3:45 PM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಬಿಜೆಪಿ ಶಾಸಕರಿಗೆ ಧರ್ಮಸ್ಥಳದಲ್ಲಿ ‘ಅಗ್ನಿ ಪರೀಕ್ಷೆ’?: ಅಡ್ಡ ಮತದಾನ ಮಾಡಿದವರ ಕಂಡು ಹಿಡಿಯಲು ಮಂಜುನಾಥನಿಗೆ ಮೊರೆ?

21/06/2026, 13:22

ಬೆಂಗಳೂರು(reporterkarnataka.com):ವಿಧಾನ ಪರಿಷತ್‌ ಚುನಾವಣೆ ರಾಜ್ಯ ರಾಜಕಾರಣದಲ್ಲಿ ಕ್ರಾಸ್ ವೋಟಿಂಗ್ ಬಿರುಗಾಳಿ ಎಬ್ಬಿಸಿದೆ. ಅಡ್ಡ ಮತದಾನವನ್ನು ಗಂಭೀರವಾಗಿ ಪರಿಗಣಿಸಿದ ಬಿಜೆಪಿ, ಇದೀಗ ಅಡ್ಡ ಮತದಾನದ ಮಾಡಿದವರನ್ನ ಕಂಡು ಹಿಡಿಯಲು ಧರ್ಮಸ್ಥಳ ಮಂಜುನಾಥನ ಮೊರೆ ಹೋಗ್ತಿದ್ದಾರೆ.ಧರ್ಮಸ್ಥಳದಲ್ಲೇ ಶಾಸಕಾಂಗ ಸಭೆ ಆಯೋಜಿಸಿದ್ದು, ತಮ್ಮ ಪಕ್ಷದ ಶಾಸಕರಿಂದ ಆಣೆ ಪ್ರಮಾಣ ಮಾಡಿಸಲು ಬಿಜೆಪಿ ನಾಯಕರು ಮುಂದಾಗಿದೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.

*ಕ್ರಾಸ್ ವೋಟಿಂಗ್ ಮಾಡಿದ್ಯಾರು?:*
ಶಾಸಕರ ಅಡ್ಡ ಮತದಾನ ರಾಜ್ಯ ಬಿಜೆಪಿ ನಾಯಕರಿಗೆ ದೊಡ್ಡ ತಲೆಬಿಸಿ ತಂದಿದೆ. ಕ್ರಾಸ್ ವೋಟಿಂಗ್ ಮಾಡುವವರನ್ನ ಪತ್ತೆ ಹಚ್ಚಲು ಸಮಿತಿ ರಚಿಸಲಾಗಿದೆ. ಇದರ ನಡುವೆಯೇ ಪಕ್ಷದಲ್ಲೇ ಇದ್ದುಕೊಂಡು ಕ್ರಾಸ್ ವೋಟಿಂಗ್ ಮಾಡಿದವರು ಯಾರು ಅನ್ನೋದನ್ನ ಕಂಡು ಹಿಡಿಯಲು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ವಿಪಕ್ಷ ನಾಯಕ ಆರ್ ಅಶೋಕ್ ಕಸರತ್ತು ನಡೆಸಿದ್ದಾರೆ.

*ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಸಭೆ:*
ಅಡ್ಡ ಮತದಾನದ ಬಗ್ಗೆ ಹೈಕಮಾಂಡ್ ವರದಿ ಕೇಳಿದ್ದು, ರಾಜ್ಯ ನಾಯಕರು ಟೆನ್ಷನ್ ಆಗಿದ್ದಾರೆ. ಹೀಗಾಗಿ ಗೆರೆ ದಾಟಿದವರು ಯಾರು ಅಂತ ಕಂಡು ಹಿಡಿಯಲು ಬಿಜೆಪಿ ನಾಯಕರು ಧರ್ಮಸ್ಥಳ ಮಂಜುನಾಥನ ಮೊರೆ ಹೋಗ್ತಿದ್ದಾರೆ. ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಿಗದಿ ಮಾಡಿದ್ದಾರೆ.

*ಅಡ್ಡ ಮತದಾನ ಮಾಡಿಲ್ಲ ಅಂತ ಆಣೆ ಮಾಡಿ*
ಎಲ್ಲಾ ಶಾಸಕರನ್ನ ಧರ್ಮಸ್ಥಳಕ್ಕೆ ಕರೆದುಕೊಂಡು ಹೋಗಲು ಬಿಜೆಪಿ ನಾಯಕರು ಮುಂದಾಗಿದ್ದು, ಅಲ್ಲೇ ಅಡ್ಡ ಮತದಾನ ಮಾಡಿಲ್ಲ ಅಂತ ಮಂಜುನಾಥ ಸ್ವಾಮಿ ಮೇಲೆ ಆಣೆ ಮಾಡಿಸಲು ಬಿಜೆಪಿ ನಾಯಕರು ಮುಂದಾಗಿದ್ದಾರೆ.

*ಕ್ರಾಸ್ ವೋಟಿಂಗ್ ಬಗ್ಗೆ ಒಪ್ಪಿಕೊಳ್ತಿಲ್ಲ:*
ಅಡ್ಡ ಮತದಾನ ಮಾಡಿರೋ ಬಗ್ಗೆ ಬಿಜೆಪಿ ನಾಯಕರು ಕೆಲ ಶಾಸಕರ ಮೇಲೆ ಅನುಮಾನ ವ್ಯಕ್ತಪಡಿಸಿದ್ದಾರೆ. ಆದ್ರೆ ಆ ಶಾಸಕರು ಮಾತ್ರ ನಾವು ಅಡ್ಡಮತದಾನ ಮಾಡಿಲ್ಲ ಎಂದು ವಾದ ಮಾಡ್ತಿದ್ದಾರೆ. ಹೀಗಾಗಿ ಬಿಜೆಪಿ ನಾಯಕರು ಮಂಜುನಾಥಸ್ವಾಮಿ ಮೇಲೆ ಆಣೆ ಮಾಡಿಸಿ ಕ್ರಾಸ್ ವೋಟಿಂಗ್ ಮಾಡಿದ ಶಾಸಕರ ಪತ್ತೆ ಹಚ್ಚಲು ಬಿಜೆಪಿ ಮುಂದಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು