11:07 PM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಮಸ್ಕಿ ತಾಲೂಕಿನ ಎಲ್ಲ ಗ್ರಾಮ ಪಂಚಾಯಿತಿ ಮಟ್ಟದಲ್ಲಿ  ಕೊರೊನಾ ಟಾಸ್ಕ್ ಫೋರ್ಸ್ ಸಭೆ: ಗ್ರಾಮಸ್ಥರಿಗೆ ಮಾಹಿತಿ

24/05/2021, 18:45

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ಜಿಲ್ಲಾ ಆಡಳಿತ ಹಾಗೂ ತಾಲೂಕು ಆಡಳಿತ ಆದೇಶದಂತೆ ಮಸ್ಕಿ ತಾಲೂಕಿನ ಮೆದಿಕಿನಾಳ, ತಲೆಕಾನ್, ಮಾರಲದಿನ್ನಿ, ಅಡವಿಭಾವಿ, ಮಸ್ಕಿ, ಹಾಲಾಪುರ, ಸಂತೆಕೆಲ್ಲೂರು, ಗುಡದೂರು, ಉದ್ಬಾಳ, ಗೌಡನಬಾವಿ, ತೋರಣದಿನ್ನಿ, ಹಿರೆದಿನ್ನಿ , ಮಲ್ಲದಗುಡ್ಡ, ಗುಂಡ ಸೇರಿದಂತೆ ಅನೇಕ ಗ್ರಾಮ ಪಂಚಾಯಿತಿಗಳಲ್ಲಿ ಸೋಮವಾರ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಟಾಸ್ಕ್ ಫೋರ್ಸ್ ಸಭೆ ಸಂಪೂರ್ಣವಾಗಿ ನೆರವೇರಿತು. 

ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರು ಸಮ್ಮುಖದಲ್ಲಿ ಕಾರ್ಯಕ್ರಮ ಆರಂಭಿಸಲಾಯಿತು. ಆರೋಗ್ಯ ಇಲಾಖೆ ವೈದ್ಯಾಧಿಕಾರಿ, ಮೇಲ್ವಿಚಾರು, ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

 ಈ ಎರಡನೇ ಅಲೆ ಪ್ರತಿ ಗ್ರಾಮಗಳಲ್ಲಿ ಹೆಚ್ಚಾಗಿ ಕೊರೊನಾ ಕಾಣಿಸಿಕೊಳ್ಳುತ್ತಿದ್ದು, ಯಾರಿಗಾದರೂ ಕೆಮ್ಮು ನಗಡಿ ಜ್ವರ ಬಂದ ವ್ಯಕ್ತಿಗಳನ್ನು ಗುರುತಿಸಿ ಅವರನ್ನು ಚಿಕಿತ್ಸೆಗೆ ಒಳಪಡಿಸಿ ಸರಕಾರದ ಆದೇಶದಂತೆ ಜಿಲ್ಲಾ ಆಡಳಿತ ತಾಲೂಕು ಆಡಳಿತದಲ್ಲಿ ನಾವು ಪಂಚಾಯಿತಿ ಮಟ್ಟದ ಸಭೆ ಮಾಡಿ ಸಾರ್ವಜನಿಕರಿಗೆ ಮುನ್ನೆಚ್ಚರಿಕೆ ಸರಕಾರದ ಆದೇಶ ಅವರಿಗೆ ತಿಳಿಸಬೇಕು. ಹೆಚ್ಚಿನ ನಿಗಾವಹಿಸುವುದಾಗಿ ಅಭಿವೃದ್ಧಿ ಅಧಿಕಾರಿ ತಿಳಿಸಿದರು. ಒಂದು ಗ್ರಾಮೀಣ ಮಟ್ಟದಲ್ಲಿ ಯಾರಿಗಾದರೂ ಕೋರೋನಾ ಕಾಣಿಸಿಕೊಂಡರು ಅವರು ಮುಚ್ಚಿಡುವ ಪ್ರಯತ್ನ ಮಾಡುತ್ತಾರೆ. ಹೀಗೆ ಮುತ್ತಿಡುವುದರಿಂದ ಗ್ರಾಮೀಣ ಭಾಗದಲ್ಲಿ ಜಾಸ್ತಿ ಜನರಿಗೆ ಹರಡುವ ಸಾಧ್ಯತೆಯಿದ್ದು, ಅಂತವರನ್ನು ಕೋವಿಡ್ ಸೆಂಟರಿಗೆ ತಿಳಿಸಿಕೊಡಲಾಗುವುದು. ಅವರಿಗೆ ಅಲ್ಲಿ ಎಲ್ಲಾ ಸೌಕರ್ಯ ವ್ಯವಸ್ಥೆ ಮಾಡಲಾಗುತ್ತದೆ ಎಂದು ತಿಳಿಸಿದರು.

ಸಾಮಾಜಿಕ ಅಂತರ ಕಾಪಾಡುವುದು, ಪ್ರತಿಯೊಬ್ಬರೂ ಮಾಸ್ಕ್ ಧರಿಸ ಜೀವ ರಕ್ಷಿಸಿ ಕೊಳ್ಳಬೇಕು. ಸ್ಯಾನಿಟರಿ ನಿಂದ ಆಗಾಗ ಕೈ ತೊಳೆಯ ಎಂದು ಹೇಳಿದರು.

 ಈ ಸಂದರ್ಭ ದಲ್ಲಿ ಊರಿನ ಮುಖಂಡರು, ಪೋಲಿಸ ಅಧಿಕಾರಿಗಳು, ಅಭಿವೃದ್ಧಿ ಅಧಿಕಾರಿಗಳಾದ ತಿಮ್ಮಣ್ಣ ಬೋವಿ, ಸುರೇಶ್ ಪಾಟೀಲ್, ಕನಳ ತಿಮ್ಮನಗೌಡ ಪಾಟೀಲ್ 

ಹಡಗಲಿ, ಕೃಷ್ಣ ಹುನಗುಂದ, ಮುದುಕಪ್ಪ, ಅಭಿವೃದ್ಧಿ ಅಧಿಕಾರಿ ಶರಣೆ ಗೌಡ, ಅಂದ್ರಾ ಳ ಮಂಜುನಾಥ್ , ಜಾವೂರ್ ಲಕ್ಷ್ಮಿ ಕಾಂತ್ ಮೆದಿಕಿನಾಳ, ಮಲ್ಲಿಕಾರ್ಜುನ್ ಗುಡದೂರು, ಸಂದೇಶ್ ಮಲ್ಲದಗುಡ್ಡ, ಬಸವಲಿಂಗಪ್ಪ ಗೌಡ, ಹೊಸ ಗೌಡ, ವಿಜಯಶ್ರೀ ಬೋವಿ ಸೇರಿದಂತೆ ಇನ್ನಿತರರು ಎಲ್ಲಾ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕಾರ್ಯಕ್ರಮ ನೆರವೇರಿಸಿದರು.

ಗ್ರಾಮ ಪಂಚಾಯಿತಿ ಅಂಕುಶದೊಡ್ಡಿ ಟಾಸ್ಕಪೊರ್ಸ ಸಭೆ ಯಶಸ್ವಿಯಾಗಿ ಜರುಗಿಸಲಾಯಿತು . ಸರಕಾರದ ಆದೆಶವನ್ನು ಮತ್ತು ನಿಯಮಗಳನ್ನು ಕಟ್ಟುನಿಟ್ಟಾಗಿ ಜರುಗಿಸಲು ಎಲ್ರು ಮುಂದಾಗಬೆಕು ತಿಳಿಸಲಾಯಿತು. ಎಲ್ಲ ಟಾಸ್ಕಪೊರ್ಸ ಸದಸ್ಯರಿಗಳಿಗೆ ಸ್ಯಾನಿಟೈಜರ್ ಹಾಗೂ ಎನ್ 95
ಮಾಸ್ಕ್ ತರಿಸಲಾಯಿತು. 

ಇತ್ತೀಚಿನ ಸುದ್ದಿ

ಜಾಹೀರಾತು