ಈ ಪರಿಶೀಲನೆ ನಡೆಸಲಾಗುತ್ತಿದೆ. ಆದರೆ, ಈ ಮರುಪರಿಶೀಲನಾ ಪ್ರಕ್ರಿಯೆಯನ್ನು ಯಾವ ಇಲಾಖೆಯ ಅಧಿಕಾರಿಗಳು ನಡೆಸಬೇಕು ಹಾಗೂ ಯಾವ ಮಾನದಂಡಗಳ ಆಧಾರದ ಮೇಲೆ ಜಾರಿಗೊಳಿಸಬೇಕು ಎಂಬುದರ ಕುರಿತು ಸಂಪೂರ್ಣ ರೂಪುರೇಷೆ ಸಿದ್ಧಪಡಿಸಲು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಈ ಕುರಿತಾದ ಅಂತಿಮ ಮಾರ್ಗಸೂಚಿಯನ್ನು ಮುಂಬರುವ ಮೂರು ದಿನಗಳ ಒಳಗಾಗಿ ಸಿದ್ಧಪಡಿಸಿ ತಮಗೆ ಸಲ್ಲಿಸಬೇಕು ಎಂದು ಸಿಎಂ ಗಡುವು ವಿಧಿಸಿದ್ದಾರೆ. ಇದರಿಂದಾಗಿ ಸಾರ್ವಜನಿಕರು ಮತ್ತೊಮ್ಮೆ ಸೈಬರ್ ಸೆಂಟರ್‌ಗಳ ಮುಂದೆ ಸಾಲು ನಿಲ್ಲುವ ಆತಂಕ ದೂರಾದಂತಾಗಿದೆ.

*ಈ ರಾಜ್ಯದ ಯೋಜನೆಗಳು ನಮ್ಮ ನೆಲದ ಫಲಾನುಭವಿಗಳಿಗೆ ಮಾತ್ರ ಸಿಗಲಿ:*
ಗೃಹಜ್ಯೋತಿ ಯೋಜನೆ ಜಾರಿಯಾಗುವಾಗ ವಹಿಸಿದ್ದ ಕಟ್ಟುನಿಟ್ಟಿನ ಮುನ್ನೆಚ್ಚರಿಕೆಯನ್ನು ಇತರೆ ಯೋಜನೆಗಳಲ್ಲೂ ಅನುಸರಿಸಿದ್ದರೆ ದುರುಪಯೋಗ ತಡೆಯಬಹುದಿತ್ತು ಎಂದ ಸಿಎಂ, ಬ್ಯಾಂಕ್ ಸಾಲದ ಕಾರಣಕ್ಕಾಗಿ ಖಾತೆ ಬದಲಾಯಿಸಿರುವ ಗೃಹಿಣಿಯರಿಗೆ ತೊಂದರೆ ನೀಡದಂತೆ ತಿಳಿಸಿದರು. ಹಾಗೆಯೇ ಹಣ ಜಮೆಯಾದ ತಕ್ಷಣ ಮಹಿಳೆಯರ ಮೊಬೈಲ್‌ಗೆ ವಾಯ್ಸ್ ಮೆಸೇಜ್ ಕಳುಹಿಸುವ ವ್ಯವಸ್ಥೆ ಜಾರಿಗೆ ತರಲು ಸೂಚಿಸಿದ ಅವರು, ಆರ್ಥಿಕವಾಗಿ ಸಬಲರಾಗಿರುವ ಯಾರಾದರೂ ಸ್ವಯಂಪ್ರೇರಿತರಾಗಿ ಗ್ಯಾರಂಟಿ ಬಿಟ್ಟುಕೊಟ್ಟರೆ ಅಂಥವರನ್ನು ಪ್ರೋತ್ಸಾಹಿಸಬೇಕು ಎಂದರು. ಇದೇ ವೇಳೆ ಕೇಂದ್ರ ಸರ್ಕಾರದ ತಪ್ಪು ನೀತಿಗಳಿಂದಾಗಿ ಬಡವರು ಮತ್ತು ಮಧ್ಯಮ ವರ್ಗದವರ ಮೇಲೆ ಬೀಳುತ್ತಿರುವ ಬೆಲೆ ಏರಿಕೆಯ ಬಿಸಿ ಹಾಗೂ ದೇಶದ ತಲಾ ಆದಾಯ ಕುಸಿತದ ಬಗ್ಗೆಯೂ ಸಭೆಯಲ್ಲಿ ಕಳವಳ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು