3:37 AM Saturday19 - April 2025
ಬ್ರೇಕಿಂಗ್ ನ್ಯೂಸ್
Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್…

ಇತ್ತೀಚಿನ ಸುದ್ದಿ

ಬೆಂಗಳೂರು ಆರ್ಟ್ಸ್‌ ಆ್ಯಂಡ್ ಕ್ರಾಫ್ಟ್‌ ಕರಕುಶಲ ವಸ್ತುಗಳ ಪ್ರದರ್ಶನ- ಮಾರಾಟ ಮೇಳಕ್ಕೆ ಚಾಲನೆ: ನಟಿ ಚಂದನಾ ಉದ್ಘಾಟನೆ

18/09/2021, 15:47

ಬೆಂಗಳೂರು(reporterkarnataka.com):  ಬೆಂಗಳೂರು ಆರ್ಟ್ಸ್‌ ಆ್ಯಂಡ್ ಕ್ರಾಫ್ಟ್‌ ಕರಕುಶಲ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಮೇಳಕ್ಕೆ ನಟಿ ಚಂದನ ರಾಘವೇಂದ್ರ ಶನಿವಾರ ಚಾಲನೆ ನೀಡಿದರು. 


ಕೊರೊನಾ ಸಾಂಕ್ರಮಿಕ ಹಾಗೂ ಲಾಕ್‌ಡೌನ್‌ ನಿಂದ ಮನೆಯಲ್ಲಿಯೇ ಇದ್ದು ಬೋರ್‌ ಆಗಿರುವ ಜನರಿಗೆ ಉತ್ತಮ ಶಾಪಿಂಗ್‌ ನ ಅವಕಾಶ ದೊರಕಿಸಿಕೊಡುವ ನಿಟ್ಟಿನಲ್ಲಿ ಸೆಪ್ಟೆಂಬರ್‌ 17ರಿಂದ 26 ರ ವರೆಗೆ ಕರ್ನಾಟಕ ಚಿತ್ರಕಲಾ ಪರಿಷತ್‌ ಆವರಣದಲ್ಲಿ ಬೆಳಗ್ಗೆ 11 ರಿಂದ ಸಂಜೆ 7 ಗಂಟೆಯವರೆಗೆ ಮೇಳ ಆಯೋಜಿಸಲಾಗಿದೆ.


ಕೊರೊನಾ ಲಾಕ್‌ಡೌನ್‌ ನಿಂದಾಗಿ ಮನೆಯಲ್ಲಿಯೇ ಇದ್ದು ಬೋರ್‌ ಆಗಿರುವ ಜನರ ಶಾಪಿಂಗ್‌ ಥೆರಪಿಗೆ ಬೇಕಾಗಿರುವ ಎಲ್ಲ ರೀತಿಯ ವ್ಯವಸ್ಥೆಗಳನ್ನು ಇಲ್ಲಿ ಕಲ್ಪಿಸಲಾಗಿದೆ. ಅಲಂಕಾರಿಕ ವಸ್ತುಗಳ ಜತೆಯಲ್ಲಿಯೇ ಮನೆ ಮಂದಿಗೆ ಬೇಕಾಗಿರುವ ಬಟ್ಟೆಗಳು ಹಾಗೂ ಇನ್ನಿತರೆ ವಸ್ತುಗಳನ್ನು ಕೊಳ್ಳಬಹುದಾಗಿದೆ. 80ಕ್ಕೂ ಹೆಚ್ಚು ಅಂಗಡಿಗಳಿದ್ದು ದೇಶದ ಎಲ್ಲ ಭಾಗಗಳಿಂದ ಆಗಮಿಸಿರುವ ಕಲಾವಿದರುಗಳು ತಮ್ಮ ಕಲೆಯನ್ನು ಪ್ರದರ್ಶನಕ್ಕೆ ಇಡಲಿದ್ದಾರೆ. ಮಣ್ಣು, ಕಲ್ಲು, ಮರ ಹಾಗೂ ಲೋಹಗಳನ್ನು ಬಳಸಿ ತಯಾರಿಸಿರುವ ಗೊಂಬೆಗಳು ಪ್ರಮುಖ ಆಕರ್ಷಣೆಯಾಗಿರಲಿವೆ. ಇದರ ಜತೆಯಲ್ಲಿಯೇ, ದೇಶದ ವಿವಿಧ ಮೂಲೆಗಳ ಕಲಾವಿದರ ಕಲಾಕೃತಿಗಳು ಹಾಗೂ ಉತ್ಪನ್ನಗಳು ನೇರವಾಗಿ ಜನರಿಗೆ ತಲುಪಲಿವೆ. ನಿಮ್ಮ ಮನೆಯ ಗಾರ್ಡನ್‌ ಅಲಂಕರಿಸಲು, ನಿಮಗೊಪ್ಪುವ ಹ್ಯಾಂಡ್‌ ಲೂಮ್‌ ಸ್ಯಾರಿಯನ್ನು ಸೆಲೆಕ್ಟ್‌ ಮಾಡಲು, ಕುರ್ತಿಗಳು ಮತ್ತು ಆಭರಣಗಳನ್ನು ಕೊಳ್ಳಲು ಅತ್ಯುತ್ತಮ ಮೇಳ ಇದಾಗಿರಲಿದೆ ಎಂದು ನಟಿ ಚಂದನಾ ರಾಘವೇಂದ್ರ ತಿಳಿಸಿದರು. 


ಈ ಮೇಳದಲ್ಲಿ ದೇಶದ ವಿವಿಧ ಭಾಗಗಳ ಕರಕುಶಲಕಾರರು ತಯಾರಿಸಿದ ತರಹೇವಾರಿ ಕರಕುಶಲ ವಸ್ತುಗಳು, ಆಟಿಕೆಗಳು, ಉಡುಪುಗಳು ಸೇರಿದಂತೆ ರಾಜಧಾನಿ ಬೆಂಗಳೂರಿನ ಜನತೆಗೆ ಮುದ ನೀಡುವಂತಹ ಉತ್ಪನ್ನಗಳು ಒಂದೇ ಸೂರಿನಡಿ ದೊರೆಯುತ್ತವೆ. ಮನೆಯನ್ನು ಅಲಂಕಾರ ಮಾಡುವ ಉತ್ಪನ್ನಗಳು, ಹ್ಯಾಂಡ್‍ಲೂಂಗಳು, ಕರಕುಶಲ ವಸ್ತುಗಳು, ಬಟ್ಟೆ, ಮರದ ಆಟಿಕೆಗಳು, ಹೆಂಗಳೆಯರ ಆಕರ್ಷಣೆಗೆಂದು ಆಭರಣಗಳು, ಬೆಡ್ ಲೈನೆನ್, ಕಲಾಕೃತಿಗಳು, ಪೀಠೋಪಕರಣಗಳು, ಮ್ಯಾಟ್‍ಗಳು, ಪಿಂಗಾಣಿ ವಸ್ತುಗಳು ಸೇರಿದಂತೆ ನೂರಾರು ಬಗೆಯ ಉತ್ಪನ್ನಗಳು ಈ ಪ್ರದರ್ಶನದಲ್ಲಿರಲಿವೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 96118 35597

ಇತ್ತೀಚಿನ ಸುದ್ದಿ

ಜಾಹೀರಾತು